• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಗ ಅಭಿವೃದ್ಧಿ ಕಾಮಗಾರಿ ಮಳೆಗಾಲದೊಳಗೆ ಪೂರ್ಣ : ಡಿಸಿ
ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ ಅಭಿವೃದ್ಧಿಗೆ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುತ್ತಿವೆ. ಇಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲದ ಆರಂಭದೊಳಗೆ ಪೂರ್ಣಗೊಳಿಸಿ, ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶುಕ್ರವಾರ ಹೇಳಿದ್ದಾರೆ.
ಸೊರಬ ರಸ್ತೆ ವಿಸ್ತರಣೆ ಬಗ್ಗೆ 15ರಂದು ನಿವಾಸಿಗಳೊಂದಿಗೆ ಚರ್ಚೆ
ನಗರ, ಪಟ್ಟಣಗಳಲ್ಲಿ ರಸ್ತೆ ವಿಸ್ತರಣೆ ಎಂಬುದು ಆಗದಿದ್ದರೆ ಬೆಳೆಯುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಸುರಕ್ಷಿತ ವಾಹನ ಸಂಚಾರ ಅಸಾಧ್ಯವೇ ಸರಿ. ಈ ಕಾರಣದಿಂದ ಸರ್ಕಾರಗಳು ಜನವಿರೋಧ ನಡುವೆಯೂ ಕಾಲಕಾಲಕ್ಕೆ ಯೋಜನೆಗಳ ಜಾರಿಗೊಳಿಸುತ್ತವೆ. ಇದರಿಂದ ಸಾಗರವೂ ಹೊರತಾಗಿಲ್ಲ. ಸಾಗರ ಪಟ್ಟಣದ ಸೊರಬ ರಸ್ತೆ ವಿಸ್ತರಣೆಗೆ ಜ.17 ಅಥವಾ 18ರಂದು ಸ್ಥಳೀಯರ ಜತೆ ಚರ್ಚೆ ನಡೆಸುವುದಾಗಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದ್ದಾರೆ.
ನೇಮಕಾತಿಯಲ್ಲಿ ಸರ್ಕಾರ ಕನ್ನಡಿಗರಿಗೆ ಮೊದಲ ಪ್ರಾಶಸ್ತ್ಯ ನೀಡಲಿ
ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಸಲು, ಅಭಿವೃದ್ಧಿಪಡಿಸಲು ಮುಖ್ಯವಾಗಿ ಖಾಸಗಿ ಮತ್ತು ಸರ್ಕಾರಿ ಹುದ್ಧೆಗಳ ನೇಮಕಾತಿಯಲ್ಲಿ ಕನ್ನಡಿಗರನ್ನೇ ಆಯ್ಕೆ ಮಾಡಬೇಕು, ಆ ಮೂಲಕ ರಾಷ್ಟ್ರೀಕೃತ ಬ್ಯಾಂಕ್, ಖಾಸಗಿ ಕಂಪನಿ, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅವಮಾನವನ್ನು ತಪ್ಪಿಸಬೇಕು ಎಂದು ಸೊರಬದಲ್ಲಿ ನಡೆದ ಶಿವಮೊಗ್ಗ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಕೆ.ಪಿ. ಮಾನ್ವಿ ಕರೂರು ಹೇಳಿದ್ದಾರೆ.
ಜ.10ರಿಂದ ಭದ್ರಾ, ಜ.20ರಿಂದ ಬಲದಂಡ ನಾಲೆಗೆ ನೀರು
ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗಳ ನೀರನ್ನು ಎಚ್ಚಿಕೊಂಡು ಲಕ್ಷಾಂತರ ಹೆಕ್ಟೇರ್‌ನಲ್ಲಿ ರೈತರು ಕೃಷಿ ನಡೆಸುತ್ತಿದ್ದಾರೆ. ಈ ವರ್ಷ ಮಳೆ ಕೊರತೆ ಹಿನ್ನೆಲೆ ಸರ್ಕಾರ ಹಾಗೂ ರೈತರು ಡ್ಯಾಂಗಳಲ್ಲಿರುವ ನೀರು ಸದ್ಬಳಕೆಗೆ ಇನ್ನಿಲ್ಲದ ಚಿಂತೆಗೆ ಬಿದ್ದು, ಪರಿಹಾರ ಕ್ರಮ ಹಾಗೂ ಸೌಲಭ್ಯಕ್ಕಾಗಿ ಹತ್ತಾರು ರೀತಿಯ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಶಿವಮೊಗ್ಗದಲ್ಲಿ ಶನಿವಾರ ಭದ್ರಾ ಕಾಡಾ ಸಭೆಯಲ್ಲಿ ನೀರು ಹಂಚಿಕೆ ದಿನಗಳ ಕುರಿತು ಜಿಲ್ಲಾ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ರೈತ ಮುಖಂಡರ ಸಭೆ ನಡೆದಿದೆ. ಈ ಸಭೆ ಕೈಗೊಂಡ ತೀರ್ಮಾನಕ್ಕೆ ರೈತರು ಆಕ್ಷೇಪವನ್ನೂ ವ್ಯಕ್ತಪಡಿಸಿ, ಪ್ರತಿಭಟಿಸಿದ್ದಾರೆ.
ಯುವನಿಧಿ ಯೋಜನೆಗೆ ಅರ್ಹರು ನೋಂದಣಿ ಮಾಡಿಕೊಳ್ಳಲಿ
ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯೋಜನೆ ಯುವನಿಧಿ ಈಗ ಯುವಜನರ ಕುತೂಹಲ, ನಿರೀಕ್ಷೆ, ಭರವಸೆಗಳನ್ನು ಹೆಚ್ಚಿಸುವಲ್ಲಿ ಕಾರಣವಾಗಿದೆ. ಇದೇ ಜ.12ರಂದು ಶಿವಮೊಗ್ಗದಲ್ಲಿ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದು, ಅರ್ಹರು ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೂಚಿಸಿದ್ದಾರೆ.
ಭದ್ರಾ ಕಾಡಾ ಸಭೆ ತೀರ್ಮಾನ ಖಂಡಿಸಿ ರೈತರ ಪ್ರತಿಭಟನೆ
ಮಳೆಗಾಲದಲ್ಲಿ ಸರಿಯಾಗಿ ಮಳೆಯಾಗದಿದ್ದರೆ ಮುಂದಿನ ಎಂಟ್ಹತ್ತು ತಿಂಗಳ ಬದುಕಿನ ಬವಣೆ ಹೇಳತೀರದು. ಬರ ಎದುರಾಗಿ, ಮಳೆ ಸಾಲದಾಗಿ ಬೆಳೆಗಳು ಬತ್ತಿ ಹೋಗುವಾಗ ರೈತರು ದಿಕ್ಕುತೋಚದಂತಾಗುತ್ತಾರೆ. ಇಂಥ ಸನ್ನಿವೇಶ ಈಗ ರಾಜ್ಯದ ಜನತೆಗೆ ಅದರಲ್ಲೂ ಜಿಲ್ಲೆಯ ಭದ್ರಾ ಎಡದಂಡೆ, ಬಲದಂಡೆ ನಾಲಾ ನೀರು ನೆಚ್ಚಿಕೊಂಡ ರೈತರಿಗೆ ಎದುರಾಗಿದೆ. ಶಿವಮೊಗ್ಗದ ಭದ್ರಾ ಕಾಡಾ ಸಭೆಯಲ್ಲಿ ನೀರುಣಿಸುವ ಸಂಬಂಧ ಕೈಗೊಂಡ ತೀರ್ಮಾನಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿ, ರಸ್ತೆ ತಡೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.
ಯುವತಿಗೆ ಕೆಎಫ್‌ಡಿ ಪಾಸಿಟಿವ್‌: ಆರೋಗ್ಯ ಸ್ಥಿತಿ ಗಂಭೀರ
ಕೊರೋನಾ ಹಾವಳಿ ಮಧ್ಯೆ ಜಿಲ್ಲೆಯಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಸಹ ಕೆಲವು ಗ್ರಾಮಗಳಲ್ಲಿ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಮಧ್ಯೆ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂನ ಬೊಪ್ಪನಮನೆ ಗ್ರಾಮದಲ್ಲಿ ಯುವತಿಯಲ್ಲಿ ಕೆಎಫ್‌ಡಿ ಸೋಂಕು ಕಂಡುಬಂದಿದ್ದು, ಮಣಿಪಾಲ್‌ ಆಸ್ಪತ್ರೆಗೆ ಸೇರಿಸುವಂತಾಗಿದೆ.
ಶಾಲೆ, ಕಾಲೇಜು, ಕಚೇರಿಗಳಲ್ಲಿ ಧ್ವಜಾರೋಹಣಕ್ಕೆ ಸಿದ್ಧತೆ ನಡೆಸಿ
ಜನೆವರಿ 26ನೇ ದಿನ ಕರ್ನಾಟಕ ಜನತೆ ಎಂದಿಗೂ ಮರೆಯುವುದಿಲ್ಲ. ಆ ದಿನ ಹಬ್ಬದಂತೆ ಆಚರಿಸಲು ಜಿಲ್ಲಾಡಳಿತ ಸಕಲ ಕ್ರಮ ಕೈಗೊಳ್ಳುವುದು. ಅಂತೆಯೇ. ಈ ಬಾರಿಯೂ ನಗರದ ಡಿಎಆರ್‌ ಮೈದಾನದಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಶುಕ್ರವಾರ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚಿಸಿದ್ದಾರೆ.
ಹಳ್ಳಿಗಳಲ್ಲಿ ಕಾಯಕ ಚಳವಳಿ ಮರಳಬೇಕು: ಪ್ರಸನ್ನ ಚರಕ
ಗುಡಿ ಕೈಗಾರಿಕೆಗಳು ನಶಿಸುತ್ತಿದ್ದು, ಕೃಷಿ ಆಧಾರಿಕ ಕೆಲಸಗಳೆಲ್ಲ ಹಿನ್ನಡೆ ಅನುಭವಿಸುತ್ತಿವೆ. ಹಳ್ಳಿಗಳಲ್ಲಿ ಯುವಜನರು ಇಲ್ಲದೆ, ಮನೆಗಳಲ್ಲಿ ವೃದ್ಧರು ಪರಿತಪಿಸುವಂತಾಗಿದೆ. ನಗರ ಜೀವನ, ಹೊಸ ಉದ್ಯೋಗ ಅರಸುವ ಯುವಜನರು ಹಳ್ಳಿಗಳತ್ತ ಮರಳಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಕಾಯಕ ಚಳವಳಿ ಮರಳಲಿ ಎಂದು ರಂಗಕರ್ಮಿ ಪ್ರಸನ್ನ ಚರಕ ಹೊಸನಗರ ಸಾಹಿತ್ಯ ಸಮ್ಮೇಳನದಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ ನಾಲಿಗೆಗೂ, ಮೆದುಳಿಗೂ ಲಿಂಕ್ ಇಲ್ಲ: ಆಯನೂರು ಮಂಜುನಾಥ್‌
ಶಿವಮೊಗ್ಗದಲ್ಲಿ ಹಿರಿಯ ರಾಜಕಾರಣಿಗಳಾದ ಆಯನೂರು ಮಂಜುನಾಥ್‌ ಅವರು ಬಿಜೆಪಿಯ ಕೆ.ಎಸ್‌. ಈಶ್ವರಪ್ಪ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಶುಕ್ರವಾರ ಸಹ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪರ ನಾಲಗೆಗೂ, ಮೆದುಳಿಗೂ ಲಿಂಕ್‌ ಇಲ್ಲ ಎಂದಿದ್ದಾರೆ.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 516
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved