ಕಳೆದ ಸಾಲಿನಲ್ಲಿ 1,697.68 ಕೋಟಿ ರು. ಅಲ್ಪಾವಧಿ ಬೆಳೆ ಸಾಲ ವಿತರಣೆ: ಡಾ.ಎಂ.ಎನ್‌.ಆರ್‌.

| Published : Jan 04 2025, 12:32 AM IST

ಕಳೆದ ಸಾಲಿನಲ್ಲಿ 1,697.68 ಕೋಟಿ ರು. ಅಲ್ಪಾವಧಿ ಬೆಳೆ ಸಾಲ ವಿತರಣೆ: ಡಾ.ಎಂ.ಎನ್‌.ಆರ್‌.
Share this Article
  • FB
  • TW
  • Linkdin
  • Email

ಸಾರಾಂಶ

2025-26ನೇ ಸಾಲಿಗೆ ವಿವಿಧ ಬೆಳೆಗಳಿಗೆ ನೀಡುವ ಅಲ್ಪಾವಧಿ ಬೆಳೆಸಾಲದ ಮಿತಿಯನ್ನು ಕೃಷಿತಜ್ಞ ಪ್ರತಿನಿಧಿಗಳೊಂದಿಗೆ, ನಬಾರ್ಡ್ ಲೀಡ್ ಬ್ಯಾಂಕ್. ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಇಲಾಖೆ, ತೋಟಗಾರಿಕೆ, ಕೃಷಿ ಹಾಗೂ ಇತರ ಇಲಾಖಾಧಿಕಾರಿಗಳ ಸಮಾಲೋಚನೆಯ ಮೂಲಕ ನಿಗದಿಪಡಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

2024-25ನೇ ಪಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು ನಿಗದಿಪಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಶುಕ್ರವಾರ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಎಸ್.ಸಿಡಿಸಿಸಿ ಬ್ಯಾಂಕ್ 2024-25ನೇ ಸಾಲಿಗೆ ಬೆಳೆಸಾಲಗಳ ಗುರಿಯು 2,150.00 ಕೋಟಿ ರು. ಆಗಿದ್ದು, ಈಗಾಗಲೇ 1,697.68 ಕೋಟಿ ರು. ಬೆಳೆಸಾಲ ನೀಡಲಾಗಿದೆ. 31-03-2024ರ ಅಂತ್ಯಕ್ಕೆ ಬೆಳೆಸಾಲಗಳ ಹೊರಬಾಕಿ 2,025.04 ಕೋಟಿ ರು. ಆಗಿದೆ ಎಂದರು.ನಬಾರ್ಡ್ ಪುನರ್ಧನ ಸಾಲ ಹಾಗೂ ಎಸ್‌ಪಿಡಿಸಿಸಿ ಬ್ಯಾಂಕಿನ ಸ್ವಂತ ಬಂಡವಾಳದಿಂದ ಕೃಷಿ ಉದ್ದೇಶಕ್ಕಾಗಿ 2023-24ನೇ ಸಾಲಿನಲ್ಲಿ ಒಟ್ಟು 2,169.27 ಕೋಟಿ ರು. ನೀಡಿದ್ದು, ಇದರಲ್ಲಿ 136.99 ಕೋಟಿ ರು. ಅವಧಿ ಸಾಲವನ್ನು ನೀಡಲಾಗಿದೆ. 2024-25ನೇ ಸಾಲಿಗೆ ಈಗಾಗಲೇ 117.20 ಕೋಟಿ ರು. ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲವನ್ನು ಬ್ಯಾಂಕ್ ನೀಡಿದೆ ಎಂದು ಡಾ. ರಾಜೇಂದ್ರ ಕುಮಾ‌ರ್ ತಿಳಿಸಿದರು.

2025-26ನೇ ಸಾಲಿಗೆ ವಿವಿಧ ಬೆಳೆಗಳಿಗೆ ನೀಡುವ ಅಲ್ಪಾವಧಿ ಬೆಳೆಸಾಲದ ಮಿತಿಯನ್ನು ಕೃಷಿತಜ್ಞ ಪ್ರತಿನಿಧಿಗಳೊಂದಿಗೆ, ನಬಾರ್ಡ್ ಲೀಡ್ ಬ್ಯಾಂಕ್. ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಇಲಾಖೆ, ತೋಟಗಾರಿಕೆ, ಕೃಷಿ ಹಾಗೂ ಇತರ ಇಲಾಖಾಧಿಕಾರಿಗಳ ಸಮಾಲೋಚನೆಯ ಮೂಲಕ ನಿಗದಿಪಡಿಸಲಾಯಿತು.

ಸಭೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ. ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ, ಮಹೇಶ್ ಹೆಗ್ಡೆ, ಎಸ್. ಬಿ. ಜಯರಾಮ ರೈ, ಕುಶಾಲಪ್ಪ ಗೌಡ, ಎಸ್. ಎನ್. ಮನ್ಮಥ, ಕೆ. ಜೈರಾಜ್ ಬಿ. ರೈ. ಸದಾಶಿವ ಉಳ್ಳಾಲ್, ರಾಜೇಶ್ ರಾವ್, ದ.ಕ ಹಾಗೂ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್. ಎನ್. ರಮೇಶ್ ಮತ್ತು ಲಾವಣ್ಯ, ನಬಾರ್ಡ್ ಡಿಡಿಎಂ ಸಂಗೀತಾ ಕರ್ತಾ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಮಂಗಳೂರು ಲೀಡ್ ಡಿಸ್ಟ್ರಿಕ್ಟ್ ಮೆನೇಜರ್‌ ಕವಿತಾ ಶೆಟ್ಟಿ, ಉಡುಪಿ ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಹರೀಶ್ ಜಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ, ದಕ್ಷಿಣ ಕನ್ನಡ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ್, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಎನ್. ಎ. ಶೆಟ್ಟಿ, ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಉಳ್ಳಾಲ್ ಇದರ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಆರತಿ ಯಾದ್‌ವಾಡ್‌, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಯ್ಯ ಡಿ., ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀದೇವಿ, ರಬ್ಬರ್ ಬೋರ್ಡ್ ಡೆವೆಲಪ್‌ಮೆಂಟ್‌ ಅಫೀಸರ್ ಟಿ. ವಿ. ಮಾಥ್ಯೂ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್, ಸುಕನ್ಯಾ ಹಾಗೂ ಎಸ್. ಎಂ. ರಘು, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ ಮೆನೇಜರ್ ರವಿರಾಜ್ ಉಡುಪ ಮತ್ತು ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಇದ್ದರು.