• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾತಿಯಲ್ಲಿ 15 ಸಾವಿರ ಲಾಡು ವಿತರಣೆ, ಕರಸೇವಕರಿಗೆ ಸನ್ಮಾನ
ಭದ್ರಾವತಿಯಲ್ಲಿಯೂ ಸೋಮವಾರ ಅಯೋಧ್ಯೆ ಹಬ್ಬದ ಸಂಭ್ರಮ. ರಾಮಮಂದಿರ ಲೋಕಾರ್ಪಣೆ ಹಾಗೂ ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಎಲ್ಲೆಡೆ ಹಬ್ಬದ ವಾತಾವರಣ ಕಂಡುಬಂದಿತು. ದೇಗುಲಗಳಲ್ಲಿ ಅಭಿಷೇಕ, ವಿಶೇಷ ಪೂಜೆ, ಹೋಮ-ಹವನ ನಡೆದವು. 15 ಸಾವಿರ ಲಾಡು ವಿತರಣೆ ಹಾಗೂ ಕರಸೇವಕರಿಗೆ ಗೌರವ ಸಮರ್ಪಣೆ ಸಂಪನ್ನಗೊಂಡಿತು.
ಕೈ ನಡಿಗೆಯಲ್ಲಿ ಬಾಲರಾಮನ ದರ್ಶನ ಪಡೆದ ಭಕ್ತ
ಅಯೋಧ್ಯೆ ರಾಮಮಂದಿರ ಉದ್ಘಾಟನೆ, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಭಕ್ತರು ಇನ್ನಿಲ್ಲದಂಥ ಹರಕೆಗಳನ್ನು ಹೊತ್ತು ಸಾಗುತ್ತಿದ್ದಾರೆ. ಸೋಮವಾರ ಸಾಗರದ ರಾಮನಗರ ಬಡಾವಣೆಯ ರಾಮಭಕ್ತ ಪ್ರಭು ಪಾದಗಳ ಬದಲಿಗೆ ಕೈಯಲ್ಲಿಯೇ (ತಲೆಕೆಳಗಾಗಿ) ನಡೆದು ರಾಮದೇವರ ದರ್ಶನ ಪಡೆಯುವ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ.
ಸಾಗರದಲ್ಲೂ ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಸಂಭ್ರಮ
ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಸೋಮವಾರ ಸಾಗರ ತಾಲೂಕಿನಾದ್ಯಂತ ಸಂಭ್ರಮಾಚರಣೆ ಕಂಡುಬಂತು. ಮನೆ ಮನೆಗಳಲ್ಲಿ ರಾಮೋತ್ಸವ ನಡೆಯಿತು. ಹಲವು ಕಡೆಗಳಲ್ಲಿ ಶ್ರೀರಾಮನ ಉತ್ಸವಮೂರ್ತಿ ಮೆರವಣಿಗೆ, ರಾಮಸಂಕೀರ್ತನೆ ನಡೆಯಿತು. ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಮತಾರಕ ಹವನ, ಅನ್ನ ಸಂತರ್ಪಣೆ ನಡೆಯಿತು. ವಿವಿಧ ಸಂಘಟನೆಗಳಿಂದ ಪಾನಕ, ಕೋಸಂಬರಿ, ಸಿಹಿತಿಂಡಿ ವಿತರಿಸಲಾಯಿತು.
ಜಿಲ್ಲಾದ್ಯಂತ ರಾಮಧ್ಯಾನ: ಎಲ್ಲೆಲ್ಲೂ ಪೂಜೆ, ಹೋಮ, ಪ್ರಸಾದ
ಅಯೋಧ್ಯೆಯಲ್ಲಿ ಸೋಮವಾರ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆ ಶಿವಮೊಗ್ಗ ಜಿಲ್ಲಾದ್ಯಂತ ವಿಶೇಷ ಪೂಜೆ, ಪುನಸ್ಕಾರದ ಮೂಲಕ ಭಕ್ತರು ರಾಮನಾಮ ಜಪವನ್ನು ಮೊಳಗಿಸಿದರು. ನಗರದಲ್ಲಿ ಗಲ್ಲಿ ಗಲ್ಲಿಯಲ್ಲಿಯೂ ರಾಮೋತ್ಸವ ನಡೆಯಿತು. ಬೆಳಗ್ಗಿನಿಂದಲೇ ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಯ ಭಕ್ತಿ ಹಾಗೂ ಸಂಭ್ರಮ ಜಿಲ್ಲೆಯಲ್ಲೂ ಮುಗಿಲುಮುಟ್ಟಿತ್ತು. ನಗರದ ಎಲ್ಲ ದೇವಾಲಯಗಳಲ್ಲೂ ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿತರಣೆ ಹಮ್ಮಿಕೊಳ್ಳಲಾಗಿತ್ತು. ಬಹುತೇಕ ದೇವಾಲಯಗಳಲ್ಲಿ ರಾಮತಾರಕ ಹವನ, ಜಪಯಜ್ಞ ಮತ್ತು ಕಲಾವಿದರಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅನೇಕ ಸಂಘ ಸಂಸ್ಥೆಗಳು, ಬೀದಿ ಬೀದಿಗಳಲ್ಲಿ ಕೇಸರಿ ಬಾವುಟಗಳನ್ನು ಹಾರಿಸಿ, ಬೃಹತ್ ರಾಮಲಲ್ಲಾನ ಕಟೌಟ್‌ಗಳನ್ನು ಸ್ಥಾಪಿಸಿ ಬೆಳಗ್ಗೆಯಿಂದಲೇ ಸಾರ್ವಜನಿಕರಿಗೆ ಪಾನಕ, ಕೋಸಂಬರಿ ಮತ್ತು ಉಪಾಹಾರ ವಿತರಿಸಿದರು.
ಶಿವಮೊಗ್ಗ: ಶ್ರೀರಾಮ ಸ್ಮರಣೆ ವೇಳೆ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ ಮಹಿಳೆ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನೆಲೆ ಸಿಹಿ ಹಂಚುವ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್‌ ಎಂದು ಘೋಷಣೆ ಕೂಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆ ಮಹಿಳಾ ಮತದಾರರ ಸಂಖ್ಯೆ ಗಣನೀಯ ಏರಿಕೆ
ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಈವರೆಗೆ ನೋಂದಣಿ ಆಗಿರುವ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿದ್ದಾರೆ. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದ ಡಾ. ಆರ್.ಸೆಲ್ವಮಣಿ ಅವರು ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆ ಮತದಾರರ ಸಂಖ್ಯೆಯನ್ನು ಗಮನಿಸಿದಾಗ 20,500 ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದಿದ್ದಾರೆ.
ದೇಶ ಒಳಿಗೆ ಪ್ರಾರ್ಥನೆ ಶ್ರೀರಾಮನಿಗೆ ಪ್ರಾರ್ಥನೆ
ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರ ಕಾಂಗ್ರೆಸ್ ವತಿಯಿಂದ ಗಾಂಧಿ ಮಂದಿರದಲ್ಲಿ ಶ್ರೀರಾಮನ ಭಾವಚಿತ್ರ ಹಾಗೂ ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ವಿಶೇಷ ಪೂಜೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಕಾರ್ಯಕ್ರಮ ನಡೆಸಿ ದೇಶಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದಿದ್ದಾರೆ.
ರಾಮಲಲ್ಲಾ ಪ್ರತಿಷ್ಠಾಪನೆ: ಶಿರಾಳಕೊಪ್ಪದಲ್ಲಿ ಪೂಜೆ, ಭಜನೆ
ಅಯೋಧ್ಯೆಯಲ್ಲಿ ರಾಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಪ್ರತಿಷ್ಠಾಪನೆ ನೆರವೇರುತಿದ್ದಂತೆಯೇ ಭಕ್ತರು ಶಿರಾಳಕೊಪ್ಪ ಪಟ್ಟಣದ ರಾಮದೇವರ ದೇವಸ್ಥಾನದಲ್ಲಿ ವಿವಿಧ ಪೂಜೆ, ಪಟ್ಟಣದ ವಿವಿಧ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಂತೆ ಮೈದಾನದ ರಾಮದೇವರ ಬೀದಿಯ ರಾಮಂದಿರದಲ್ಲಿ ವಿಶೇಷ ಅಲಂಕಾರದಿಂದ ಪೂಜೆ ನಡೆಸಲಾಯಿತು. ಬೆಳಗ್ಗೆ ಹೊಂಡದ ಆಂಜನೇಯಸ್ವಾಮಿ ದೇವಾಲಯ ಬಳಿ ಭಾರಿ ಸಂಖ್ಯೆಯಲ್ಲಿ ರಾಮಭಕ್ತರು ಪಾಲ್ಗೊಂಡಿದ್ದರು. ನೂರಾರು ಮಂದಿ ಕೇಸರಿ ಬಣ್ಣದ ಸೀರಿ, ಶಾಲು ಹೊದ್ದು ಕುಂಭ, ಆರತಿ ತಟ್ಟೆಯೊಂದಿಗೆ ರಾಮದೇವರ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಬುದ್ಧಿ ಸರಿಯಾಗಿದ್ದಾಗ ಆಯುಧ ಸಮರ್ಪಕ ಬಳಕೆ ಸಾಧ್ಯ: ಎಸ್‌ಪಿ
ಬಂದೂಕಿನಂತಹ ಆಯುಧವನ್ನು ತೀರಾ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಬಳಸಬೇಕು. ಯಾವುದೇ ಆಯುಧಗಳಿಗೆ ಬುದ್ಧಿ ಇರುವುದಿಲ್ಲ. ಅದು ಯಾರ ಕೈಯಲ್ಲಿ ಇರುತ್ತದೆಯೋ ಅವರ ಬುದ್ಧಿ ಸರಿಯಾಗಿದ್ದಾಗ ಸಮರ್ಪಕ ಕೆಲಸಕ್ಕೆ ಆ ಆಯುಧ ಬಳಕೆಯಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್ ಸಾಗರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಸುಳ್ಳು ಜಾತಿ ಪ್ರಮಾಣಪತ್ರ ಪಡೆದ ಹಾವಾಡಿಗರ ವಿರುದ್ಧ ಕ್ರಮ ಜರುಗಿಸಿ
ತಾಳಗುಪ್ಪ ಹೋಬಳಿಯ ಸಿರಿವಂತೆ ಗ್ರಾಮದ ಸರ್ವೆ ನಂ.74/4ರಲ್ಲಿ ಇರುವ ಜಮೀನಿನ ಮಾಲೀಕ ಬಸವರಾಜ್ ಗೌಡರ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿರುವ ಹಾವಾಡಿಗರ ಕೇರಿಯವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಸದಸ್ಯರು ಸಾಗರ ಪಟ್ಟಣದ ಪೊಲೀಸ್ ಉಪ ಅಧೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved