• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೃದಯಾಘಾತದಿಂದ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ ನಿಧನ
ನಾಗಸಮುದ್ರದಲ್ಲಿ 1982ರ ಗೋಲಿಬಾರ್‌ ಘಟನೆ ವೇಳೆ ಭಾಗವಹಿಸಿದ್ದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗಸಮುದ್ರದ ಎಸ್.ಶಿವಮೂರ್ತಿ (65) ಹೃದಯಘಾತದಿಂದ ಶುಕ್ರವಾರ ತಡರಾತ್ರಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಅಂತ್ಯ ಸಂಸ್ಕಾರ ಶನಿವಾರ ಸಂಜೆ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು.
ಸರ್ಕಾರಿ ಶಾಲೆ ಗ್ರಾಮೀಣ ಭಾಗದ ಹಿರಿಮೆ: ಸಂಸದ ರಾಘವೇಂದ್ರ ಅಭಿಮತ
ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದ ಹಿರಿಮೆಗಳಾಗಿದ್ದು, ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾದ ಶಾಲೆಯಿಂದ ಅನೇಕ ಸಾಧಕರು ಸಮಾಜದ ಆಸ್ತಿಗಳಾಗಿ ಹೊರಹೊಮ್ಮಿದ್ದಾರೆ ಎಂದು ಸಂಸದ ಬಿ.ಎವೈ. ರಾಘವೇಂದ್ರ ಸೊರಬ ತಾಲೂಕು ಹರೀಶಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
29ರಂದು ಭದ್ರಾವತಿಯಲ್ಲಿ ಜಿಲ್ಲಾ ಸಚಿವರಿಂದ ನೂತನ ಕಟ್ಟಡಗಳ ಉದ್ಘಾಟನೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ, ಸಿದ್ಧಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಜ.29ರಂದು ಸಂಜೆ 5.30 ಗಂಟೆಗೆ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ಉದ್ಘಾಟನೆ, ಕ್ರೀಡಾ ಹಾಗೂ ಸಾಂಸ್ಕೃತಿಕ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ತು ಸದಸ್ಯ ಎಸ್.ಎಲ್. ಭೋಜೇಗೌಡ ಇನ್ನಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಸಕ ಬಿ.ಕೆ. ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿದ್ಯಾಸಂಸ್ಥೆ ಹಾಗೂ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ ಭದ್ರಾವತಿಯಲ್ಲಿ ಹೇಳಿದ್ದಾರೆ.
ಎಫ್‌ಎಂಗೆ 10 ಕಿಲೋ ವ್ಯಾಟ್ ಮಲೆನಾಡಿಗೆ ಸಿಕ್ಕ ಗೌರವ
ಶಿವಮೊಗ್ಗ ನಗರದ ಜನತೆಯ ಬಹುದಿನದ ಬೇಡಿಕೆ ಆಗಿದ್ದ ಎಫ್.ಎಂ ಕೇಂದ್ರ 10 ವ್ಯಾಟ್ ನ ಎಫ್.ಎಂ ಕೇಂದ್ರವಾಗಿ ವಿಸ್ತರಣೆ ಹೊಂದಿದೆ. 1 ಕಿಲೋ ವ್ಯಾಟ್ ಇದ್ದ ಶಿವಮೊಗ್ಗ ಭದ್ರಾವತಿ ಕೇಂದ್ರಕ್ಕೆ 10 ಕಿಲೋ ವ್ಯಾಟ್ ಸಿಕ್ಕಿರುವುದು ಮಲೆನಾಡಿಗೆ ಸಿಕ್ಕ ಗೌರವ. ಪ್ರಸಾರ ಭಾರತಿ ವತಿಯಿಂದ ಭದ್ರಾವತಿ ಆಕಾಶವಾಣಿಯಲ್ಲಿ 10 ಕಿಲೋ ವ್ಯಾಟ್ ಎಫ್.ಎಂ ಪ್ರಸರಣ ಕೇಂದ್ರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ವರ್ಚುವಲ್ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಕ್ರೀಡೆಗಳಿಗೆ ವಿಶ್ವಾದ್ಯಂತ ಉತ್ತಮ ಮಾನ್ಯತೆ: ಪ್ರತಿಭಾ
ಎಲ್ಲ ಕ್ರೀಡೆಗಳು ತನ್ನದೇ ಆದ ವೈಶಿಷ್ಠ್ಯತೆ ಹಾಗೂ ಸ್ಥಾನ ಹೊಂದಿರುತ್ತವೆ. ದೈಹಿಕವಾಗಿ ಸದೃಢವಾದ ವ್ಯಕ್ತಿಗಳು ಜೂಡೋ ಸ್ಪರ್ಧೇಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂದು ಎಂದು ಕಾಲೇಜು ಪ್ರಾಂಶುಪಾಲರಾದ ಡಾ. ಕೆ.ಆರ್. ಪ್ರತಿಭಾ ಹೊಳೆಹೊನ್ನೂರಲ್ಲಿ ಹೇಳಿದ್ದಾರೆ.
ಕೆಪಿಎಸ್‌ 3 ವರ್ಷಗಳಲ್ಲಿ ಹೈಟೆಕ್ ಸರ್ಕಾರಿ ಶಾಲೆಯಾಗಿ ಪರಿವರ್ತನೆ
ಮೂರು ವರ್ಷಗಳಲ್ಲಿ ಆನಂದಪುರ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೈಟೆಕ್ ಸರ್ಕಾರಿ ಶಾಲೆಯಾಗಲಿದೆ. ಸಂಪೂರ್ಣ ಸ್ಮಾರ್ಟ್ ಕ್ಲಾಸ್ ಮಾಡುವುದರ ಮೂಲಕ, ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ ದೊರೆಯುವುದಕ್ಕಿಂತ ಹೆಚ್ಚಿನ ಸೌಲಭ್ಯಗಳು ಸರ್ಕಾರಿ ಶಾಲೆಯಲ್ಲಿ ದೊರೆಯುವಂತಾಗಲಿದೆ ಎಂದು ರೆಕ್ಯೋ ಸಂಸ್ಥೆ ಸಿಇಒ ಪ್ರಕಾಶ್ ರುಕ್ಮಯ್ಯ ಆನಂದಪುರ ಕಾರ್ಯಕ್ರಮದಲ್ಲಿ ಭರವಸೆ ನೀಡಿದ್ದಾರೆ.
ಶ್ರೀರಾಮ ದೇಗುಲ ಮಾದರಿಯನ್ನೇ ಬಾಗಿಲಿಗೆ ಕೆತ್ತಿಸಿ ಪೂಜಿಸುವ ಕುಟುಂಬ!
ದೇಶಾದ್ಯಂತ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠಾಪನೆ ಸಡಗರ ಸಂಭ್ರಮ. ಇತ್ತ ತಾಲೂಕಿನ ಈಸೂರಿನಲ್ಲಿ 20 ವರ್ಷಗಳ ಹಿಂದೆಯೇ ಶ್ರೀರಾಮ ಮಂದಿರವನ್ನು ಮನೆಯ ಬಾಗಿಲಿನಲ್ಲಿ ಅಂದವಾಗಿ ಕೆತ್ತಿಸಿ, ಭಕ್ತಿಯಿಂದ ನಿತ್ಯ ಪೂಜಿಸಿ ಸಂಭ್ರಮಿಸುತ್ತಿರುವ ಸಂಗತಿ. ಗ್ರಾಮಸ್ಥ ಮಹಾದೇವಪ್ಪ, ಸಾವಿತ್ರಮ್ಮ ಈ ವಿಷಯದ ಕೇಂದ್ರಬಿಂದು. ಮಹಾದೇವಪ್ಪ ಅವರ ರಾಮಭಕ್ತಿಯಿಂದಾಗಿ ಮನೆ ಬಾಗಿಲಲ್ಲಿ ಕೆತ್ತನೆ ಅಯೋಧ್ಯೆ ಶ್ರೀರಾಮ ಮಂದಿರ ಕೆತ್ತನೆ ಮಾಡಲಾಗಿದ್ದು, ಪ್ರಸ್ತುತ ಮಹಾದೇವಪ್ಪ ಅವರು ಇಲ್ಲ ಎಂಬುದೇ ಕುಟುಂಬಕ್ಕೆ ಬೇಸರದ ಸಂತಿಯಾಗಿದೆ.
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಟಿಕೆಟ್‌ ನನಗೇ ಸಿಗುವ ನಿರೀಕ್ಷೆ: ಎಸ್‌.ಪಿ.ದಿನೇಶ್‌
ಮುಂಬರುವ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ನಾನು ಪ್ರಬಲ ಆಕಾಂಕ್ಷಿಯಾಗಿದ್ದು, ಟಿಕೆಟ್ ಸಿಗುವ ನಿಚ್ಚಳ ನಿರೀಕ್ಷೆ ನನಗಿದೆ. 2018ರಲ್ಲಿ ಕಡಿಮೆ ಮತಗಳ ಅಂತದಲ್ಲಿ ಸೋತಿದ್ದೆ. ಆದರೆ, ಈಗ ಬದಲಾದ ರಾಜಕೀಯ ವಾತಾವರಣದಿಂದ ನನಗೆ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ಕಾಂಗ್ರೆಸ್‌ ಮುಖಂಡ ಎಸ್‌.ಪಿ.ದಿನೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ದಲಿತರ ಏಳಿಗೆಗೆ ಶ್ರಮಿಸಿದ ಧೀಮಂತ ವ್ಯಕ್ತಿ ಪ್ರೊ. ಬಿ.ಕೃಷ್ಣಪ್ಪ
ಶೋಷಿತರ ಪರವಾಗಿ ಹೋರಾಡಲು ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ, ವಿಐಎಸ್‌ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಕಾರ್ಮಿಕರು ನೀಡಿದ ತಲಾ ₹2 ಕೆಂಪುನೋಟಿನ ಹಣದಲ್ಲಿ ಇಡೀ ರಾಜ್ಯಾದ್ಯಂತ ಸಂಘಟನೆ ವಿಸ್ತರಿಸಿದ ಮಹಾನ್‌ ಜನಪರ ಹೋರಾಟಗಾರ ಪ್ರೊ. ಬಿ.ಕೃಷ್ಣಪ್ಪ. ಅವರು ಸದಾ ಕಾಲ ದಲಿತರ ಪರ ಚಿಂತನೆಗಳಿಂದ, ಅವರ ಏಳಿಗೆಗೆ ಶ್ರಮಿಸಿದ ಧೀಮಂತ ವ್ಯಕ್ತಿ ಎಂದು ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಜಿ.ಮೂರ್ತಿ ಭದ್ರಾವತಿಯಲ್ಲಿ ಡಿಎಸ್‌ಎಸ್ ಸುವರ್ಣ ಮಹೋತ್ಸವ ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ.
ನನ್ನ ಎದೆ ಸೀಳಿದರೆ ಶ್ರೀರಾಮನೂ, ಸಿದ್ದರಾಮನೂ ಇದ್ದಾರೆ
ನಾವೂ ಹಿಂದುಗಳೇ. ಬಿಜೆಪಿಯವರು ನಮ್ಮನ್ನು ಹಿಂದು ವಿರೋಧಿಗಳು ಎಂಬ ರೀತಿ ಬಿಂಬಿಸುತ್ತಿರುವುದು ನನ್ನಂತ ಹೊಸ ತಲೆಮಾರಿನ ರಾಜಕಾರಣಿಗಳಿಗೆ ನೋವಾಗುತ್ತದೆ. ನನ್ನ ಎದೆ ಸೀಳಿದರೂ ಶ್ರೀರಾಮನಿದ್ದಾನೆ, ಸಿದ್ದರಾಮನೂ ಇದ್ದಾನೆ. ರಾಮ ಮಂದಿರ ಮೊದಲು ಓಪನ್ ಮಾಡಿಸಿದ್ದೆ ರಾಜೀವ್ ಗಾಂಧಿ ಎಂದು ಶಾಸಕ ಪ್ರದೀಪ್ ಈಶ್ವರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved