ಪ್ರಾಮಾಣಿಕ ಪತ್ರಕರ್ತರಿಗೆ ಪ್ರಶಸ್ತಿ ಹುಡುಕಿ ಬರುತ್ತವೆ: ಚಿದಾನಂದಗೌಡಪ್ರಾಮಾಣಿಕ ಮತ್ತು ವಸ್ತುನಿಷ್ಠ ವರದಿಗಾರಿಕೆಯಲ್ಲಿ ಎಲೆಮರೆಯ ಕಾಯಂತೆ ಇದ್ದು ಸಮಾಜ ತಿದ್ದುವ ಕಾರ್ಯದಲ್ಲಿ ಮಗ್ನರಾಗುವ ಪತ್ರಕರ್ತರಿಗೆ ಪ್ರಶಸ್ತಿ, ಸನ್ಮಾನಗಳು ತಾವಾಗಿಯೇ ಹುಡುಕಿ ಬರುತ್ತವೆ. ಇಂಥ ಪ್ರವೃತ್ತಿಯಲ್ಲಿರುವವರು ಇಂದಿನ ಯುವ ಪತ್ರಕರ್ತರಿಗೆ ಮಾದರಿಯಾಗಿದ್ದಾರೆ ಎಂದು ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್.ಚಿದಾನಂದಗೌಡ ಹೇಳಿದರು.