ಕೆ.ಎಸ್. ಈಶ್ವರಪ್ಪ ಜನ್ಮದಿನ: ಅರ್ಥಪೂರ್ಣ ಆಚರಣೆಗೆ ಸಿದ್ದತೆಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ 77ನೇ ವರ್ಷದ ಜನ್ಮದಿನದ ಅಂಗವಾಗಿ ನಗರದ ಸಾಂಸ್ಕೃತಿಕ ಸಂಸ್ಥೆ ಶ್ರೀಗಂಧ ವತಿಯಿಂದ ಜೂ.10 ಮತ್ತು 11ರಂದು ಎರಡು ದಿನಗಳ ಕಾಲ ಹೋಮ, ಹವನ, ಯಾಗಗಳ ಜೊತೆಗೆ ಧಾರ್ಮಿಕ ಸಭೆ ಮತ್ತು ಪ್ರತಿಭಾ ಪುರಸ್ಕಾರಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕಾರ್ಯಕ್ರಮದ ರೂವಾರಿಗಳು ಆದ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎ.ಜೆ. ರಾಮಚಂದ್ರ ತಿಳಿಸಿದರು.