• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಜಾರಿಯಾದ ಫಲವೇ ಪ್ರಜೆಗಳ ಸರ್ಕಾರ
ಪ್ರಜೆಗಳೇ ಪ್ರಭುಗಳಾದ ದಿನ ಗಣರಾಜ್ಯವಾಗಿದೆ. ದೇಶದಲ್ಲಿ ಅಂಬೇಡ್ಕರ್ ನೇತೃತ್ವದ ಸಂವಿಧಾನ ಜಾರಿಗೆ ಬಂದ ಮೇಲೆ ಪ್ರಜೆಗಳ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಂವಿಧಾನ ರಚನಾ ಸಮಿತಿಯಲ್ಲಿದ್ದ ನಾಯಕರು ಸಂವಿಧಾನ ಎಂಬ ಪೌಷ್ಟಿಕಾಂಶದಿಂದ ಭಾರತದ ಅಭಿವೃದ್ಧಿ ಎಂಬ ಮಗು ಮುಂದೆ ಸಮಗ್ರ ಏಳಿಗೆಯತ್ತ ಹೆಜ್ಜೆ ಹಾಕುತ್ತದೆ ಎಂಬ ಕಲ್ಪನೆಯಲ್ಲಿದ್ದರು. ಆ ನಿಟ್ಟಿನಲ್ಲಿ ದೇಶ ಅಭಿವೃದ್ಧಿ ಆಗಿದೆಯೇ ಎಂಬುದನ್ನು ನಾವು ಪ್ರಶ್ನಿಸಿಕೊಳ್ಳಬೇಕಿದೆ. ಸ್ವಾತಂತ್ರ್ಯ ಬಂದ ನಂತರ ಪಂಚವಾರ್ಷಿಕ ಯೋಜನೆಗಳು ದೇಶದ ಅಭಿವೃದ್ಧಿಗೆ ಸಹಕಾರ ಆಗಿದೆ ಎಂದು ತಹಸೀಲ್ದಾರ್ ಹುಸೇನ್ ಸರಕಾವಸ್ ಸೊರಬದಲ್ಲಿ ಹೇಳಿದ್ದಾರೆ.
ಜನಪರ ಸಾಹಿತಿ ನಾ.ಡಿಸೋಜ ಅವರಿಗೆ ಪಂಪ ಪ್ರಶಸ್ತಿಯ ಗರಿ
ಸಾಗರದ ಹಿರಿಯ ಸಾಹಿತಿ ಡಾ. ನಾ.ಡಿಸೋಜ ಅವರಿಗೆ ರಾಜ್ಯ ಸರ್ಕಾರ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ಘೋಷಿಸಿದೆ. ಈಗಾಗಲೇ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿರುವ ಡಿಸೋಜ ಅವರಿಗೆ ಪಂಪ ಪ್ರಶಸ್ತಿ ದೊರಕಿರುವುದು ಅವರ ಸಾಹಿತ್ಯ ಕೃಷಿಯ ಹಿರಿಮೆಯಾಗಿದೆ. ವೃತ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿರುವ 86ರ ಹರೆಯದ ಡಿಸೋಜ ಹಲವಾರು ಕತೆ, ಕಾದಂಬರಿ, ಲೇಖನಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ ಹೇಳಿಕೆ
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಆಭಿವೃದ್ಧಿ ವಿಫುಲ ಅವಕಾಶಗಳಿದ್ದು, ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಕಾಣದಿರುವುದು ಬೇಸರ ತಂದಿದೆ. ಜೋಗ, ಗುಡವಿ, ಸಕ್ರೆಬೈಲು, ಸಿಂಹಧಾಮ ಸೇರಿದಂತೆ ಅನೇಕ ಪ್ರೇಕ್ಷಣೀಯ ಮತ್ತು ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಜೊತೆಗೆ ವೈದ್ಯಕೀಯ ಪ್ರವಾಸೋದ್ಯಮ, ಕೈಗಾರಿಕಾ ಪ್ರವಾಸೋದ್ಯಮ ಮತ್ತಿತರ ಕ್ಷೇತ್ರಗಳಲ್ಲಿ ದೊರೆಯಬಹುದಾದ ಅವಕಾಶಗಳನ್ನು ಗುರುತಿಸಿ ಅಭಿವೃದ್ಧಿಗೊಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮೂರ್ನಾಲ್ಕು ಸಭೆಗಳನ್ನು ಆಯೋಜಿಸಿ ಚರ್ಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ದೇಶದಲ್ಲಿ ಒಕ್ಕೂಟ ವ್ಯವಸ್ಥೆ ಬಲವರ್ಧನೆಗೆ ಶ್ರಮಿಸಬೇಕು
ಡಾ.ಅಂಬೇಡ್ಕರ್ ನೀಡಿರುವ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ವಿವಿಧತೆಯಲ್ಲಿ ಏಕತೆ ನಮ್ಮ ದೊಡ್ಡ ಶಕ್ತಿಯಾಗಿದೆ. ನಾವು ಸಾಮರಸ್ಯದಿಂದ ಬದುಕುವ ಮೂಲಕ ಅಭಿವೃದ್ಧಿಪರವಾದ ಭಾರತದ ಸಂಕಲ್ಪವನ್ನು ಸಾಕಾರಗೊಳಿಸಬೇಕು. ಪ್ರತಿಯೊಬ್ಬರೂ ನಮ್ಮ ದೇಶದ ಒಕ್ಕೂಟ ವ್ಯವಸ್ಥೆ ಅಭಿವೃದ್ಧಿಪಡಿಸಿ, ಸದೃಢ ಭಾರತ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು ಎಂದು ಸಾಗರ ಉಪವಿಭಾಗಾಧಿಕಾರಿ ಆರ್.ಯತೀಶ್ ಹೇಳಿದ್ದಾರೆ.
ಬಳ್ಳಿಗಾವಿ ಸಮಗ್ರ ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ
ಶರಣ, ಅನುಭವ ಮಂಟಪದ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುಗಳ ಜನ್ಮಸ್ಥಳ ಬಳ್ಳಿಗಾವಿ ಸಮಗ್ರ ಅಭಿವೃದ್ದಿಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿವಮೊಗ್ಗದ ಫ್ರೀಡಂ ಪಾರ್ಕಿಗೆ ಶೂನ್ಯ ಸಿಂಹಾಸನಾಧೀಶ ಅಲ್ಲಮಪ್ರಭು ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ಅಲ್ಲದೇ, ಮುಖ್ಯಮಂತ್ರಿ ಅವರು ಶರಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮೂಲಭೂತ ಹಕ್ಕುಗಳ ಹೊಂದಲು ಸಂವಿಧಾನ ಸಹಾಯಕ: ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ
ಭಾರತ ಸಂವಿಧಾನವು ರಷ್ಯಾ, ಬ್ರಿಟನ್ ಹಾಗೂ ಅಮೆರಿಕ ದೇಶಗಳ ಸಂವಿಧಾನಗಳ ಅಂಶಗಳನ್ನು ಒಳಗೊಂಡಿದೆ. ಡಾ.ಅಂಬೇಡ್ಕರ್‌ ದೇಶಕೆ ಸುಭದ್ರವಾದ ಸಂವಿಧಾನ ನೀಡಿದ್ದು, ಇದು ಪ್ರಪಂಚದಲ್ಲೇ ಬೃಹತ್‌ ಸಂವಿಧಾನ ಎನಿಸಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಪ್ರತಿಯೊಬ್ಬ ಪ್ರಜೆಗಳು ತಮ್ಮ ಮೂಲಭೂತ ಹಕ್ಕುಗಳನ್ನು ಹೊಂದಲು ಸಂವಿಧಾನ ಸಹಾಯಕವಾಗಿದೆ. ನಮ್ಮ ಸಂವಿಧಾನವನ್ನು ರಚಿಸಿ, ಜಾರಿಗೆ ತಂದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಹೇಳಿದ್ದಾರೆ.
ದೇಶದಲ್ಲಿ ಜ್ವಲಂತ ಸಮಸ್ಯೆಗಳಿಗೆ ಪ್ರಧಾನಿ ಮೋದಿ ಪರಿಹಾರ
ಹಲವು ಶತಮಾನಗಳ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಸ್ವಾತಂತ್ರ್ಯಾ ನಂತರದಲ್ಲಿ ದೇಶ ಎದುರಿಸುತ್ತಿದ್ದ ಹಲವು ಜ್ವಲಂತ ಸಮಸ್ಯೆಗಳಿಗೆ ಪ್ರಧಾನಿ ಮೋದಿ ಸಮರ್ಥ ನಾಯಕತ್ವದಿಂದಾಗಿ ಪರಿಹಾರ ದೊರೆಯುತ್ತಿದೆ. 2047ರಲ್ಲಿ ಸಂಪೂರ್ಣ ಅಭಿವೃದ್ಧಿ ಮೂಲಕ ಜಗತ್ತಿನ ಅತ್ಯಂತ ಪ್ರಬಲ ರಾಷ್ಟ್ರ ಭಾರತ ಎಂದು ಗುರುತಿಸಿಕೊಳ್ಳುವ ದೂರದೃಷ್ಟಿಯಡಿ ಮೋದಿ ಸಾಗುತ್ತಿದ್ದಾರೆ. ಇದೀಗ ಜಾಗತಿಕ ಮಟ್ಟದಲ್ಲಿ ನಂ.1 ಸ್ಥಾನವನ್ನು ಪಡೆಯುವ ಮೂಲಕ ಸಾಗುತ್ತಿರುವ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತ, ವಿಶ್ವಕ್ಕೇ ಮಾದರಿಯಾಗಿದೆ ಎಂದು ಕ್ಷೇತ್ರದ ಶಾಸಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಮನುಷ್ಯನ ದಬ್ಬಾಳಿಕೆಯಿಂದ ಕಾಡು ನಾಶ: ಪಾಟೀಲ್ ಕಳವಳ
ಸೊರಬ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾಡು ಸಂರಕ್ಷಣೆ ಕುರಿತು ‘ಪೊಡವಿಯ ಕೊಡವಿದರೆ’ ಎಂಬ ಬೀದಿ ನಾಟಕ ಪ್ರದರ್ಶನಗೊಂಡಿತು. ಇದೇ ವೇಳೆ ಪರಿಸರ ಸಂರಕ್ಷಣೆ ಅಗತ್ಯತೆಯ ಕುರಿತು ಪರಿಸರ ಜಾಗೃತಿ ಟ್ರಸ್ಟ್ ಅಧ್ಯಕ್ಷ ಎಂ.ಆರ್.ಪಾಟೀಲ್ ಕೆಲ ಕಿವಿಮಾತುಗಳಾಡಿದರು.
ಇಂಡಿಯಾ ಒಕ್ಕೂಟ ಛಿದ್ರವಾಗುತ್ತದೆ: ಈಶ್ವರಪ್ಪ ಭವಿಷ್ಯ
ಜಗದೀಶ್‌ ಶೆಟ್ಟರ್‌ ಅವರ ಮೈಯಲ್ಲಿ ಹರಿಯುತ್ತಿರುವುದು ಅಪ್ಪಟ ಹಿಂದೂ ರಕ್ತ. ಅವರದು ಕಾಂಗ್ರೆಸ್‌ನ ಹಾಗೆ ಬೆರಕೆ ರಕ್ತವಲ್ಲ. ಅವರು ಮತ್ತೆ ವಾಪಸ್‌ ಬರುತ್ತಾರೆ ಎಂದು ಅವರು ಕಾಂಗ್ರೆಸ್‌ಗೆ ಹೋದ ದಿನವೇ ನಾನು ಹೇಳಿದ್ದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.
ತೊಟ್ಟಿಲು ತೂಗುವ ಕೈ ದೇಶ ಮುನ್ನಡೆಸಬಲ್ಲದು: ಕೆ.ನಾಗಮ್ಮ
ಮಹಿಳೆಯರಿಲ್ಲದ ಕ್ಷೇತ್ರವೇ ಪ್ರಸ್ತುತ ಇಲ್ಲವಾಗಿರುವುದು ಮಹಿಳೆಯರ ಸಾಮರ್ಥ್ಯಕ್ಕೆ ನಿದರ್ಶನವೇ ಸರಿ ಎಂದು ಪೇಪರ್‌ ಟೌನ್ ಠಾಣಾ ನಿರೀಕ್ಷಕಿ ಕೆ.ನಾಗಮ್ಮ ಅಭಿಪ್ರಾಯಪಟ್ಟರು.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved