• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ಹಿನ್ನೆಲೆ ಮತಪಟ್ಟಿಗೆ ಹೆಸರು ಸೇರ್ಪಡೆ, ಆಕ್ಷೇಪಣೆ ಸಲ್ಲಿಸಿ: ತಹಸೀಲ್ದಾರ್
ಶಿಕ್ಷಕರ ಕ್ಷೇತ್ರದ ಮತದಾನಕ್ಕಾಗಿ ಕಡ್ಡಾಯವಾಗಿ 3 ವರ್ಷ ಸೇವೆ ಸಲ್ಲಿಸಿರಬೇಕು. ಪ್ರಸ್ತುತ ಮತಕ್ಷೇತ್ರದಲ್ಲಿ 225 ಪುರುಷ ಹಾಗೂ 185 ಮಹಿಳಾ ಮತದಾರರು ಸೇರಿದಂತೆ ಒಟ್ಟು 410 ಮತದಾರರಿದ್ದಾರೆ. ಪದವೀಧರರ ಕ್ಷೇತ್ರದಲ್ಲಿ 1,505 ಪುರುಷ ಹಾಗೂ 1,307 ಮಹಿಳಾ ಮತದಾರರು, ಇತರೆ 1 ಸೇರಿದಂತೆ ಒಟ್ಟು 2813 ಮತದಾರರಿದ್ದಾರೆ. ಕ್ಷೇತ್ರದಲ್ಲಿ 5 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಹೊಳೆಹೊನ್ನೂರಿನಲ್ಲಿ 1, ಬಿ.ಆರ್.ಪಿ 1 ಹಾಗೂ ನಗರ ವ್ಯಾಪ್ತಿಯಲ್ಲಿ ಮೂರು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.
26ರಿಂದ ತೇರಾ ಕೋಟಿ ಜಪ ಸಾಂಗತಾ ಯಜ್ಞ: ಸಂತೋಷ ಭಾರದ್ವಾಜ್
27ರಂದು ಬೆಳಗ್ಗೆ 9ರಿಂದ ಗೋಪೂಜೆ ಸಹಿತ ರಾಮತಾರಕ ಹೋಮ ಆರಂಭವಾಗಲಿದೆ. 11 ಗಂಟೆಗೆ ಪೂರ್ಣಾಹುತಿ, 11:30ಕ್ಕೆ ದೀಪ ಪ್ರಜ್ವಲನೆ ಮತ್ತು ಸಭಾ ಕಾರ್ಯಕ್ರಮ, ಸ್ವಾಮೀಜಿ ಅವರ ಆಶೀರ್ವಚನ ನಡೆಯಲಿದ್ದು, 12.30ರಿಂದ ಅನ್ನಸಂತರ್ಪಣೆ ಜರುಗಲಿದೆ ಎಂದು ವಿವರಿಸಿದರು. ಸಂಜೆ 4 ರಿಂದ ಮಹಿಳೆಯರಿಂದ ಭಜನೆ, ಆಯ್ದ ಕಲಾವಿದರಿಂದ ಯಕ್ಷ ರಸಸಂಜೆ, ರಾತ್ರಿ 8.30ಕ್ಕೆ ಶೇಜಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ. 28ರಂದು ಬೆಳಗ್ಗೆ 9.30ಕ್ಕೆ ಗೋಪೂಜೆ ಸಹಿತ ಹೋಮ, 10.30ಕ್ಕೆ ಸಾಧು ಸಂತರಿಂದ ಪೂರ್ಣಾಹುತಿ, 11 ಗಂಟೆಗೆ ಸಭಾ ಕಾರ್ಯಕ್ರಮ, ಗಣ್ಯರಿಗೆ ಸನ್ಮಾನ, ಬಳಿಕ ಸ್ವಾಮೀಜಿಗಳ ಆಶೀರ್ವಚನ ನಡೆಯಲಿದೆ ಎಂದರು.
ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳ ಅನಾವರಣ ಅಗತ್ಯ: ಶಾಸಕಿ ಶಾರದಾ
ಮಕ್ಕಳು ಎಲ್ಲರ ಜೊತೆ ನಿರ್ಭೀತಿಯಿಂದ ಮತ್ತು ಮುಕ್ತವಾಗಿ ಬೆರೆಯುವ ಮನಃಸ್ಥಿತಿ ಬೆಳೆಸಿಕೊಳ್ಳಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಿದೆ. ಹಾಗಾಗಿ, ಪ್ರತಿಯೊಬ್ಬ ಮಗುವೂ ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪೋಷಕರು ಮತ್ತು ಶಿಕ್ಷಕರು ಮುತುವರ್ಜಿ ವಹಿಸಬೇಕು ಎಂದರು.
ಎಲ್ಲ ವಿಷಯಗಳಲ್ಲಿ ಗೊಂದಲ ಸೃಷ್ಟಿಸೋದೇ ಕಾಂಗ್ರೆಸ್‌ ಕೆಲಸ: ಚನ್ನಬಸಪ್ಪ ಟೀಕೆ
ಮಾಜಿ ಸಚಿವ ವಿ ಸೋಮಣ್ಣ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ನಂತರ ಬಿಜೆಪಿಯಲ್ಲಿ ಗೊಂದಲಗಳಿಲ್ಲ. ಕೆಲವರಲ್ಲಿ ನೋವು, ಬೇಸರ, ಅಸಮಾಧಾನ ಇರಬಹುದು. ಇದನ್ನು ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯದ ನಾಯಕರಾದ ಬಿ.ಎಸ್‌. ಯಡಿಯೂರಪ್ಪ, ಈಶ್ವರಪ್ಪ, ನಳೀನ್‌ಕುಮಾರ್ ಕಟೀಲು ಮೊದಲಾದವರು ಸರಿಪಡಿಸುತ್ತಾರೆ ಎಂದು ಹೇಳಿದರು.
ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಪಾಠಗಳ ವಿಳಂಬ ಖಂಡಿಸಿ ಪ್ರತಿಭಟನೆ
ಕಾಲೇಜಿನಲ್ಲಿ ಸುಮಾರು 150ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಇದ್ದಾರೆ. ವಾರಕ್ಕೆ 2400 ಗಂಟೆ ತರಗತಿಗಳು ನಡೆಯಬೇಕಿದೆ. ಆದರೆ ನಡೆಯುತ್ತಿಲ್ಲ. ಹೀಗಾದರೆ ನಮ್ಮ ವಿದ್ಯಾಭ್ಯಾಸದ ಕತೆ ಏನು ಎಂದು ಪ್ರಶ್ನಿಸಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳು ಧಿಕ್ಕಾರ ಕೂಗಿದರು. ಅನಂತರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸ್ವಾಮಿ ವಿವೇಕಾನಂದ ಶಾಲೆಗೆ ಬೆಳ್ಳಿಹಬ್ಬ ಸಂಭ್ರಮ: ದಿವಾಕರ ಭಾವೆ
ಕಳೆದ 7 ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುತ್ತಿದೆ. ತಾಲೂಕಿನಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯೊಂದಿಗೆ ಉತ್ತೀರ್ಣರಾಗುತ್ತಿದ್ದಾರೆ. ಹಲವು ವಿದ್ಯಾರ್ಥಿಗಳು ಕ್ರೀಡೆ, ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪಾಲ್ಗೊಂಡಿದ್ದಾರೆ. 2017-18ನೇ ಸಾಲಿನಲ್ಲಿ 7ನೇ ತರಗತಿ ವಿದ್ಯಾರ್ಥಿಯು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆಯೋಜಿಸಿದ್ದ ಇನ್‌ಸ್ಪೈರ್ ಅವಾರ್ಡ್‌, ವಿಜ್ಞಾನ ಮಾದರಿ ರಚನೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಂಸ್ಥೆಯು ಕೇವಲ ಶೈಕ್ಷಣಿಕ ಕ್ಷೇತ್ರವಲ್ಲದೇ, ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ವಿಶೇಷ ಸಾಧನೆ ತೋರಿದೆ ಎಂದರು.
ಇಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ
ಜಿಲ್ಲಾ ಉಪಾಧ್ಯಕ್ಷ ಪುಟ್ಟನಗೌಡ ಮಾತನಾಡಿ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ಬಾರಿ ಹಾಗೂ ಈ ಬಾರಿ ಬರಗಾಲ ಉಂಟಾಗಿದೆ. ರಾಜ್ಯದ ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದರೂ, ಯಾವುದೇ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಮಳೆ ಕೊರತೆ ನಡೆವೆಯೂ ಮೆಕ್ಕೆಜೋಳ ಎಕರೆಗೆ 3ರಿಂದ 4 ಕ್ವಿಂಟಲ್ ಬೆಳೆ ಬಂದಿದೆ. ರೈತರು ಸಂಕಷ್ಟದಲ್ಲಿ ಇದ್ದರೂ ಮಾರುಕಟ್ಟೆ ಇಲ್ಲ. ಮೆಕ್ಕೆಜೋಳಕ್ಕೆ ವಿಮೆ ಕಟ್ಟಿದರೂ ಪರಿಹಾರ ನೀಡದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತಕ್ಷಣ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ಬೇಸಿಗೆಯಲ್ಲಿ ಕುಡಿಯುವ ನೀರು, ಮೇವಿನ ಕೊರತೆ ಆಗದಿರಲಿ
ನರೇಗಾ ಅಡಿಯಲ್ಲಿ ತಾಪಂ ಇ.ಒ.ಗಳು ಕಾರ್ಮಿಕರಿಗೆ ಕೆಲಸಗಳನ್ನು ನೀಡಬೇಕು. ಸಾಗರ ಮತ್ತು ಸೊರಬದಲ್ಲಿ ಬೇಡಿಕೆ ಹೆಚ್ಚಿದೆ. ಗುರುತಿಸಿ ಕೆಲಸಗಳನ್ನು ನೀಡಬೇಕು. ಮಳೆ ಬಂದು ಬಿದ್ದಿರುವ, ಹಾನಿಗೊಳಗಾದ ಮನೆಗಳ ಜಿಪಿಎಸ್ ಬಾಕಿ ಇರುವುದನ್ನು ಪಿಡಿಒಗಳು ಪರಿಶೀಲಿಸಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ಎಲ್ಲ ತಹಸೀಲ್ದಾರ್, ಇ.ಒ.ಗಳು, ಪಿ.ಡಿ.ಒ.ಗಳ ಜೊತೆಗೂಡಿ ಪ್ರತಿ 15 ದಿನಗಳಿಗೆ ಒಮ್ಮೆ ಬರ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಬೇಕು. ಜಾನುವಾರು ಮೇವಿಗೆ ಕೊರತೆ ಆಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
27ರಂದು ಮೆಸ್ಕಾಂ ಕಿರುಕುಳ ಖಂಡಿಸಿ ಪ್ರತಿಭಟನೆ
ಪ್ರತ್ಯೇಕ ಮೀಟರ್ ಹಾಕಿಸಲು ಪ್ರತಿ ಅಶ್ವಶಕ್ತಿಗೆ ₹10 ಸಾವಿರಗಳಷ್ಟು ದುಬಾರಿ ವೆಚ್ಚ ತಗುಲಲಿದೆ. ಅಲ್ಲದೇ, 10 ತಿಂಗಳ ಅವಧಿಗೆ ಅನಗತ್ಯವಾಗಿ ಕನಿಷ್ಠ ಶುಲ್ಕ ತರಬೇಕಾಗಿದೆ. ಮಲೆನಾಡಿನ ವಾಣಿಜ್ಯ ಬೆಳೆ ಆಗಿರುವ ಅಡಕೆಯಿಂದ ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ನೂರಾರು ಕೋಟಿ ಆದಾಯವಿದೆ. ಲಕ್ಷಾಂತರ ಮಂದಿ ದುಡಿಯುವ ಕೈಗಳಿಗೆ ಉದ್ಯೋಗ ಸೃಷ್ಟಿಯಾಗುತ್ತಿದೆ. ಹೀಗಿರುವಾಗ ಅವಮಾನ ಆಗುವಂತೆ ನಡೆದುಕೊಳ್ಳುತ್ತಿರುವ ಮೆಸ್ಕಾಂ ವಿಧಿಸುವ ದಂಡವನ್ನು ರೈತರು ಕಟ್ಟಬಾರದು ಎಂದರು.
ತರಲಘಟ್ಟ ಗ್ರಾಪಂ ಅಧ್ಯಕ್ಷರಾಗಿ ಮಂಜಮ್ಮ, ಉಪಾಧ್ಯಕ್ಷರಾಗಿ ಕುಮಾರನಾಯ್ಕ
ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಕೆಲವೇ ಸಮಯದಲ್ಲಿಯೇ ನಡೆದ ಈ ಅನಿರೀಕ್ಷಿತ ಬೆಳವಣಿಗೆ ತಾಲೂಕಿನಲ್ಲಿ ಪಕ್ಷದ ಸಂಘಟನೆಗೆ ಭವಿಷ್ಯದಲ್ಲಿ ಸವಾಲಾಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಈ ಪರಂಪರೆ ಇತರೆ ಗ್ರಾ.ಪಂ.ಗಳಲ್ಲಿ ಪುನರಾವರ್ತನೆ ಆಗದಂತೆ ಎಲ್ಲ ರೀತಿಯ ಎಚ್ಚರಿಕೆ ಬಿಜೆಪಿ ವಹಿಸುವುದೋ ಅಥವಾ ಕಾಂಗ್ರೆಸ್ ಆತ್ಮವಿಶ್ವಾಸ ಇಮ್ಮಡಿಯಾಗಿ ಆಪರೇಷನ್ ಹಸ್ತದ ಪ್ರಭಾವ ಹೆಚ್ಚಾಗುವುದೋ ಕಾದುನೋಡಬೇಕು.
  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 484
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved