• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಂಗ್ಲ ಮಾಧ್ಯಮಗಳಿಂದ ಸರ್ಕಾರಿ ಕನ್ನಡ ಶಾಲೆಗಳಿಗೆ ಸಂಕಷ್ಟ: ಶ್ರೀಗಳು
ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಕನ್ನಡ ನಾಡನ್ನು ಕಟ್ಟುವಲ್ಲಿ ಗೋಕಾಕ ಚಳವಳಿ ಮಹತ್ತರವಾದ ಪಾತ್ರ ಪಡೆಯಿತು. ಕನ್ನಡ ನಾಡು- ಭಾಷೆಗೆ ತೊಂದರೆಯಾದಾಗ ಕನ್ನಡಪರ ಸಂಘಟನೆಗಳ ಹೋರಾಟದ ಹಾದಿಯನ್ನು ಹಿಡಿಯುವುದರ ಮೂಲಕ ಕನ್ನಡ ಭಾಷೆ ಉಳಿಯುತ್ತಿದೆ ಎಂದರು. ಸಮಾರಂಭದಲ್ಲಿ ರೈತರಿಗೆ, ವೀರ ಯೋಧರಿಗೆ, ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ, ವೈದ್ಯರಿಗೆ, ಹಿರಿಯ ಆಟೋ ಚಾಲಕರಿಗೆ ಸನ್ಮಾನಿಸಲಾಯಿತು.
ಮಕ್ಕಳ ವ್ಯಕ್ತಿತ್ವ, ಬದುಕು ಕಟ್ಟೋದು ಇಂದು ಕಷ್ಟದ ಕೆಲಸ
ಗುರುಕುಲಮ್ ಪ್ರಧಾನ ಪಾಲಕರಾದ ಶಿವಪ್ರಸಾದ ಭಟ್ ಅಧ್ಯಕ್ಷತೆ ವಹಿಸಿ, ಸಾಯಿ ಸ್ವಾಸ್ಥ್ಯ ಆರೋಗ್ಯ ಕೇಂದ್ರದಿಂದ ಬಡಜನರಿಗೆ ಅನುಕೂಲವಾಗಲಿದೆ. ಮುಂದಿನ 9 ತಿಂಗಳಿನಲ್ಲಿ ಸ್ವಾಮೀಜಿಗಳಿಂದ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಸಂಸ್ಥೆಯ ಅನ್ನಪೂರ್ಣ ಪೌಷ್ಟಿಕ ಯೋಜನೆಯು ಈ ಕೇಂದ್ರದಲ್ಲಿ ಆರಂಭವಾಗಲಿದೆ. ಗರ್ಭಿಣಿಯರು ಇದರ ಲಾಭ ಪಡೆಯಬಹುದಾಗಿದೆ ಎಂದರು. ಕಾರ್ಯದರ್ಶಿ ಬಿ.ಆರ್. ಧೃವ ಉಲ್ಲಾಸ್, ಬೆನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಎಸ್.ಶೀಲ್ಪಾ ವೇದಿಕೆಯಲ್ಲಿ ಇದ್ದರು. ಈ ಸಂದರ್ಭದಲ್ಲಿ 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿ ಪುರಸ್ಕಾರ ನೀಡಲಾಯಿತು.
ಡಿ.10ರಂದು ಭಗೀರಥ ಸಹಕಾರ ಸಂಘ ಉದ್ಘಾಟನೆ
ಜಿಲ್ಲೆಯಲ್ಲಿ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದವರಿದ್ದಾರೆ. ಸಹಕಾರ ಸಂಘವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಗುರಿ ಇದೆ. ಭಗೀರಥ ಸಮಾಜ ಅತ್ಯಂತ ಹಿಂದುಳಿದಿರುವುದರಿಂದ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಉನ್ನತಿಗೇರಬೇಕಾದ ಅವಶ್ಯಕತೆ ಹೆಚ್ಚಿದೆ. ಆದ್ದರಿಂದ ಜಿಲ್ಲಾಮಟ್ಟದಲ್ಲಿ ಶ್ರೀ ಭಗೀರಥ ಸಹಕಾರ ಸಂಘದ ಸುದೀರ್ಘ ಪ್ರಯತ್ನದ ನಂತರ ಅಸ್ತಿತ್ವಕ್ಕೆ ಬಂದಿದೆ ಎಂದರು. ಶ್ರೀ ಭಗೀರಥ ಸಹಕಾರ ಸಂಘ ನಿಯಮಿತದ ವತಿಯಿಂದ ಜಿಲ್ಲೆಯ ಎಲ್ಲಾ ನಗರ, ಪಟ್ಟಣ ಮತ್ತು ಗ್ರಾಮಗಳಲ್ಲಿ ಸಮಾಜದ ಬಂದುಗಳನ್ನು ಸಂಘದ ನಿರ್ದೇಶಕ ಮಂಡಳಿ ಭೇಟಿ ಮಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಷೇರು ಸಂಗ್ರಹಿಸಲಾಗಿದೆ ಎಂದರು.
ಮಿಚಿಗನ್ ವಿವಿಯಲ್ಲಿ ಡಾ. ಕುರಿಯನ್ ಸ್ಮಾರಕ ದತ್ತಿ ಉಪನ್ಯಾಸ
ಡಾ. ವರ್ಗೀಸ್ ಕುರಿಯನ್ ದತ್ತಿನಿಧಿಯನ್ನು ಮಿಚಿಗನ್ ವಿ.ವಿ.ಯಲ್ಲಿ ಮಾನವ ಬಂಡವಾಳ, ಸಾಂಸ್ಥಿಕ ಉದ್ಯಮಶೀಲತೆ, ಸಾಮಾಜಿಕ ಸಬಲೀಕರಣ, ಭಾರತ ಮತ್ತು ದಕ್ಷಿಣ ಏಷ್ಯಾದಲ್ಲಿ ತಂತ್ರಜ್ಞಾನ, ಹೊಸ ಆವಿಷ್ಕಾರಗಳ ಕಡೆಗೆ ಡಾ. ವರ್ಗೀಸ್ ಕುರಿಯನ್ ಪರಂಪರೆಯನ್ನು ಮುಂದುವರಿಸಲು ನೆರವಾಗುವಂತೆ ಇಂಟರ್ನ್‌ಶಿಪ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳು ಮತ್ತು ತಜ್ಞರ ಸಭೆಗಳು ಸೇರಿದಂತೆ ಅಂತರ ರಾಷ್ಟ್ರೀಯವಾಗಿ ನೀಡಲಾಗುವ ಮಿಚಿಗನ್ ವಿವಿ ಕಾರ್ಯಕ್ರಮಗಳಲ್ಲಿ ತರಬೇತಿ ಕಾರ್ಯಕ್ರಮಗಳಲ್ಲಿ ಹಾಜರಾಗಲು ಮಿಚಿಗನ್ ವಿವಿಯ ವಿದ್ಯಾರ್ಥಿಗಳು, ವಿದ್ವಾಂಸರು ಭಾರತ ಮತ್ತು ದಕ್ಷಿಣ ಏಷ್ಯಾದ ನಿವಾಸಿಗಳನ್ನು ಬೆಂಬಲಿಸಲು ಬಳಸಲಾಗುತ್ತದೆ ಎಂದು ಶಿಮುಲ್ ನಿವೃತ್ತ ಉಪ ವ್ಯವಸ್ಥಾಪಕ ಡಿ.ವಿ. ಮಲ್ಲಿಕಾರ್ಜುನ ಹೇಳುತ್ತಾರೆ.
15 ದಿನದೊಳಗೆ ಕೆಎಫ್‌ಡಿ ಸಮಗ್ರ ಸಮೀಕ್ಷೆ ವರದಿ ಸಿದ್ಧಪಡಿಸಿ
ಬಹಳ ಮುಖ್ಯವಾಗಿ ತಾಲೂಕು ಆರೋಗ್ಯಾಧಿಕಾರಿ, ಗ್ರಾಪಂ ಪಿಡಿಓ ಹಾಗೂ ವೆಟರನರಿ ಸಿಬ್ಬಂದಿಗಳು ಎಚ್ಚರ ವಹಿಸಬೇಕು. ಮಾತ್ರವಲ್ಲದೇ ಎಲ್ಲಾ ಇಲಾಖೆಗಳೂ ಇವರಿಗೆ ಸಹಕಾರ ನೀಡುವುದು ಅಗತ್ಯ. ಈ ಮೊದಲು ರೋಗ ಉಲ್ಬಣಗೊಂಡಿರುವ ಮತ್ತು ಜೀವಹಾನಿ ಸಂಭವಿಸಿರುವ ಪ್ರದೇಶದಲ್ಲಿ ನಿರಂತರ ಸಭೆ ನಡೆಸಬೇಕು. ಜನಪ್ರತಿನಿಧಿಗಳ ಸಹಕಾರವನ್ನು ಪಡೆದು ಗ್ರಾಪಂ ಮಟ್ಟದಲ್ಲಿ ಆಗಾಗ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಇದು ಜನರ ಜೀವದ ಪ್ರಶ್ನೆಯಾಗಿದ್ದು. ಉದಾಸೀನತೆ ತೋರುವವರ ವಿರುದ್ಧ ಬಿಗಿ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಿದರು.
ಅರಳಿಸುವ ಕನ್ನಡ ಬೇಕೇ ಹೊರತು, ಕೆರಳಿಸುವುದಲ್ಲ
ಕಸ್ತೂರಬಾ ಬಾಲಕಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಡಾ. ಬಿ.ಎನ್. ತಂಬುಳಿ ಮಾತನಾಡಿ, ಕನ್ನಡಿಗರು ಸ್ವಾಭಿಮಾನಿಗಳು. ಇಲ್ಲಿ ಗಂಭೀರತೆ ಇದೆ, ಉದಾರತೆ ಇದೆ. ಕವಿಗಳಿದ್ದಾರೆ. ಕಾವ್ಯಗಳಿವೆ, ಶಿಲ್ಪಗಳಿವೆ. ವಿಶ್ವದಲ್ಲಿಯೇ ಶ್ರೇಷ್ಠವಾದ ಈ ಭಾಷೆಯನ್ನು ಅಕ್ಷರ ಕಲಿತವರು ಬೆಳೆಸಬೇಕಾಗಿದೆ ಎಂದರು. ಹಾಗೆ ನೋಡಿದರೆ ಅನಕ್ಷರಸ್ಥ ಸಮಾಜದಿಂದಲೇ ಕನ್ನಡ ಉಳಿದು ಬೆಳೆದಿದೆ. ಶತಮಾನಗಳಿಂದಲೂ ತಮ್ಮ ಹೊಟ್ಟೆಪಾಡಿಗಾಗಿ ಊರೂರು ತಿರುಗುತ್ತಿದ್ದ ಬಳೆಗಾರರು, ಬುಡಬುಡಕಿಯವರು, ಜೋಗಿಗಳು, ಕನ್ನಡ ಭಾಷೆಯನ್ನು ಅತ್ಯಂತ ಸ್ಪಷ್ಟವಾಗಿ ಮಾತನಾಡುತ್ತಾರೆ. ಅವರ ಕನ್ನಡ ಭಾಷೆಯನ್ನು ಕೇಳಿದರೆ ಮನಸ್ಸು ಖುಷಿಗೊಳ್ಳುತ್ತದೆ. ಅವರ ಜಾಣ್ಮೆ ಹಾಗಿತ್ತು. ಜನಪದರಿಂದಲೇ ಕನ್ನಡ ಭಾಷೆ ಉಳಿಯುತ್ತಿದೆ ಎಂದು ಹೇಳಿದರು.
ಮೈನವಿರೇಳಿಸಿದ ಯಲವಳ್ಳಿ ಹೋರಿ ಬೆದರಿಸುವ ಹಬ್ಬ
ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದ್ದನ್ನು ಜನರು ನೋಡಿ ರೋಮಾಂಚನಗೊಂಡರು. ಅಖಾಡದಲ್ಲಿ ತೇರಿನಂತೆ ಕಾಣುವ ಪೀಪಿ ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದಿತು.ಹೋರಿ ಹಬ್ಬದ ಆಯೋಜಿಸಿದ್ದ ಯಲವಳ್ಳಿ ಗ್ರಾಮಸ್ಥರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಬೇಲಿಯನ್ನು ನಿರ್ಮಿಸಿದ್ದರು. ಅಖಾಡದಲ್ಲಿ ಕ್ರಮವಾಗಿ ಒಂದೊಂದೇ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.
ಪದವೀಧರರ, ಶಿಕ್ಷಕರ ಕ್ಷೇತ್ರಗಳ ಕರಡು ಮತಪಟ್ಟಿ ಪ್ರಕಟ
ಅರ್ಜಿದಾರರು ಹಾಗೂ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಿದ ಅರ್ಜಿದಾರರು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬಹುದು. ಆಕ್ಷೇಪಣೆಗಳಿದ್ದಲ್ಲಿ 2023ರ ಡಿ.2 ರೊಳಗೆ ಸಲ್ಲಿಸಬಹುದು. ಅರ್ಹ ಶಿಕ್ಷಕರು ಮತ್ತು ಪದವೀಧರ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನಮೂನೆ-18 ಮತ್ತು 19ರಲ್ಲಿ ಸಲ್ಲಿಸಬಹುದು. ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯನ್ನು 2023ರ ಡಿಸೆಂಬರ್ 30ರಂದು ಪ್ರಕಟಿಸಲಾಗುವುದು ಎಂದರು.
ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಿಸಿದ ಶಿಕ್ಷಕನಿಂದ ಕ್ಷಮೆಯಾಚನೆ
ಪೋಷಕರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ದೂರು ನೀಡಿದರು. ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ, ವಸ್ತುಸ್ಥಿತಿ ಕುರಿತು ಪೋಷಕರಿಂದ ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಮೇಲ್ನೋಟಕ್ಕೆ ಶಿಕ್ಷಕ ಲೋಪ ಎಸಗಿರುವುದು ಕಂಡುಬಂದಿದ್ದು, ಶಿಕ್ಷಕರು ತಪ್ಪು ಒಪ್ಪಿಕೊಂಡ ಮೇರೆಗೆ ಪೋಷಕವರ್ಗ ದೂರು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.
26ರಂದು ದೀವರ ಸಾಂಸ್ಕತಿಕ ವೈಭವ ಕಾರ್ಯಕ್ರಮ
ಕಾರ್ಯಕ್ರಮವನ್ನು ಅಂದು ಬೆಳಗ್ಗೆ 10 ಗಂಟೆಗೆ ಸಮಾರಂಭವನ್ನು ಸಾರಗನ ಜಡ್ಡು ಕಾರ್ತಿಕೇಯ ಪೀಠದ ಯೋಗೇಂದ್ರ ಅವದೂತರು ಉದ್ಘಾಟಿಸುವರು. ನಿಟ್ಟೂರಿನ ನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಹರತಾಳು ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ಆಗಮಿಸುವರು. ಸಂಚಾಲಕ ನಾಗರಾಜ ನೇರಿಗೆ ಉಪಸ್ಥಿತರಿರುವರು ಎಂದರು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 484
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved