ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಸೃಜನ್, ಶರಣ್ ಧೋಂಡ್ಯ, ಸುರೇಶ್ ನಾಯಕ್ ಮತ್ತು ಉಜ್ವಲ್ ಯು. ನಾಯಕ್ ಅವರು ವಿಭಾಗದ ಸಹಾಯಕ ಪ್ರಾಧ್ಯಾಪಕಿರಾದ ಜಯಶ್ರೀ ಎಂ. ಮತ್ತು ಶಶಿಕಲಾ ಆರ್. ಅವರ ಮಾರ್ಗದರ್ಶನದಲ್ಲಿ ಹಳ್ಳಿಗಳಲ್ಲಿ ಸೌರಶಕ್ತಿ ಚಾಲಿತ ನೀರು ಶುದ್ಧೀಕರಣ ವ್ಯವಸ್ಥೆಯೊಂದನ್ನು ಅಭಿವೃದ್ಧಿ ಪಡಿಸಿದ್ದಾರೆ.
ಕಾಪು: ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಸೃಜನ್, ಶರಣ್ ಧೋಂಡ್ಯ, ಸುರೇಶ್ ನಾಯಕ್ ಮತ್ತು ಉಜ್ವಲ್ ಯು. ನಾಯಕ್ ಅವರು ವಿಭಾಗದ ಸಹಾಯಕ ಪ್ರಾಧ್ಯಾಪಕಿರಾದ ಜಯಶ್ರೀ ಎಂ. ಮತ್ತು ಶಶಿಕಲಾ ಆರ್. ಅವರ ಮಾರ್ಗದರ್ಶನದಲ್ಲಿ ಹಳ್ಳಿಗಳಲ್ಲಿ ಸೌರಶಕ್ತಿ ಚಾಲಿತ ನೀರು ಶುದ್ಧೀಕರಣ ವ್ಯವಸ್ಥೆಯೊಂದನ್ನು ಅಭಿವೃದ್ಧಿ ಪಡಿಸಿದ್ದಾರೆ. ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಅನುದಾನ ಯೋಜನೆಯಡಿ ಈ ವಿದ್ಯಾರ್ಥಿಗಳು ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದಾರೆಈ ವ್ಯವಸ್ಥೆಯು ಸೂರ್ಯನ ಬೆಳಕನ್ನು ವಿದ್ಯುತ್ ಶಕ್ತಿಯನ್ನಾಗಿ ಪರಿವರ್ತಿಸಲು ದ್ಯುತಿ ವಿದ್ಯುಜ್ಜನಕ ಫಲಕವನ್ನು ಬಳಸುತ್ತದೆ. ಇದು ಬ್ಯಾಟರಿಯನ್ನು ಏಕಕಾಲದಲ್ಲಿ ಚಾರ್ಜ್ ಮಾಡುವಾಗ ಡಿಸಿ ಪಂಪ್ಗೆ ಶಕ್ತಿಯನ್ನು ನೀಡುತ್ತದೆ. ಇದು ಕಡಿಮೆ ಸೂರ್ಯನ ಬೆಳಕಿನಲ್ಲಿಯೂ ಕಾರ್ಯಾಚರಣೆಯನ್ನು ನಡೆಸುತ್ತದೆ.ಇದು ನೀರಿನಲ್ಲಿರುವ ಕಲ್ಮಶಗಳು, ವಾಸನೆ, ಬಣ್ಣ, ಕರಗಿದ ಮಾಲಿನ್ಯಕಾರಕಗಳು ಮತ್ತು ಹಾನಿಕಾರಕ ಸೂಕ್ಷ್ಮ ಜೀವಿಗಳನ್ನು ಪರಿಣಾಮಕಾರಿಯಾಗಿ ತೆಗೆದುಹಾಕಲು ಬಹು ಹಂತದ ಶೋಧನಾ ಪ್ರಕ್ರಿಯೆಯನ್ನು ಬಳಸಿಕೊಳ್ಳುತ್ತದೆ. ಕಡಿಮೆ ವಿದ್ಯುತ್ ಬಳಕೆ ಮತ್ತು ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿರುವ ಈ ವ್ಯವಸ್ಥೆಯು ಸೀಮಿತ ಮೂಲ ಸೌಕರ್ಯವನ್ನು ಹೊಂದಿರುವ ಹಳ್ಳಿಗಳಿಗೆ ಸೂಕ್ತವಾಗಿದೆ.