ಶೃಂಗೇರಿ ವೈಭವಯುತ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ

| Published : Nov 10 2024, 01:36 AM IST / Updated: Nov 10 2024, 01:37 AM IST

ಶೃಂಗೇರಿ ವೈಭವಯುತ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಪ್ರಾಂಗಣದ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ ಶನಿವಾರ ಪಟ್ಟಣದಲ್ಲಿ ವೈಭವಯುತವಾಗಿ ಜರುಗಿತು.

ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯಿಂದ ವಿದ್ಯಾಶಂಕರ ಸ್ವಾಮಿಗೆ ವಿಶೇಷ ಪೂಜೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಪ್ರಾಂಗಣದ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ ಶನಿವಾರ ಪಟ್ಟಣದಲ್ಲಿ ವೈಭವಯುತವಾಗಿ ಜರುಗಿತು.

ಬೆಳಿಗ್ಗೆ ಶ್ರೀ ವಿದ್ಯಾಶಂಕರ ದೇವಾಲಯದ ಸನ್ನಿಧಿಯಲ್ಲಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯಿಂದ ವಿದ್ಯಾಶಂಕರ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿದರು. ವಿವಿಧ ಧಾರ್ಮಿಕ ಕಾರ್ಯಗಳು ಸಹಿತ ಮಹಾಮಂಗಳಾರತಿ ನಡೆಯಿತು.

ನಂತರ ಶ್ರೀ ಮಠದ ಎದುರು ರಥದಲ್ಲಿ ಸ್ವಾಮಿಯನ್ನು ಕುಳ್ಳಿರಿಸಿ ವಿಶೇಷ ಪೂಜೆ, ಮಹಾಮಂಗಳಾರತಿ ನಂತರ ಪಟ್ಟಣದ ರಥ ಬೀದಿಯಲ್ಲಿ ರಥೋತ್ಸವ ಜರುಗಿತು. ಶ್ರೀ ಮಠದ ಛತ್ರಿ ಛಾಮರ, ವಾದ್ಯ, ಶ್ರೀಮಠದ ಆನೆಗಳು, ನೂರಾರು ವಿಪ್ರೋತ್ತಮರ ವೇದಘೋಷಗಳು, ಭಕ್ತಾಧಿಗಳ ಜೈಕಾರ ರಥೋತ್ಸವಕ್ಕೆ ವಿಶೇಷ ಮೆರಗು ನೀಡಿದವು.

ರಥ ಸಾಗುವ ಮುನ್ನ ಶುಭ್ರಗೊಳಿಸಿದ ರಸ್ತೆಯನ್ನು ರಂಗೋಲಿ ಚಿತ್ತಾರಗಳಿಂದ ಸಿಂಗರಿಸಲಾಯಿತು. ಸುಡುಬಿಸಿಲ ನಡುವೆಯೂ ರಸ್ತೆ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದ ಜನರು ಶ್ರೀ ವಿದ್ಯಾಶಂಕರ ಸ್ವಾಮಿ ದರ್ಶನ ಪಡೆ ಭಕ್ತಿ ಭಾವದಿಂದ ನಮಿಸಿ ಪುನೀತರಾದರು.

ರಥೋತ್ಸವದ ಅಂಗವಾಗಿ ಪ್ರತಿದಿನ ಸಂಜೆ ಶ್ರೀಮಠದಿಂದ ಕಟ್ಟೇಬಾಗಿಲಿನವರೆಗೆ ಉತ್ಸವ ನಡೆಯುತ್ತಿತ್ತು. ಶ್ರೀ ವಿದ್ಯಾಶಂಕರ ಸ್ವಾಮಿ ಸನ್ನಿದಿಯಲ್ಲಿ ವಿಶೇಷ ಪೂಜೆ, ಮಹಾಮಂಗಳಾರತಿ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಭಾನುವಾರ ಓಕುಳಿ ಉತ್ಸವ, ಸಂಜೆ ತುಂಗಾ ನದಿಯಲ್ಲಿ ತೆಪ್ಪೋತ್ಸವದೊಂದಿಗೆ ರಥೋತ್ಸವದ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿದೆ.

9 ಶ್ರೀ ಚಿತ್ರ 1

ಶೃಂಗೇರಿಯಲ್ಲಿ ವೈಭವಯುತ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ ನಡೆಯಿತು.