ಕಾಪು: ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪೂರ್ಣಿತ, ಅನನ್ಯ ಆಚಾರ್ಯ, ಜತ್ತನ್ ಶ್ರದ್ಧಾ ವಸಂತ್ ಮತ್ತು ದೀಪ್ತಿ ಅವರು ವಿಭಾಗದ ಪ್ರಾಧ್ಯಾಪಕರಾದ ಪವಿತ್ರ ಪೂರ್ಣಿಮಾ ಮತ್ತು ರಘುನಾಥ್ ಅವರ ಮಾರ್ಗದರ್ಶನದಲ್ಲಿ ಎಐ ಆಧತ ಶ್ರವಣ ಸಾಧನ ‘ಹಿಯರ್ ಪ್ಯೂಶನ್’ ಅನ್ನು ಅಭಿವೃದ್ಧಿಪಡಿಸಿದ್ದಾರೆ.

ಶ್ರವಣ ದೋಷವು ಪರಿಣಾಮಕಾರಿ ಸಂವಹನ ಮತ್ತು ಜೀವನದ ಗುಣಮಟ್ಟ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸಾಮಾನ್ಯ ಶ್ರವಣ ಸಾಧನಗಳು ಸಾಮಾನ್ಯವಾಗಿ ಎಲ್ಲ ಶಬ್ದಗಳನ್ನು ಸಮಾನವಾಗಿ ಕೇಳಿಸುವುದರಿಂದ ಗದ್ದಲದ ವಾತಾವರಣದಲ್ಲಿ ಮಾತುಗಳನ್ನು ಸ್ಪಷ್ಟವಾಗಿ ಗುರುತಿಸುವುದು ಬಳಕೆದಾರರಿಗೆ ಕಷ್ಟಕರವಾಗುತ್ತದೆ. ಇದಕ್ಕೆ ಪರಿಹಾರವಾಗಿ ವಿದ್ಯಾರ್ಥಿಗಳು ಅನಗತ್ಯ ಹಿನ್ನೆಲೆ ಶಬ್ದವನ್ನು ಕಡಿಮೆ ಮಾಡುತ್ತಾ ಮಾತಿನ ಸ್ಪಷ್ಟತೆಯನ್ನು ಹೆಚ್ಚಿಸುವ ಶ್ರವಣ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಯೋಜನೆಗೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಅನುಮೋದನೆ ದೊರೆತಿದೆ.