ಬಾಲಕಾರ್ಮಿಕರ ಪತ್ತೆ ಕಾರ್ಯಕ್ಕೆ ವೇಗ ನೀಡಿ : ಡಾ.ಆರ್.ಸೆಲ್ವಮಣಿಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಬಾಲಕಾರ್ಮಿಕರ ಪತ್ತೆ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಕಾರ್ಯಕ್ಕೆ ವೇಗ ನೀಡಿ ಇನ್ನಷ್ಟು ಬಾಲಕಾರ್ಮಿಕರನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ತುರ್ತು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.