ಶಾಸಕರ ಕೈಗೊಂಬೆಯಾಗಿ ನೇರ ಲೂಟಿಗಿಳಿದ ಅಧಿಕಾರಿಗಳುರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕ್ಷೇತ್ರದಾದ್ಯಂತ ಲೂಟಿಗಿಳಿದ್ದಿದ್ದಾರೆ. ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಕೆ ನೀಡಿದರು.