ಸಾರಾಂಶ
ಸಮೀಪದ ಪಾಲೂರು ಗ್ರಾಮದ ಗ್ರಾಮದೇವತೆಯಾದ ಶ್ರೀ ಕಾಳಿಕಾಂಬ ಅಮನೂರು ತಾಯಿಯ ವಾರ್ಷಿಕೋತ್ಸವ ಸಂಪನ್ನಗೊಂಡಿತು.
ನಾಪೋಕ್ಲು: ಸಮೀಪದ ಪಾಲೂರು ಗ್ರಾಮದ ಗ್ರಾಮದೇವತೆಯಾದ ಶ್ರೀ ಕಾಳಿಕಾಂಬ ಅಮನೂರು ತಾಯಿಯ ವಾರ್ಷಿಕೋತ್ಸವ ಶನಿವಾರ ಶ್ರದ್ಧಾ ಭಕ್ತಿಯಿಂದ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ವಾರ್ಷಿಕೋತ್ಸವದ ಅಂಗವಾಗಿ ಬೆಳಗ್ಗೆ ದೇವರ ಜಳಕ ಕೈಗೊಂಡರು. ಬಳಿಕ ವಾದ್ಯಗೋಷ್ಠಿಯೊಂದಿಗೆ ದೇವರ ಅಲಂಕೃತ ಮೂರ್ತಿಯೊಂದಿಗೆ ತಿರುವಳಕಾರರು ಭಕ್ತರು ಮೆರವಣಿಗೆ ತೆರಳಿ ದೇವಾಲಯದಲ್ಲಿ ದೇವರಿಗೆ ಮಹಾಪೂಜೆ ಇನ್ನಿತರ ದೇವರ ಸೇವೆಗಳು ಜರುಗಿ ಪ್ರಸಾದ ವಿತರಣೆಯ ಮಾಡಲಾಯಿತು.ಈ ಸಂದರ್ಭ ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ, ಕಾಣಿಕೆ ಒಪ್ಪಿಸಿ ಶ್ರದ್ಧಾ ಭಕ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಚೆರುವಾಳಂಡ ರಮೇಶ್, ಕಾರ್ಯದರ್ಶಿ ಎಡಿಕೇರಿ ಪ್ರವೀಣ್,(ಪವಿ) ನಿರ್ದೇಶಕ ಸದಸ್ಯರು ಹಾಗೂ ತಕ್ಕ ಮುಖ್ಯಸ್ಥರು ಊರ ಮತ್ತು ಪರವೂರಿನ ಕಾಲಿಕಾಂಬ ಭಕ್ತಾದಿಗಳು ಪಾಲ್ಗೊಂಡರು.