ಶಾಸಕ ಪ್ರದೀಪ್‌ ಈಶ್ವರ್‌ ಮೇಲೆ ಚಪ್ಪಲಿ ಎಸೆದಿರುವ ಬಗ್ಗೆ ಕೂಡಲೇ ತನಿಖೆ ನಡೆಸಬೇಕು. ಪೊಲೀಸರ ಸಮ್ಮುಖದಲ್ಲೇ ಈ ರೀತಿ ಆಗಿರುವುದರಿಂದ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಶಾಸಕ ಪ್ರದೀಪ್‌ ಈಶ್ವರ್‌ ಮೇಲೆ ಚಪ್ಪಲಿ ಎಸೆದಿರುವ ಬಗ್ಗೆ ಕೂಡಲೇ ತನಿಖೆ ನಡೆಸಬೇಕು. ಪೊಲೀಸರ ಸಮ್ಮುಖದಲ್ಲೇ ಈ ರೀತಿ ಆಗಿರುವುದರಿಂದ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಂಗಳವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪ್ರದೀಪ್‌ ಈಶ್ವರ್ ಅವರು, ಚಿಕ್ಕಬಳ್ಳಾಪುರ ಕೆಂಪೇಗೌಡ ಜಯಂತಿ ಆಚರಣೆ ವೇಳೆ ತಮ್ಮ ಮೇಲೆ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲೇ ಕುಟುಂಬ ಸದಸ್ಯರ ನಿಂದಿಸಿರುವ ಬಗ್ಗೆ ಸಿದ್ದರಾಮಯ್ಯ ಅವರಿಗೆ ವಿವರಿಸಿದರು. ಈ ವೇಳೆ ದುಃಖ ತಡೆಯಲಾಗದೆ ಕಣ್ಣೀರು ಹಾಕಿದರು ಎಂದು ತಿಳಿದುಬಂದಿದೆ.

ಈ ವೇಳೆ ಪ್ರದೀಪ್ ಅವರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂಥ ಘಟನೆಗಳು ಸಾಮಾನ್ಯ. ಇವುಗಳನ್ನು ಧೃತಿಗೆಡದೆ ಎದುರಿಸಬೇಕು. ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು.

ಪ್ರಿಯಾಂಕ್ ಖರ್ಗೆಗೆ ಸೂಚನೆ:

ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ತಿಳಿಸಿದರು. ಜತೆಗೆ ಪೋಲೀಸರ ಸಮ್ಮುಖದಲ್ಲೇ, ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಜರಗಿಸಬೇಕು ಎಂದು ಸೂಚಿಸಿದ್ದಾರೆ.

ಕಂದಾಯ ಸಚಿವ ಡಾ.ಜಿ. ಪರಮೇಶ್ವರ್, ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಮಧು ಬಂಗಾರಪ್ಪ ಹಾಜರಿದ್ದರು.