ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ಧಾಕ್ಷಿಣ್ಯ ಕ್ರಮ: ಡೀಸಿ ಗುರುದತ್ತ ಹೆಗಡೆಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಯಾವುದೇ ಆತಂಕ ಪಡದೆ, ಸರ್ಕಾರಿ ನೌಕರರು ನಿರ್ಭೀತಿಯಿಂದ ಪ್ರಾಮಾಣಿಕವಾಗಿ ಜನಸಾಮಾನ್ಯರ ಸೇವೆಗೆ ಸಮರ್ಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.