ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕಂದೂರು ಗ್ರಾಮದ ಶಾಸ್ತ ಯುವಕ ಸಂಘದ ವತಿಯಿಂದ ಗ್ರಾಮದ ರುದ್ರಭೂಮಿಯಲ್ಲಿ ಶ್ರಮದಾನ ನಡೆಯಿತು.ನೂರಾರು ಕೂಲಿ ಕಾರ್ಮಿಕ ಕುಟುಂಬಗಳು ನೆಲೆಸಿರುವ ಕಲ್ಕಂದೂರು ಬಾಣೆಯಲ್ಲಿ ಇರುವ ಸ್ಮಶಾನ ಕಾಡು ಪಾಲಾಗಿದ್ದು, ಯಾರಾದರೂ ಮೃತರಾದರೆ ಅಂತ್ಯ ಸಂಸ್ಕಾರಕ್ಕೆ ಸ್ಥಳ ಹುಡುಕುವ ಸನ್ನಿವೇಶ ನಿರ್ಮಾಣಗೊಂಡಿತ್ತು. ಇದನ್ನು ಮನಗಂಡ ಗ್ರಾಮದ ಶಾಸ್ತ ಯುವಕ ಸಂಘದ ಸದಸ್ಯರು ತಲಾ 1 ಸಾವಿರ ರು. ನೆರವು ಒದಗಿಸಿ, ಜೆಸಿಬಿ ಯಂತ್ರದ ಮೂಲಕ ಕಾಡು, ಗಿಡಗಂಟಿಗಳನ್ನು ತೆರವುಗೊಳಿಸಿದರು.ಕೂಲಿ ಕಾರ್ಮಿಕ ಕುಟುಂಬಗಳು ನೆಲೆಸಿರುವ ಕಲ್ಕಂದೂರು ಬಾಣೆ ಗ್ರಾಮದಲ್ಲಿ ಯಾರಾದರೂ ಮೃತರಾದರೆ ಇದೇ ಸ್ಮಶಾನ ಜಾಗದಲ್ಲಿ ಶವಸಂಸ್ಕಾರ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಸೌದೆಗಳಿಗೂ ಸಮಸ್ಯೆಯಾಗುತ್ತಿದೆ. ಮಳೆಗಾಲದಲ್ಲಿ ಶವಸಂಸ್ಕಾರಕ್ಕೆ ಪರದಾಡುವ ಸ್ಥಿತಿಯಿದೆ. ಈ ಬಗ್ಗೆ ಶಾಸಕ ಡಾ. ಮಂತರ್ ಗೌಡ ಅವರ ಗಮನ ಸೆಳೆದು ಸ್ಮಶಾನದಲ್ಲಿ ಸಿಲಿಕಾನ್ ಚೇಂಬರ್ ಅಳವಡಿಸಲು ಅನುದಾನ ಕಲ್ಪಿಸುವಂತೆ ಮನವಿ ಮಾಡಲಾಗುವುದು ಎಂದು ಶಾಸ್ತ ಯುವಕ ಸಂಘದ ಕಾರ್ಯದರ್ಶಿ ಲೋಕೇಶ್ ತಿಳಿಸಿದ್ದಾರೆ.ಶ್ರಮದಾನದಲ್ಲಿ ಸಂಘದ ಅಧ್ಯಕ್ಷ ಕೃಷ್ಣಕುಮಾರ್, ಖಜಾಂಚಿ ಸುರೇಶ್, ಪದಾಧಿಕಾರಿಗಳಾದ ಹರೀಶ್, ರಮೇಶ್, ಲಿಂಗರಾಜು, ಶಿವಕುಮಾರ್, ದೀಕ್ಷಿತ್, ಮಹೇಶ್, ಚೆನ್ನ, ಪ್ರಜ್ವಲ್, ಸ್ವಾಮಿಗೌಡ, ಅನಿಲ್ ಸೇರಿದಂತೆ ಇತರರು ಭಾಗಿಯಾಗಿದ್ದರು.ಕಲ್ಲಂದೂರು ಗ್ರಾಮದ ರುದ್ರಭೂಮಿಯಲ್ಲಿ ಶ್ರಮದಾನ
ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕಂದೂರು ಗ್ರಾಮದ ಶಾಸ್ತ ಯುವಕ ಸಂಘದ ವತಿಯಿಂದ ಗ್ರಾಮದ ರುದ್ರಭೂಮಿಯಲ್ಲಿ ಶ್ರಮದಾನ ನಡೆಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.