• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಸಮ್ಮೇಳನ ಗೋಷ್ಠಿಯಲ್ಲಿ ಕೇಳುಗರ ಹೃದಯ ಗೆದ್ದ ಕಥೆಗಾರರು
ಶಿವಮೊಗ್ಗ ನಗರದ ಸಾಹಿತ್ಯ ಗ್ರಾಮದಲ್ಲಿ 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನ ಶುಕ್ರವಾರದ ಕಾರ್ಯಕ್ರಮದಲ್ಲಿ ಕಥೆಗಾರರು ತಮ್ಮ ಅನುಭವದ ಹೂರಣವನ್ನು ಕಥೆಗಳ ಮೂಲಕ ಕೇಳುಗರನ್ನು ತಲುಪಿದರು. ಕಲ್ಪನೆಯ ಸನ್ನಿವೇಶಗಳಲ್ಲಿ ಆಗಾಗ್ಗೆ ಬರುತ್ತಿದ್ದ ನವಿರಾದ ಹಾಸ್ಯ, ಗಂಭೀರತೆಗಳೊಂದಿಗೆ ಸಮ್ಮೇಳನದ ಗೋಷ್ಠಿಗೆ ಹೊಸತನದ ಚಿಂತನೆ ಮೂಡಿಸಿತು. ಖ್ಯಾತ ಲೇಖಕ ಕಲೀಂ ಉಲ್ಲಾ ತಾವು ರಚಿಸಿದ 'ಪ್ರೇಮ ಪತ್ರಗಳು' ಕಥೆ, ಶಿಕ್ಷಕಿ ನೇತ್ರಾವತಿ ರಚಿಸಿದ 'ಸೋಜಿಗ', ಅಧ್ಯಾಪಕ ಡಾ.ಲವ ರಚಿಸಿದ 'ದ್ವಾಪರ', ಎನ್ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ. ನೃಪತುಂಗ ರಚಿಸಿದ 'ಅಡಿಕೆ ಕೊನೆ', ಸಾಗರದ ಪರಮೇಶ್ವರ ಕರೂರು ರಚಿಸಿದ 'ಅಪ್ಪನ ಕಾಗೆ', ಲೇಖಕ ಸೂರ್ಯಪ್ರಕಾಶ್ ರಚಿಸಿದ 'ಉತ್ಸವ' ಕಥೆಗಳು ಕೇಳುಗರ ಮನಸೂರೆಗೊಂಡಿತು.
ತುಂಗಭದ್ರಾ ಸಕ್ಕರೆ ಕಾರ್ಖಾನೆ ಜಾಗ ಸರ್ವೆಗೆ ಗ್ರಾಮಸ್ಥರ ವಿರೋಧ
ಶಿವಮೊಗ್ಗದ ಮಲವಗೊಪ್ಪ ಗ್ರಾಮದಲ್ಲಿ ಶುಕ್ರವಾರ ಸರ್ವೆಗೆ ಮುಂದಾಗಿದ್ದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಗ್ರಾಮಸ್ಥರ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಆರ್‌ಐ ಮತ್ತು ವಿಎಒ ಸರ್ವೆ ಕಾರ್ಯ ನಿಲ್ಲಿಸಿದರು. ತುಂಗಭದ್ರ ಸಕ್ಕರೆ ಕಾರ್ಖನೆ ಜಾಗದ ವಿವಾದ ಕುರಿತು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟ್‌ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆಗೆ ಮುಂದಾಗಿದ್ದರು. ಕಂದಾಯ ನಿರೀಕ್ಷಕ ಮತ್ತು ಗ್ರಾಮ ಆಡಳಿತಾಧಿಕಾರಿ (ವಿಎಒ) ಸರ್ವೆ ಕಾರ್ಯ ಆರಂಭಿಸಿದ್ದರು. ಈ ವೇಳೆ ಸರ್ವೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಅಧಿಕಾರಿಗಳ ಜೊತೆಗೆ ಮಾತಿನ ಚಕಮಕಿ ನಡೆಸಿದರು.
ತ್ಯಾವರೆಕೊಪ್ಪ ಸಫಾರಿಯ ಲಯನ್‌ ಸರ್ವೇಶ ಇನ್ನಿಲ್ಲ
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ 13 ವರ್ಷದ ಸಿಂಹ ಸರ್ವೇಶ ಗುರುವಾರ ಬೆಳಗ್ಗೆ ಸಾವು ಕಂಡಿದೆ. ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಶಿಫ್ಟ್ ಆಗಿದ್ದ ಸಿಂಹ ಸರ್ವೇಶ ಕಳೆದ 4 ವರ್ಷಗಳಿಂದ ಲಯನ್ ಸಫಾರಿಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಕಾಣಿಸಿಕೊಂಡಿತ್ತು.
ಸಮಕಾಲಿಕ, ವಾಸ್ತವಿಕ, ವಿಕಸಿತ ಭಾರತಕ್ಕೆ ಪೂರಕ ಬಜೆಟ್
ಲೋಕಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಜನಪ್ರಿಯ ಘೋಷಣೆಗಳ ಮೊರೆಹೋಗುತ್ತದೆ ಎಂದು ಪ್ರತಿಪಕ್ಷಗಳು ಭಾವಿಸಿದ್ದವು. ಆದರೆ, ಪ್ರಧಾನಿ ನರೇಂದ್ರ ಮೋದಿ ಜನಪ್ರಿಯ ಘೋಷಣೆಗಳಿಂದ‌ ದೇಶದ ಆರ್ಥಿಕತೆ ಹಾಳಾಗುತ್ತದೆ ಎಂಬುದನ್ನು ಮನಗಂಡು ದೇಶದ ಭವಿಷ್ಯಕ್ಕೆ ಪೂರಕವಾದ ಮಧ್ಯಂತರ ಬಜೆಟ್‌ಗೆ ಒತ್ತು ನೀಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಡಾ.ಪದ್ಮಪ್ರಸಾದ್ ಕೃತಿಗಳಲ್ಲಿ ಬದಲಾವಣೆಗಳ ಭರವಸೆ
ಕರುಳ ಸಂಬಂಧದ ಜನಶೀಲತೆಯನ್ನು ಸಮ್ಮೆಳನಾದ್ಯಕ್ಷ ಡಾ. ಎಸ್.ಪಿ. ಪದ್ಮಪ್ರಸಾದ್ ಅವರ ಬರಹದಲ್ಲಿ ಕಾಣಬಹುದು. ಸಾಹಿತಿ ಪದ್ಮಪ್ರಸಾದ್ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳಲ್ಲಿ ಬದಲಾವಣೆಗಳ ಭರವಸೆ ಇದೆ. ಸತ್ಯಗಳ ಅನ್ವೇಷಣೆ ಇದೆ. ಪ್ರತಿಫಲಾಪೇಕ್ಷೆ ಇಲ್ಲ. ಕೆರಳಿಸುವ ಇಂದಿನ ದಿನಗಳಲ್ಲಿ ಅರಳುಸುವ ಸಾಹಿತ್ಯ ಅವರದು ಎಂದು ಉಪನ್ಯಾಸಕ ಡಾ.ಶ್ರೀಪತಿ ಹಳಗುಂದ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಟ್ರಾಫಿಕ್ ಪೊಲೀಸರಿಗೆ ರೌಡಿಶೀಟರ್ ಕಿರಿಕ್: ಸುಮೋಟೋ ಪ್ರಕರಣ ದಾಖಲು
ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಶೀಟರ್‌ಗಳು ಪೊಲೀಸರಿಗೆ ಕಿರಿಕ್‌ ಮಾಡಿರುವ ಘಟನೆ ಶಿವಮೊಗ್ಗದ ಬಿ.ಎಚ್. ರಸ್ತೆಯ ಕರ್ನಾಟಕ ಸಂಘ ಬಳಿ ನಡೆದಿದ್ದು, ಈ ವಿಡಿಯೋ ವೈರಲ್‌ ಆಗಿದೆ.
ಸಂವಿಧಾನ ಆಶ್ರಯದಲ್ಲಿ ಎಲ್ಲರೂ ಸುಖಿಗಳು: ಸಾಹಿತಿ ಮುಕುಂದರಾಜ್‌
ಕಳೆದು ಹೋಗುತ್ತಿರುವ ಸಂವಿಧಾನದ ಮೌಲ್ಯಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡಬೇಕಾದ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಸಂವಿಧಾನದ ಆಶ್ರಯದಲ್ಲಿ ನಾವೆಲ್ಲರೂ ಸುಖವಾಗಿದ್ದೇವೆ. ನಮಗೆ ಸಾರ್ವಭೌಮತ್ವ ಒದಗಿಸಿರುವ ಸಂವಿಧಾನಕ್ಕೆ ಕುತ್ತು ಬರುವಂತಹ ಪರಿಸ್ಥಿತಿಯಲ್ಲಿದ್ದೇವೆ. ಸ್ವಾತಂತ್ರ್ಯ ಪಡೆದ ವಿಚಾರಗಳನ್ನು ಸಂಭ್ರಮಿಸುವಾಗ ಸ್ವಾತಂತ್ರ್ಯ ಕಳೆದುಕೊಂಡದ್ದು ಯಾವಾಗ ಎಂದು ವಿಮರ್ಶಿಸಿಕೊಳ್ಳಬೇಕಿದೆ ಎಂದು ಸಾಹಿತಿ ಎಲ್.ಎನ್. ಮುಕುಂದರಾಜ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ನಾಳೆ ಎಡತೊರೆ ಶ್ರೀಗಳಿಗೆ ಗುರುವಂದನಾ ಕಾರ್ಯಕ್ರಮ: ಅಶ್ವಿನಿಕುಮಾರ್‌
ನಾಡಿನ ಯತಿಶ್ರೇಷ್ಠರಲ್ಲಿ ಒಬ್ಬರಾದ ಎಡತೊರೆ ಶ್ರೀ ಶಂಕರ ಭಾರತಿ ಮಹಾಸ್ವಾಮಿಗಳು ಫೆ.3ರಂದು ತಮ್ಮ ವಿಜಯಯಾತ್ರೆಯನ್ನು ಸಾಗರದಲ್ಲಿ ಸಮಾಪ್ತಿಗೊಳಿಸಲಿದ್ದಾರೆ. ಅಂದು ಸಂಜೆ 5.30ಕ್ಕೆ ಪಟ್ಟಣದ ಶೃಂಗೇರಿ ಶಂಕರ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶೃಂಗೇರಿ ಶಂಕರ ಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಸಾಗರದಲ್ಲಿ ಹೇಳಿದ್ದಾರೆ.
ಸಾರಿಗೆ ಬಸ್‌ ಸುಟ್ಟ ಪ್ರಕರಣ: 29ಕ್ಕೆ ವಿಚಾರಣೆ ಮುಂದೂಡಿಕೆ
ಶಂಕಿತ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರ ಶಿವಮೊಗ್ಗ ಜಿಲ್ಲೆಯಲ್ಲಿನ ಮೂರನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪುನಃ ಅವರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮುಂದಿನ ವಿಚಾರಣೆಯನ್ನು ಫೆ.29ಕ್ಕೆ ಮುಂದೂಡಲಾಗಿದ್ದು, ಈ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 2009ರಲ್ಲಿ ತೀರ್ಥಹಳ್ಳಿ ತಾಲೂಕು ಹೊಸಗದ್ದೆ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದರು.
ನನ್ನ ಚಳವಳಿಗಳಿಗೆ ಲಂಕೇಶ್‌, ತೇಜಸ್ವಿ ದಾರಿದೀವಿಗೆ
ಕವಿ. ಸಾಹಿತಿಗಳ ವೈಚಾರಿಕ ಚಿಂತನೆ ಅಳವಡಿಸಿಕೊಂಡು ಸಾಮಾಜಿಕ ಬದುಕಿನ ವಿಸ್ತಾರತೆ ಕಟ್ಟಿಕೊಂಡು ಶಿಕ್ಷಕ ವೃತ್ತಿ ಜೊತೆಗೆ ಸಾಮಾಜಿಕ ಪ್ರಜ್ಞೆಯೊಂದಿಗೆ ಸಾಹಿತ್ಯಾಸಕ್ತಿ ಬೆಳೆಸಿಕೊಂಡಿದ್ದೇನೆ. ತಮ್ಮನ್ನು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಇದರಿಂದ ಓದು ಮತ್ತು ಬರೆಯುವ ಆಸಕ್ತಿ ಇಮ್ಮಡಿಗೊಂಡಿದೆ. ಸಾಹಿತಿ, ಪತ್ರಕರ್ತ ಪಿ.ಲಂಕೇಶ್ ಅವರ ಸಾಮಾಜಿಕ ಕಳಕಳಿಯ ಲೇಖನ ಮತ್ತು ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ವೈಚಾರಿಕ ಕಥನಗಳು ನನ್ನ ಹಲವು ಚಳವಳಿಗಳ ಹೆಜ್ಜೆಗಳಿಗೆ ದಾರಿ ದೀವಿಗೆಯಾಗಿವೆ ಎಂದು ಸಮಾಜ ಚಿಂತಕ ಟಿ.ರಾಜಪ್ಪ ಮಾಸ್ತರ್ ಸೊರಬದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved