• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಟಿಕೆಟ್‌ ನನಗೇ ಸಿಗುವ ನಿರೀಕ್ಷೆ: ಎಸ್‌.ಪಿ.ದಿನೇಶ್‌
ಮುಂಬರುವ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ನಾನು ಪ್ರಬಲ ಆಕಾಂಕ್ಷಿಯಾಗಿದ್ದು, ಟಿಕೆಟ್ ಸಿಗುವ ನಿಚ್ಚಳ ನಿರೀಕ್ಷೆ ನನಗಿದೆ. 2018ರಲ್ಲಿ ಕಡಿಮೆ ಮತಗಳ ಅಂತದಲ್ಲಿ ಸೋತಿದ್ದೆ. ಆದರೆ, ಈಗ ಬದಲಾದ ರಾಜಕೀಯ ವಾತಾವರಣದಿಂದ ನನಗೆ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ಕಾಂಗ್ರೆಸ್‌ ಮುಖಂಡ ಎಸ್‌.ಪಿ.ದಿನೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ದಲಿತರ ಏಳಿಗೆಗೆ ಶ್ರಮಿಸಿದ ಧೀಮಂತ ವ್ಯಕ್ತಿ ಪ್ರೊ. ಬಿ.ಕೃಷ್ಣಪ್ಪ
ಶೋಷಿತರ ಪರವಾಗಿ ಹೋರಾಡಲು ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ, ವಿಐಎಸ್‌ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಕಾರ್ಮಿಕರು ನೀಡಿದ ತಲಾ ₹2 ಕೆಂಪುನೋಟಿನ ಹಣದಲ್ಲಿ ಇಡೀ ರಾಜ್ಯಾದ್ಯಂತ ಸಂಘಟನೆ ವಿಸ್ತರಿಸಿದ ಮಹಾನ್‌ ಜನಪರ ಹೋರಾಟಗಾರ ಪ್ರೊ. ಬಿ.ಕೃಷ್ಣಪ್ಪ. ಅವರು ಸದಾ ಕಾಲ ದಲಿತರ ಪರ ಚಿಂತನೆಗಳಿಂದ, ಅವರ ಏಳಿಗೆಗೆ ಶ್ರಮಿಸಿದ ಧೀಮಂತ ವ್ಯಕ್ತಿ ಎಂದು ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಜಿ.ಮೂರ್ತಿ ಭದ್ರಾವತಿಯಲ್ಲಿ ಡಿಎಸ್‌ಎಸ್ ಸುವರ್ಣ ಮಹೋತ್ಸವ ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ.
ನನ್ನ ಎದೆ ಸೀಳಿದರೆ ಶ್ರೀರಾಮನೂ, ಸಿದ್ದರಾಮನೂ ಇದ್ದಾರೆ
ನಾವೂ ಹಿಂದುಗಳೇ. ಬಿಜೆಪಿಯವರು ನಮ್ಮನ್ನು ಹಿಂದು ವಿರೋಧಿಗಳು ಎಂಬ ರೀತಿ ಬಿಂಬಿಸುತ್ತಿರುವುದು ನನ್ನಂತ ಹೊಸ ತಲೆಮಾರಿನ ರಾಜಕಾರಣಿಗಳಿಗೆ ನೋವಾಗುತ್ತದೆ. ನನ್ನ ಎದೆ ಸೀಳಿದರೂ ಶ್ರೀರಾಮನಿದ್ದಾನೆ, ಸಿದ್ದರಾಮನೂ ಇದ್ದಾನೆ. ರಾಮ ಮಂದಿರ ಮೊದಲು ಓಪನ್ ಮಾಡಿಸಿದ್ದೆ ರಾಜೀವ್ ಗಾಂಧಿ ಎಂದು ಶಾಸಕ ಪ್ರದೀಪ್ ಈಶ್ವರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮನುಕುಲ ಏಳಿಗೆಗೆ ಶ್ರಮಿಸಿದ ಮಹನೀಯ ಕವಿ ವೇಮನ
ಯೋಗಿ ವೇಮನ ವಚನ ಸಾಹಿತ್ಯದಲ್ಲಿ ವಿಶೇಷ ಕೃಷಿ ಮಾಡಿದರು. ವಾಸ್ತವ ಬದುಕಿಗೆ ಹತ್ತಿರ ಆಗಿರುವಂತೆ, ಜನಸಾಮಾನ್ಯರಿಗೆ ಅರ್ಥವಾಗುವ ಸರಳ, ಸುಲಭ ಭಾಷೆಯಲ್ಲಿ ಕವಿತೆಗಳನ್ನು ರಚಿಸಿದ್ದಾರೆ. ಅವರ ಮೌಲ್ಯಯುತ ಸಾಹಿತ್ಯ ದೇಶದ ಬೇರೆ ಬೇರೆ ಭಾಷೆಗಳಿಗೆ ತರ್ಜುಮೆಗೊಂಡಿದ್ದು, ಅಪಾರ ಸಂಖ್ಯೆಯ ಓದುಗರನ್ನು ತಲುಪಿದೆ. 15ನೇ ಶತಮಾನದ ಈ ಪ್ರಸಿದ್ಧ ಈತೆಲುಗು ಕವಿ ಮನುಕುಲದ ಏಳಿಗೆಗಾಗಿ ಶ್ರಮಿಸಿದ ಮಹನೀಯರು. ಅವರ ಸಾಹಿತ್ಯ ಸಾರ್ವಕಾಲಿಕ ಮೌಲ್ಯಗಳನ್ನು ಹೊಂದಿವೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದಲ್ಲಿ ಸ್ಮರಿಸಿದ್ದಾರೆ.
ಕೆಎಂಎಫ್‌ಗೆ ₹1.5 ಕೋಟಿ ಬಾಕಿ ಪಾವತಿಸದೇ ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ದ್ರೋಹ
ಮಕ್ಕಳಿಂದ ಹಿಡಿದು ಹಿರಿಯವರೆಗಿನ ಎಲ್ಲ ವಯೋಮಾನದವರ ಕಾಳಜಿ, ರಕ್ಷಣೆ ಮಾಡುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದ್ಯ ಕರ್ತವ್ಯ. ಆದರೆ, ಜಿಲ್ಲೆಯಲ್ಲಿ ಈ ಕಾಳಜಿ ಸರ್ಕಾರಗಳು ಮರೆತಿವೆಯೇ ಎಂಬ ಶಂಕೆ ವ್ಯಕ್ತವಾಗುವಂಥ ಸುದ್ದಿಯೊಂದಿದೆ. ಶಿಕಾರಿಪುರ ತಾಲೂಕಿನಲ್ಲಿ ಕಳೆದ 6 ತಿಂಗಳಿಂದ ಅಂಗನವಾಡಿ ಮಕ್ಕಳಿಗೆ ನೀಡಲಾಗುತ್ತಿದ್ದ ಹಾಲಿನ ಪೌಡರ್‌ಗೆ ಸರ್ಕಾರ ಹಣ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಕಳೆದ 6 ತಿಂಗಳಿಂದ ತಾಲೂಕಿನಾದ್ಯಂತ ಹಾಲಿನ ಪೌಡರ್‌ ಪೂರೈಕೆ ಸ್ಥಗಿತಗೊಳಿಸಿದೆ. ಗ್ಯಾರಂಟಿ ನೆಪದಲ್ಲಿ ಸರ್ಕಾರ ಮಕ್ಕಳಿಗೆ ದ್ರೋಹ ಬಗೆಯುತ್ತಿದೆ ಎಂದು ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಹುಲಗಿ ಆರೋಪಿಸಿದ್ದಾರೆ.
ಹಳೇ ಸೊರಬದಲ್ಲಿ ಮನರಂಜಿಸಿದ ಹೋರಿ ಬೆದರಿಸುವ ಹಬ್ಬ
ದೀಪಾವಳಿ ಕಾರ್ತಿಕ ಮಾಸದ ಸುಗ್ಗಿ ದಿನಗಳಲ್ಲಿ ಹೋರಿ ಬೆದರಿಸುವ ಹಬ್ಬ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಮಹತ್ವ ಪಡೆದಿದೆ. ಅಂತೆಯೇ, ಸೊರಬ ತಾಲೂಕಿನ ಹಳೇ ಸೊರಬ ಗ್ರಾಮದಲ್ಲಿ ಶ್ರೀ ರಾಮೇಶ್ವರ ಗ್ರಾಮಾಭಿವೃದ್ಧಿ ಸೇವಾ ಸಮಿತಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಹಬ್ಬದಲ್ಲಿ 200ಕ್ಕೂ ಅಧಿಕ ಹೋರಿಗಳ ನಾಗಾಲೋಟ ಜನರನ್ನು ರಂಜಿಸಿತು.
ಬಳ್ಳಿಗಾವಿಯಲ್ಲಿ ಅಲ್ಲಮ ಪ್ರಭು ಅನುಭವ ಶಿಲಾ ಮಂಟಪ ನಿರ್ಮಾಣಕ್ಕೆ ಅನುಮತಿ
ಪರಮ ವೈರಾಗ್ಯಮೂರ್ತಿ ಅಲ್ಲಮ ಪ್ರಭು ಜನ್ಮಸ್ಥಳ ಶಿರಾಳಕೊಪ್ಪ ಸಮೀಪದ ಬಳ್ಳಿಗಾವಿಯಲ್ಲಿ ಅವರು ಜನ್ಮತಾಳಿದ ಮನೆ ಬಿದ್ದುಹೋದ ಅವಶೇಷದ ಸಮೀಪ ಅಲ್ಲಮಪ್ರಭು ಅನುಭವ ಶಿಲಾ ಮಂಟಪ ನಿರ್ಮಾಣ ಮಾಡಲು ಪುರಾತತ್ವ ಇಲಾಖೆಯಿಂದ ಅನುಮತಿ ದೊರಕಿದೆ ಎಂದು ಬಳ್ಳಿಗಾವಿ ಅಲ್ಲಮಪ್ರಭು ಅನುಭವ ಪೀಠದ ಶಿವಲಿಂಗೇಶ್ವರ ಮಹಾಸ್ವಾಮೀಜಿ ತಿಳಿಸಿದ್ದಾರೆ.
ಶ್ರೀರಾಮ ಪ್ರತಿಷ್ಠಾಪನೆಯಂದು ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ: ರತ್ನಾಕರ್‌
ದೇಶದಲ್ಲಿ ಶಾಂತಿ ಮತ್ತು ಸೌಹಾರ್ದ ವಾತಾವರಣ ಮೂಡುವಂತಾಗಬೇಕು. ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆ ದಿನದಂದೇ ತೀರ್ಥಹಳ್ಳಿ ಪಟ್ಟಣದ ತುಂಗಾನದಿ ದಡದಲ್ಲಿರುವ ಮೂರು ಶತಮಾನಗಳ ಇತಿಹಾಸವಿರುವ ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿದೆ. ಎಲ್ಲ ಭಗವದ್ಭಕ್ತರೂ ಈ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
22ರಂದು ಕರ್ನಾಟಕದಲ್ಲೂ ರಜೆ ಘೋಷಿಸಿಸಬೇಕು: ಈಶ್ವರಪ್ಪ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶ್ರೀ ರಾಮನ ಪ್ರತಿಷ್ಠಾಪನೆ ಹಿನ್ನೆಲೆ ಜ.22ರಂದು ಹಲವು ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಅದರಂತೆ ಕರ್ನಾಟಕದಲ್ಲೂ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾಂಗ್ರೆಸ್‌ ಆಡಳಿತ ಸಹಿಸದೇ ಸಿಎಂ ವಿರುದ್ಧ ಬಿಜೆಪಿ ಹಗುರ ಹೇಳಿಕೆ
ಭ್ರಷ್ಟಾಚಾರ ರಹಿತವಾದ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಿಂದ ಕಂಗೆಟ್ಟು ಬಿಜೆಪಿಯ ಮುಖಂಡರು ಅತ್ಯಂತ ಹಗುರವಾದ ಹೇಳಿಕೆಗಳಿಂದ ಟೀಕಿಸುತ್ತಿದ್ದಾರೆ. ಜನತೆ ಎಲ್ಲವನ್ನು ಗಮನಿಸುತ್ತಿದ್ದು, ಬರಲಿರುವ ಚುನಾವಣೆಯಲ್ಲಿ ಸ್ಪಷ್ಟ ಉತ್ತರವನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಮಾಲತೇಶ್ ಗೋಣಿ ಶಿಕಾರಿಪುರ ಪ್ರತಿಭಟನೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved