ರಾಮನಗರ: ನಗರದ ಅಗ್ರಹಾರದಲ್ಲಿನ ಶ್ರೀ ಗುರು ರಾಘವೇಂದ್ರಸ್ವಾಮಿ ದೇವಾಲಯದಲ್ಲಿ ಮಂಗಳವಾರ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 405ನೇ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಶ್ರೀ ಸನ್ನಿಧಿಗೆ ಬರುವ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಸಮಾಜ ಸೇವಕ ದೀಪು ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಿಸಿದ್ದರು. ಜೊತೆಗೆ ದೇವಾಲಯ ಬಳಿ ಹಾಗೂ ಕೆಂಪೇಗೌಡ ವೃತ್ತದಲ್ಲಿ ಭಕ್ತರಿಗೆ ಅನ್ನದಾನ ಏರ್ಪಡಿಸಿದ್ದರು. ಈ ವೇಳೆ ಪುರೋಹಿತರಾದ ನರಹರಿ, ಪ್ರವೀಣ್ ಆಚಾರ್ , ಆಡಳಿತ ಮಂಡಳಿಯ ಸೀತರಾಮ್ , ನಾಗೇಂದ್ರ, ಸಂಜಯ್ , ಯುವ ಮುಖಂಡರಾದ ಪ್ರಮೋದ್, ಚಂದ್ರು, ಮಹಾಲಿಂಗ, ಚಂದ್ರು ವಂದರಾಗುಪ್ಪೆ, ಭದ್ರ ಸೇರಿದಂತೆ ಇತರರು ಹಾಜರಿದ್ದರು.
24ಕೆಆರ್ ಎಂಎನ್ 6.ಜೆಪಿಜಿರಾಮನಗರದ ಅಗ್ರಹಾರದಲ್ಲಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 405ನೇ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.