ಕಠಿಣ ಶ್ರಮದಿಂದ ಗುರಿ ತಲುಪಲು ಸಾಧ್ಯ: ಮುಖೇಶ್ ಮತ್ತೀಕೋಟೆಸಮಾಜದಲ್ಲಿನ ಶೋಷಿತರು,ಕೆಳಸ್ತರದವರು ಸಾಮಾಜಿಕವಾಗಿ,ಆರ್ಥಿಕವಾಗಿ ಸದೃಡವಾಗಲು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಉನ್ನತ ವ್ಯಾಸಂಗ ಪ್ರತಿಯೊಬ್ಬರ ಗುರಿಯಾಗಬೇಕು. ಐಎಎಸ್ ಐಪಿಎಸ್ ಕೇಡರ್ ಗಳಲ್ಲಿ ಸೇವೆ ಸಲ್ಲಿಸುವ ಗುರಿ ಹೊಂದಿ ಆ ದಿಸೆಯಲ್ಲಿ ಕಠಿಣ ಪ್ರಯತ್ನ, ಶ್ರಮದಿಂದ ಮಾತ್ರ ನಿಶ್ಚಿತ ಗುರಿ ತಲುಪಲು ಸಾದ್ಯ ಎಂದು ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾ ಸಂಚಾಲಕ ಮುಖೇಶ್ ಮತ್ತೀಕೋಟೆ ಹೇಳಿದರು.