ಕನ್ನಡಪ್ರಭ ವಾರ್ತೆ ಸಿಂದಗಿ
ಸಿಂದಗಿ ಶೈಕ್ಷಣಿಕ ಕಾಶಿ. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ತಾಲೂಕು ಎಂದರೆ ಸಿಂದಗಿ ಎಂದು ಮುಖ್ಯಮಂತ್ರಿ ಪದಕ ಪುರಸ್ಕೃತ, ಸಿಂದಗಿ ಪಿಎಸ್ಐ ಶ್ರೀಕಾಂತ ಕಾಂಬಳೆ ಹೇಳಿದರು.ಪಟ್ಟಣದ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ತಮ್ಮ ಗುರಿ ತಲುಪಬೇಕಾದರೆ ಪ್ರತಿಭೆ, ಚಾಕುಚಕ್ಯತೆ, ಶಿಸ್ತು, ಸಂಯಮ ಬಹಳ ಅತ್ಯವಶ್ಯಕ. ವಿದ್ಯಾರ್ಥಿಗಳಿಗೆ ಶಿಸ್ತು, ಸಹನೆ ತುಂಬಾ ಮುಖ್ಯ. ಇತ್ತೀಚಿನ ದಿನಮಾನಗಳಲ್ಲಿ ಮಕ್ಕಳು ಮಾನವೀಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರಲಿ ಎಂಬ ಕನಸನ್ನು ಹೊತ್ತ ತಂದೆ-ತಾಯಿಗಳಿಗೆ ನಿರಾಸೆ ಮಾಡದೆ ವಿದ್ಯಾರ್ಥಿಗಳು ಓದಿನೆಡೆಗೆ ಹೆಚ್ಚಿನ ಗಮನ ಹರಿಸಿ ಸಾಧಕರಾಗಬೇಕು. ತಂದೆ-ತಾಯಿಗಳ ಆಸೆಗೆ ನಿರಾಸೆ ಮಾಡಬೇಡಿ. ವಿದ್ಯಾರ್ಥಿ ಬದುಕಿನಲ್ಲಿ ಯಾವುದೇ ವ್ಯಾಮೋಹಕ್ಕೊಳಗಾಗದೆ ವಿದ್ಯಾಭ್ಯಾಸದೆಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ದಿವ್ಯ ಸಾನ್ನಿಧ್ಯ ವಹಿಸಿದ್ದ ಸಂಸ್ಥೆಯ ಚೇರಮನ್ನರು ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರಾಚಾರ್ಯ ಎಸ್.ಎಂ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ಸಹ ಕಾರ್ಯದರ್ಶಿ ಅಶೋಕ ವಾರದ, ಜಿ.ವಿ.ಪಾಟೀಲ, ಪ್ರಧಾನ ಕಾರ್ಯದರ್ಶಿ ಸಂಗಮ್ಮ ಪೂಜಾರಿ ಇದ್ದರು. ಆರ್.ಡಿ.ಪಾಟೀಲ ಕಾಲೇಜಿನ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಜೆ.ಸಿ.ನಂದಿಕೋಲ ಮಾತನಾಡಿದರು.ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಜೆ.ಸಿ.ನಂದಿಕೋಲ, ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದಿಂದ ನಡೆಯುವ 2024-2025ನೇ ಸಾಲಿನ ಪದ್ಮರಾಜ ಮಹಿಳಾ ಮಹಾವಿದ್ಯಾಲಯದ ಬಿ.ಎಸ್.ಡಬ್ಲ್ಯೂ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ (ಚಿನ್ನದ ಪದಕ) ಪಡೆದ ವಿದ್ಯಾರ್ಥಿನಿ ಮೀನಾಜ ಗೋಲಗೇರಿ, 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಿಯಾನಾಬೇಗಂ ಬಂಕಲಗಿ, ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯಕ್ಕೆ ಬ್ಲೂ ಆಗಿ ಆಯ್ಕೆಯಾದ ವಿದ್ಯಾರ್ಥಿನಿಯರಾದ ಸಿದ್ದಮ್ಮ ಬಿರಾದಾರ ಹಾಗೂ ಶೈಲಜಾ ಪಾಟೀಲ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಮಹಿಳಾ ಪುಪೂ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಂ.ಎಸ್.ಹೈಯಾಳಕರ, ಪ್ರಾಚಾರ್ಯ ವಿ.ಡಿ.ಪಾಟೀಲ, ವಿಶ್ವನಾಥ ನಂದಿಕೋಲ, ಮಹಾವಿದ್ಯಾಲಯದ ಸಿಬ್ಬಂದಿ ಮಹಾಂತೇಶ ನೂಲಾನವರ, ಉಮೇಶ ಪೂಜೇರಿ, ಗಿರೀಶ ಕುಲಕರ್ಣಿ, ಮುರ್ತುಜಬಿಬೇಗಂ ಬಿರಾದಾರ, ನಿಲಮ್ಮ ಬಿರಾದಾರ, ಭಾಗ್ಯಶ್ರೀ ನಂದಿಮಠ, ಸರೋಜಿನಿ ಹಿರೇಮಠ, ಎಸ್.ಎಸ್.ಕಲಶೆಟ್ಟಿ, ಎಸ್.ಸಿ.ದುದ್ದಗಿ, ಮಂಗಳಾ ಈಳಗೇರ, ಡಿ.ಎಂ.ಪಾಟೀಲ್, ಮಮತಾ ಹರನಾಳ, ಶಿವಶಂಕರ ಕುಂಬಾರ, ಬಸು, ವಿಜಯಲಕ್ಷ್ಮೀ ಭಜಂತ್ರಿ ಸೇರಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಉಪನ್ಯಾಸಕ ಎ.ಆರ್.ಸ್ವಾಗತಿಸಿದರು. ಕಾರ್ಯಾಧ್ಯಕ್ಷೆ ಭಾಗ್ಯ ಬಬಲೇಶ್ವರ ವರದಿ ವಾಚಿಸಿದರು. ಜಿ.ಎ.ನಂದಿಮಠ ವಂದಿಸಿದರು.