ಅತ್ಯುತ್ತಮ ಸ್ವೀಪ್ ಚಟುವಟಿಕೆ ಕೈಗೊಂಡು ಮತದಾನ ಪ್ರಮಾಣ ಹೆಚ್ಚಿಸಿ: ಕೆ.ಎಂ.ಗಾಯತ್ರಿ

| Published : Mar 28 2024, 12:47 AM IST

ಅತ್ಯುತ್ತಮ ಸ್ವೀಪ್ ಚಟುವಟಿಕೆ ಕೈಗೊಂಡು ಮತದಾನ ಪ್ರಮಾಣ ಹೆಚ್ಚಿಸಿ: ಕೆ.ಎಂ.ಗಾಯತ್ರಿ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಗಳಿಗೆ ಗುಣಮಟ್ಟದ ಮೂಲಭೂತ ಸೌಕರ್ಯವನ್ನು ಸಕಾಲಕ್ಕೆ ಒದಗಿಸಬೇಕು. ಪಿಡಿಒ ಅವರು ಚಲನವಲನ ನಿರ್ವಹಿಸಿ, ಎಲ್ಲಾ ಮಾಹಿತಿ ನಮೂದಿಸಬೇಕು. ಮತಗಟ್ಟೆ ಅಧಿಕಾರಿಗಳ ಜೊತೆ ಚರ್ಚಿಸಿ ಅವರಿಗೆ ಅಗತ್ಯವಿರುವ ವಸ್ತುಗಳನ್ನು ನಿಗದಿತ ಸಮಯಕ್ಕೆ ಪೂರೈಸಲು ಕ್ರಮವಹಿಸಿ

-ಫೋಟೋ 27 ಎಂವೈಎಸ್ 47

ಹಸ್ತಾಕ್ಷರ ಸಂಗ್ರಹ ಅಭಿಯಾನಕ್ಕೆ ಜಿಪಂ ಸಿಇಒ ಕೆ.ಎಂ. ಗಾಯಿತ್ರಿ ಚಾಲನೆ ನೀಡಿದರು.ಕನ್ನಡಪ್ರಭ ವಾರ್ತೆ ಮೈಸೂರು

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ವಿನೂತನವಾದ ಸ್ವೀಪ್ ಚಟುವಟಿಕೆ ನಡೆಸಿ ಮತದಾರರಿಗೆ ಜಾಗೃತಿ ಮೂಡಿಸುವ ಮೂಲಕ ಮತದಾನದ ಶೇಕಡವಾರು ಪ್ರಮಾಣ ಹೆಚ್ಚಿಸಬೇಕು ಎಂದು ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಕೆ.ಎಂ. ಗಾಯಿತ್ರಿ ತಿಳಿಸಿದರು.

ಲೋಕಸಭಾ ಚುನಾವಣೆ ಅಂಗವಾಗಿ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಚಟುವಟಿಕೆಯಡಿ ಮೈಸೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಆಡಳಿತ ಸೌಧದ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ‘ಹಸ್ತಾಕ್ಷರ ಸಂಗ್ರಹ ಅಭಿಯಾನಕ್ಕೆ'''' ಸಹಿ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಎಲ್ಲಾ ಸಾರ್ವಜನಿಕರಿಗೂ ಏ. 26 ರಂದು ಮತದಾನ ಮಾಡುವಂತೆ ಅರಿವು ಮೂಡಿಸಬೇಕು. ಮತದಾನದ ಮಹತ್ವ ಕುರಿತು ಅವರಿಗೆ ಮನವರಿಕೆ ಮಾಡುವಂತಹ ಸ್ವೀಪ್ ಚಟುವಟಿಕೆ ನಡೆಸಬೇಕು ಎಂದು ಎಲ್ಲಾ ಗ್ರಾಮ ಪಂಚಾಯಿತಿಯ ಪಿಡಿಒ ಅವರಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಗಳಿಗೆ ಗುಣಮಟ್ಟದ ಮೂಲಭೂತ ಸೌಕರ್ಯವನ್ನು ಸಕಾಲಕ್ಕೆ ಒದಗಿಸಬೇಕು. ಪಿಡಿಒ ಅವರು ಚಲನವಲನ ನಿರ್ವಹಿಸಿ, ಎಲ್ಲಾ ಮಾಹಿತಿ ನಮೂದಿಸಬೇಕು. ಮತಗಟ್ಟೆ ಅಧಿಕಾರಿಗಳ ಜೊತೆ ಚರ್ಚಿಸಿ ಅವರಿಗೆ ಅಗತ್ಯವಿರುವ ವಸ್ತುಗಳನ್ನು ನಿಗದಿತ ಸಮಯಕ್ಕೆ ಪೂರೈಸಲು ಕ್ರಮವಹಿಸಿ ಎಂದು ಅವರು ತಿಳಿಸಿದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ನೆರಳು, ಪ್ರಾಥಮಿಕ ಚಿಕಿತ್ಸಾ ಪೆಟ್ಟಿಗೆ ಸೇರಿದಂತೆ ಅಗತ್ಯ ಸೌಲಭ್ಯಕ್ಕಾಗಿ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಬೇಕು. ವಿಶ್ರಾಂತಿ ಕೊಠಡಿ ಮೀಸಲಿರಸಲು ಕ್ರಮವಹಿಸಬೇಕು. ವಿಷೇಶ ಮತಗಟ್ಟೆಯನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಿ ಎಂದು ಅವರು ಸಲಹೆ ನೀಡಿದರು.

ಪ್ರತಿಯೊಬ್ಬರೂ ಕಡ್ಡಾಯವಾಗಿ ಸಿ- ವಿಜಿಲ್ ಆಪ್ ಡೌನ್ಲೌಡ್ ಮಾಡಿಕೊಳ್ಳಬೇಕು. ಚುನಾವಣಾ ಅಕ್ರಮಗಳು ಕಂಡುಬoದರೆ ಕೂಡಲೇ ಆಪ್ ಮೂಲಕ ದೂರು ಸಲ್ಲಿಸಿ. ಪ್ರಥಮ ಬಾರಿಗೆ ಮತ ಹಾಕುವವರಿಗೆ ತಿಳುವಳಿಗೆ ನೀಡಲು ತರಬೇತಿ ಆಯೋಜಿಸಬೇಕು. ಹಿರಿಯ ನಾಗರಿಕರ ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನೇಮಿಸಿಕೊಳ್ಳಿ. ಒಟ್ಟಾರೆ ಯಾವುದೇ ಲೋಪ ಉಂಟಾಗದoತೆ ಪರಸ್ಪರ ಚರ್ಚಿಸಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಎಂದರು.

ಚುನಾವಣೆ ಸಿದ್ಧತೆಯ ಜೊತೆಗೆ ಬರಗಾಲ ಅನೇಕ ಗ್ರಾಮಗಳನ್ನು ವ್ಯಾಪ್ತಿಸಿದ್ದು, ಸಮರ್ಪಕ ಕುಡಿಯುವ ನೀರಿನ ಪೂರೈಸಲು ನಿಗಾವಹಿಸಿ ಕೆಲಸ ಮಾಡಬೇಕು. ನರೇಗಾ ಯೋಜನೆಯಡಿ ಹೆಚ್ಚಿನ ಜನರಿಗೆ ಉದ್ಯೋಗ ಕಲ್ಪಿಸುವ ಮೂಲಕ ಗುಳೆ ಹೋಗುವುದನ್ನು ತಡೆಗಟ್ಟಬೇಕು. ಹೆಚ್ಚಾಗಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಸ್ವೀಪ್ ನೋಡಲ್ ಅಧಿಕಾರಿ ಎಂ. ಶಾಂತಾ ತಾಪಂ ಇಒ ಎಸ್.ಪಿ. ಧರಣೇಶ್, ಅನುಷ್ಠಾನ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾ.ಪಂ. ಸಹಾಯಕ ನಿರ್ದೇಶಕರಾದ ಭವ್ಯಾ, ಗಂಗಾಧರ, ತಾಪಂ ಹಾಗೂ ತಾಲೂ ಕಚೇರಿ ಸಿಬ್ಬಂದಿ, ಎಲ್ಲಾ ಗ್ರಾಮ ಪಂಚಾಯಿತಿಯ ಪಿಡಿಒ, ಕಾರ್ಯದರ್ಶಿ, ಎಸ್ಡಿಎಎ ಮತ್ತು ಡಿಇಒ ಹಾಜರಿದ್ದರು.