• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿನ್ನದ ಸರ ನುಂಗಿದ್ದ ಹಸುಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಅದರಂತೆ ಕೋಣಂದೂರು ಪಶುವೈದ್ಯ ಡಾ.ಆನಂದ ಅವರ ತಂಡವು ಭಾನುವಾರ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ, ಹಸುವಿನ ಹೊಟ್ಟೆಯಲ್ಲಿದ್ದ ಚಿನ್ನದ ಸರವನ್ನು ಹೊರತೆಗೆದಿದೆ. ಹಸುವು ಈಗ ಆರೋಗ್ಯವಾಗಿದೆ ಎಂದು ಪಾಲಕರು ತಿಳಿಸಿದ್ದಾರೆ.
ಗುಡವಿ ಪಕ್ಷಿಗಳ ಸಾವಿಗೆ ಹೇನು, ಅಧಿಕ ಉಷ್ಣಾಂಶವೂ ಕಾರಣ!
ಅಕ್ಟೊಬರ್ ತಿಂಗಳಲ್ಲಿ ಪಕ್ಷಿಧಾಮದಲ್ಲಿ 30ಕ್ಕೂ ಅಧಿಕ ಕರಿತಲೆ ಪಕ್ಷಿಗಳ ಮೃತದೇಹಗಳು ಪತ್ತೆಯಾಗಿದ್ದವು. ಹಕ್ಕಿಗಳು ಕಲುಷಿತ ನೀರು ಸೇವನೆ, ರೈತರು ಬೆಳೆಗಳಿಗೆ ಸಿಂಪಪಡಿಸುವ ಅಧಿಕ ಕೀಟನಾಶಕ ಸೇವನೆ, ಹಕ್ಕಿಜ್ವರ ಅಥವಾ ಇನ್ನಾವುದೋ ಕಾರಣದಿಂದ ಸಾವನ್ನಪ್ಪಿವೆಯೇ ಎನ್ನುವ ಆತಂಕ ಪಕ್ಷಿಪ್ರಿಯರಲ್ಲಿ ಮೂಡಿತ್ತು. ನಿಗೂಢವಾಗಿ ಸಾವು ಕಾಣುತ್ತಿದ್ದ ಪಕ್ಷಿಗಳ ಸಾವು ಅರಣ್ಯ ಇಲಾಖೆಗೂ ತಲೆನೋವಾಗಿ ಪರಿಣಮಿಸಿತ್ತು. ಆದರೆ, ಬರದ ಹಿನ್ನೆಲೆ ನೀರು-ನೆರಳು ಕಾಣದೇ ಗುಡವಿ ಧಾಮದಲ್ಲಿನ ಪಕ್ಷಿಗಳು ಸಾವು ಕಾಣುತ್ತಿವೆ ಎಂದು ಅಕ್ಟೋಬರ್ 27ರಂದು ಕನ್ನಡಪ್ರಭ ವರದಿ ಪ್ರಕಟಿಸಿ, ಗಮನ ಸೆಳೆದಿತ್ತು.
ತುಂಗಾನದಿ ಮಲಿನ ಕಾರಣ ಪಾಲಿಕೆ ವಿಶೇಷ ಸಭೆಯಲ್ಲಿ ಕಾವೇರಿದ ಚರ್ಚೆ
ಬಿ.ಎ.ರಮೇಶ್‌ ಹೆಗ್ಡೆ ಮಾತನಾಡಿ, ಕಲುಷಿತ ಆಗುತ್ತಿರುವ ತುಂಗೆಯ ಪಾವಿತ್ರತೆ ಕಾಪಾಡುವ ಕೆಲಸ ಪಾಲಿಕೆಯಿಂದಲೇ ಆಗಬೇಕು. ಪಾಲಿಕೆಯಲ್ಲಿ ಯುಜಿಡಿಗೆ ವಿಶೇಷ ಅನುದಾನ ಮೀಸಲಿಟ್ಟು, ಯಾವ ಮನೆಗಳಿಗೆ ಯುಜಿಡಿ ಸಂಪರ್ಕ ಇಲ್ಲವೋ, ಅಂತವರಿಗೆ ಪಾಲಿಕೆಯಿಂದಲೇ ಉಚಿತವಾಗಿ ಯುಜಿಡಿ ಸಂಪರ್ಕ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧ: ಮಧು
ಅಡಕೆ ಸುಲಿಯುವ ಯಂತ್ರಗಳಿಗೆ ಪ್ರತ್ಯೇಕ ಮೀಟರ್ ಅಳವಡಿಕೆ ವಿಚಾರವಾಗಿ ಸಣ್ಣ ರೈತರಿಗೆ ಉಚಿತ ವಿದ್ಯುತ್ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೇನೆ. ಈ ಹಿಂದಿನ ಸರ್ಕಾರದವರೇ ಮಾಡಿರುವುದು ಇದು. ಆರಗ ಜ್ಞಾನೇಂದ್ರ ಅವರು ಯಾರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಮನಸಿಗೆ ಬಂದ ಹಾಗೆ ಮಾತನಾಡುವುದು ಬಿಜೆಪಿ ಅವರ ರೋಗ. ಅಮಿತ್ ಶಾ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಹೇಳಿದ್ದ ಒಂದೇ ಒಂದು ಅಂಶವನ್ನಾದರೂ ಅನುಷ್ಠಾನ ಮಾಡಿದ್ದಾರಾ? ಇವತ್ತು ಆರಗ ಜ್ಞಾನೇಂದ್ರ ಅವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದರು.
ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಅಂತ್ಯ: ಅಧಿಕಾರಿಗಳ ಕೈಗೆ ಅಧಿಕಾರ
ನಿರೀಕ್ಷೆ ಸಂಪೂರ್ಣ ಈಡೇರಿಲ್ಲ: ನಗರಸಭೆಯಿಂದ ಬಡ್ತಿ ಪಡೆದು ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾದರೂ ಅದಕ್ಕೆ ತಕ್ಕಂತೆ ಆಡಳಿತ ವ್ಯವಸ್ಥೆ ಬದಲಾಗಲಿಲ್ಲ ಎಂಬ ಕೊರಗು ಎಲ್ಲರಲ್ಲಿಯೂ ಕಾಡುತ್ತಿದೆ. ಪಾಲಿಕೆಯ ಮಾಸಿಕ ಸಭೆ ಎಂದರೆ ಗದ್ದಲ, ಕೂಗಾಟ, ಕಿರುಚಾಟ ಎಂಬ ಮಾತು ಜನಜನಿತ. ಬದಲಾಗಿ ಅತ್ಯುತ್ತಮ ರೀತಿಯ ಚರ್ಚೆ, ವ್ಯಕ್ತಿ ಕೇಂದ್ರಿತದ ಬದಲಿಗೆ ವಿಷಯ ಕೇಂದ್ರಿತವಾದ ಚರ್ಚೆಗಳು ನಡೆಯಬೇಕೆಂಬ ಜನರ ನಿರೀಕ್ಷೆ ಸಂಪೂರ್ಣ ಈಡೇರಿಲ್ಲ ಎಂಬ ಮಾತು ಸಹ ಬಹುತೇಕ ನಿಜವಾಗಿದೆ. ಅಧ್ಯಯನ ಶೀಲ, ಇನ್ನಷ್ಟು ಅಭಿವೃದ್ಧಿಪರ ಚರ್ಚೆಗಳು ನಡೆಯಬೇಕು ಎಂಬ ನಾಗರೀಕರ ಆಸೆ ಈಡೇರಿಲ್ಲ ಎಂಬದೂ ನಿಜ. ಎಲ್ಲಿ ತಪ್ಪಾಗುತ್ತಿದೆ ಎಂಬುದರ ಕುರಿತು ಮಾಜಿ ಜನಪ್ರತಿನಿಧಿಗಳು ಈಗಲಾದರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.
ಸಹ್ಯಾದ್ರಿ ಕಾಲೇಜಿನಲ್ಲಿ ತರಗತಿ ನಿರ್ಲಕ್ಷ್ಯ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಕೆಲವು ಅತಿಥಿ ಉಪನ್ಯಾಸಕರು ಮಾನವೀಯ ಹಿನ್ನೆಲೆಯಲ್ಲಿ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು. ಆದರೆ, ಈಗ ಅವರೂ ನಮಗೆ ನೇಮಕಾತಿ ಆದೇಶ ದೊರೆತಿಲ್ಲ. ಪ್ರಾಂಶುಪಾಲರನ್ನು ಕೇಳಿ ಎನ್ನುತ್ತಿದ್ದಾರೆ. ಖಾಯಂ ಅಧ್ಯಾಪಕರು ಮೌಲ್ಯಮಾಪನಕ್ಕೆ ಹೋಗಿದ್ದೆವು ಎನ್ನುತ್ತಾರೆ. ಕಳೆದ ವಾರ ಇದೆ ವಿಚಾರವಾಗಿ ಪ್ರತಿಭಟನೆ ನಡೆಸಲಾಗಿತ್ತು. ಆಗ ಶನಿವಾರದ ಒಳಗೆ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತದೆ ಎಂದು ಕುವೆಂಪು ವಿವಿ ಆಡಳಿತ ಭರವಸೆ ನೀಡಿತ್ತು. ಈಗ ಮಾತು ತಪ್ಪಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆ, ಸ್ವಾವಲಂಬನೆ ಸಹಕಾರತತ್ವ ಸ್ಥಂಬಗಳು: ಬಿಎಸ್‌ವೈ
ಸಂಸದ ಬಿ.ವೈ. ರಾಘವೆಂದ್ರ ಮಾತನಾಡಿ, ಜಿಲ್ಲೆಯಲ್ಲೇ ಅತಿ ಹೆಚ್ಚು ಸೇವೆ ಸಲ್ಲಿಸಿರುವ 2ನೇ ಬ್ಯಾಂಕ್ ಎಂಬ ಕೀರ್ತಿಗೆ ಬಸವೇಶ್ವರ ಸಹಕಾರ ಬ್ಯಾಂಕ್ ಪಾತ್ರವಾಗಿದೆ. ಸೂರಣಿಗಿ ಸಿದ್ದಪ್ಪ, ಡಾ.ಮುರುಘರಾಜ್, ಶಿವಯೊಗಪ್ಪ ಅವರ ಆಡಳಿತ ಅವಧಿ ಅಮೂಲ್ಯವಾಗಿದೆ. ಪ್ರಾಮಾಣಿಕವಾಗಿ ಸೇವೆ ಮಾಡಿದಾಗ ಸಾರ್ವಜನಿಕರ ಹಣದ ಹೂಡಿಕೆ ಬ್ಯಾಂಕಿನ ಬೆಳವಣಿಗೆಗೆ ಕಾರಣವಾಗುತ್ತದೆ. ಲಂಡನ್ ತೇಮ್ಸ್ ನದಿಯ ತೀರದಲ್ಲಿ ಬಸವಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಮೂರುವರೆ ಕೋಟಿ ಅನುದಾನ ಯಡಿಯೂರಪ್ಪ ಅವರು ನೀಡಿದ್ದಾರೆ. ಕ್ಷೇತ್ರದ ಜನರ ಋಣ ತೀರಿಸುವ ಕೆಲಸ ಯಡಿಯೂರಪ್ಪ ಮಾಡಿದ್ದಾರೆ ಎಂದು ಹೇಳಿದರು.
ಅಂಬೇಡ್ಕರ್‌ ನೀಡಿದ ಸಂವಿಧಾನವೇ ನಮ್ಮ ಉಸಿರು
9ನೇ ತರಗತಿ ವಿದ್ಯಾರ್ಥಿನಿ ಇಂಚರ ಸಂವಿಧಾನದ ಮಹತ್ವ ಕುರಿತು ಮಾತನಾಡಿದರು. ಶಿಕ್ಷಕ ಜಿಯಾವುಲ್ಲಾ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಶಾಲೆ ಪ್ರಾಂಶುಪಾಲರಾದ ಶರ್ವಾಣಿ, ಸಂಯೋಜನಾಧಿಕಾರಿ ವಾಣಿ, ಸಹಶಿಕ್ಷಕರಾದ ಸಂಗೀತ, ಸುಜಾತ, ರಶ್ಮಿ, ನವೀನ್, ರಾಜು, ಗಿರೀಶ್ ಮತ್ತಿತರರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. 5ನೇ ತರಗತಿ ಮಕ್ಕಳು ದೇಶಭಕ್ತಿ ಗೀತೆ ಹಾಡಿದರು. ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು.
ಹೃದಯಾಘಾತದಿಂದ ಬಸ್ಸಲ್ಲೇ ಪ್ರಯಾಣಿಕ ಸಾವು
ಬಸ್ ಚಾಲಕ ಮೃತರ ಬಳಿಯಿದ್ದ ಆಹ್ವಾನ ಪತ್ರಿಕೆಯಲ್ಲಿ ದೂರವಾಣಿ ಮೂಲಕ ಬೆಂಗಳೂರಿನಲ್ಲಿರುವ ಸೀತಾರಾಮ್ ಪುತ್ರ ಸುಮುಖ ಭಾರ್ಗವ ಅವರನ್ನು ಸಂಪರ್ಕಿಸಿ, ವಿಷಯ ತಿಳಿಸಿದರು. ಮಾಹಿತಿ ಮೇರೆಗೆ ಮೈಸೂರಿಗೆ ಧಾವಿಸಿದ ಸುಮುಖ ಭಾರ್ಗವ ತಂದೆಯ ಮೃತದೇಹವನ್ನು ಅವರ ಸ್ವಗ್ರಾಮಕ್ಕೆ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ತರಲಾಗಿದ್ದು, ರಾತ್ರಿ ಅಂತಿಮಕ್ರಿಯೆ ನಡೆಸಲಾಗಿದೆ.
ಗ್ರಾಮೀಣ ಕ್ರೀಡಾಕೂಟಗಳು ಸಂಬಂಧವೃದ್ಧಿಗೆ ಸಹಕಾರಿ
ಸನ್ಮಾನ ಸ್ವೀಕರಿಸಿದ ಶಿಕ್ಷಕ ಬಿ.ಮೂರ್ತಿ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ಅದನ್ನು ಗುರುತಿಸಲು ಇಂತಹ ಕ್ರೀಡಾಕೂಟ ಸಹಕಾರಿ. ಈ ಭಾಗದಲ್ಲಿ ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದವರಿದ್ದಾರೆ. ಪ್ರತಿಭೆಗೆ ನಿರಂತರ ಪೋಷಣೆ ನೀಡಿದಾಗ ಉತ್ತಮ ಪ್ರಜೆಯಾಗಿ ಬೆಳೆಯುತ್ತಾರೆ ಎಂದು ಹೇಳಿದರು. ಮಂಡಳಿ ಅಧ್ಯಕ್ಷ ಗುರುದತ್ತ ಶರ್ಮ ಮಾತನಾಡಿದರು. ಹಿರಿಯ ಕೇರಂ ಆಟಗಾರ ಸೂರ್ಯನಾರಾಯಣ ಉಪಸ್ಥಿತರಿದ್ದರು. ಜಮ್ಮು- ಕಾಶ್ಮೀರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕ್ಯಾ. ಪ್ರಾಂಜಲ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಂತರ ರಾಷ್ಟ್ರೀಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಶೆಡ್ತಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಿ.ಮೂರ್ತಿ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 484
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved