ಸಾರಾಂಶ
ಬಿಬಿಎಂಪಿಯ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಶ್ರೀಧರ್ ಮೂರ್ತಿ (ಕೆಎಎಸ್) ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು : ಹೆಬ್ಬಾಳ ಮೇಲ್ಸೇತುವೆ ಬಳಿ ಜಾಹೀರಾತು ಅಳವಡಿಕೆ ಮಾಡಿದ ಅವಿನಾಶಿ ಆಡ್ಸ್ ಸಂಸ್ಥೆಯು ಬಿಬಿಎಂಪಿ ವಿರುದ್ಧ ಹೈಕೋರ್ಟ್ನಲ್ಲಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡದೇ ಕರ್ತವ್ಯ ಲೋಪ ಎಸಗಿದ ಪರಿಣಾಮ ಬಿಬಿಎಂಪಿಗೆ ₹16.27 ಕೋಟಿ ನಷ್ಟದ ಜತೆಗೆ, ಪರೋಕ್ಷವಾಗಿ ಅವಿನಾಶಿ ಆಡ್ಸ್ ಸಂಸ್ಥೆಗೆ ಸಹಕಾರ ನೀಡಿದ ಆರೋಪವಿತ್ತು.
ಈ ಹಿನ್ನೆಲೆಯಲ್ಲಿ ಶ್ರೀಧರ್ ಮೂರ್ತಿ ಅವರನ್ನು ಇಲಾಖೆ ವಿಚಾರಣೆಗೆ ಒಳಪಡಿಸಿ ಅಮಾನತುಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದರು.
ಅದರಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಉಮಾ ದೇವಿ ಆದೇಶಿಸಿದ್ದಾರೆ.