ಪಾಲಿಕೆ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಅಮಾನತು

| Published : May 17 2024, 01:31 AM IST / Updated: May 17 2024, 07:28 AM IST

ಪಾಲಿಕೆ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಅಮಾನತು
Share this Article
  • FB
  • TW
  • Linkdin
  • Email

ಸಾರಾಂಶ

ಬಿಬಿಎಂಪಿಯ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಶ್ರೀಧರ್‌ ಮೂರ್ತಿ (ಕೆಎಎಸ್‌) ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

 ಬೆಂಗಳೂರು :  ಹೆಬ್ಬಾಳ ಮೇಲ್ಸೇತುವೆ ಬಳಿ ಜಾಹೀರಾತು ಅಳವಡಿಕೆ ಮಾಡಿದ ಅವಿನಾಶಿ ಆಡ್ಸ್‌ ಸಂಸ್ಥೆಯು ಬಿಬಿಎಂಪಿ ವಿರುದ್ಧ ಹೈಕೋರ್ಟ್‌ನಲ್ಲಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡದೇ ಕರ್ತವ್ಯ ಲೋಪ ಎಸಗಿದ ಪರಿಣಾಮ ಬಿಬಿಎಂಪಿಗೆ ₹16.27 ಕೋಟಿ ನಷ್ಟದ ಜತೆಗೆ, ಪರೋಕ್ಷವಾಗಿ ಅವಿನಾಶಿ ಆಡ್ಸ್‌ ಸಂಸ್ಥೆಗೆ ಸಹಕಾರ ನೀಡಿದ ಆರೋಪವಿತ್ತು.

ಈ ಹಿನ್ನೆಲೆಯಲ್ಲಿ ಶ್ರೀಧರ್‌ ಮೂರ್ತಿ ಅವರನ್ನು ಇಲಾಖೆ ವಿಚಾರಣೆಗೆ ಒಳಪಡಿಸಿ ಅಮಾನತುಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದರು.

ಅದರಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಉಮಾ ದೇವಿ ಆದೇಶಿಸಿದ್ದಾರೆ.