ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಎ.ಎಸ್.ಪೊನ್ನಣ್ಣ

| Published : Jan 13 2024, 01:31 AM IST

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಎ.ಎಸ್.ಪೊನ್ನಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಟಾಸ್ಕ್‌ಫೊರ್ಸ್ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ರೀತಿಯ ಸಮಸ್ಯೆಯಾಗಬಾರದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.

ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಟಾಸ್ಕ್‌ಫೊರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಲ ಜೀವನ್ ಮೀಷನ್ ಯೋಜನೆಯಡಿ ಬಾಕಿ ಇರುವ ಎಲ್ಲ ಕಾಮಗಾರಿಗಳು ತುರ್ತಾಗಿ ಪೂರ್ಣಗೊಳ್ಳಬೇಕು. ಯಾವುದೇ ಸಾರ್ವಜನಿಕ ದೂರುಗಳು ಬಾರದ ರೀತಿಯಲ್ಲಿ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯುತ್ ಇಲಾಖೆಯಿಂದ ಸಮರ್ಪವಾಗಿ ವಿದ್ಯುತ್ ಪೂರೈಸಿ ಎಎಒ ನೀರಿನ ಟ್ಯಾಂಕರ್‌ಗಳಿಂದ ನೀರನ್ನು ಪಂಪ್ ಮಾಡಲು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಕ್ರಮವಹಿಸಲು ಸೆಸ್ಕ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇದ್ದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪಟ್ಟಿ ಮಾಡಿ ನೀಡುವಂತೆ ತಿಳಿಸಿದರು. ಬೋರ್‌ವೆಲ್, ಮೋಟಾರ್ ಪಂಪ್, ವಿದ್ಯುತ್, ನೀರಿನ ಟ್ಯಾಂಕರ್ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ವಿರಾಜಪೇಟೆ ತಹಸೀಲ್ದಾರ್ ರಾಮಚಂದ್ರ, ಪ್ರವೀಣ್ ಕುಮಾರ್, ತಾ.ಪಂ. ಇ.ಒ.ಗಳಾದ ಕೆ.ಸಿ.ಅಪ್ಪಣ್ಣ, ಶೇಖರ್, ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.