ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸ್ವಾವಲಂಭಿ ಸಾರಥಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ ಹಾಗೂ ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಶನಿವಾರ ವಾಹನದ ಕೀ ವಿತರಿಸಿದರು.ಈ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ ಎನ್ನುವುದು ಇದು ಕೂಡ ಒಂದು ಪ್ರತ್ಯಕ್ಷ ಸಾಕ್ಷಿಯಾಗಿದೆ. ನಿರುದ್ಯೋಗ ನಿವಾರಣೆಗೆ ಹಲವಾರು ಯೋಜನೆಗಳನ್ನು ನಮ್ಮ ಸರ್ಕಾರ ಕೈಗೊಂಡಿದೆ. ಅದರಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ದೇವರಾಜು ಅರಸು ನಿಗಮ, ಎಸ್ಸಿ ಅಭಿವೃದ್ಧಿ ನಿಗಮ ಹೀರೆ ಹಲವು ನಿಗಮಗಳ ಮೂಲಕ ನಿರುದ್ಯೋಗ ಚಾಲಕರಿಗೆ ವಿಶೇಷ ಸಹಾಯಧನ ನೀಡುವುದರೊಂದಿಗೆ ವಾಹನ ನೀಡಿ ಅನುಕೂಲ ಮಾಡಿಕೊಡುವ ಯೋಜನೆ ಬಹಳ ಉಪಯುಕ್ತವಾಗಿದೆ. ವಾಹನಗಳನ್ನು ಪಡೆದು ಜೀವನ ನಡೆಸುತ್ತಿರುವವರು ಸರ್ಕಾರದ ನಿಯಮದಂತೆ ಸರಿಯಾಗಿ ವಿಮೆ ಪಾವತಿಸಿ. ವಾಹನ ಚಾಲನಾ ಪರವಾನಗಿ ಸೇರಿದಂತೆ ಎಲ್ಲ ನಿಯಮಗಳನ್ನು ಪಾಲಿಸಬೇಕು. ಕುಡಿದು ವಾಹನ ಓಡಿಸದೇ ಎಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಫಲಾನುಭವಿಗಳು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.ಈ ವೇಳೆ ತಹಸೀಲ್ದಾರ್ ಕೀರ್ತಿ ಚಾಲಕ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನೀಲಕಮಠರಾವ ನಾಡಗೌಡ(ಚಿನ್ನುಧಣಿ), ಗೋಪಿ ಮಡಿವಾಳರ, ಕೋಳೂರ ಗ್ರಾಪಂ ಅಧ್ಯಕ್ಷ ಮಂಜುನಾಥಗೌಡ ಪಾಟೀಲ, ಮಲ್ಲಿಕಾರ್ಜನ ಬಾಗೇವಾಡಿ ಸೇರಿದಂತೆ ಹಲವರು ಇದ್ದರು.