ವೇದಾಂತ ಪ್ರಪಂಚಕ್ಕೆ ಶ್ರೀವ್ಯಾಸರಾಜರ ಕೊಡುಗೆ ಅಗಾಧ: ಪುತ್ತಿಗೆ ಶ್ರೀಪಾದರು

| Published : Jun 12 2024, 12:39 AM IST

ವೇದಾಂತ ಪ್ರಪಂಚಕ್ಕೆ ಶ್ರೀವ್ಯಾಸರಾಜರ ಕೊಡುಗೆ ಅಗಾಧ: ಪುತ್ತಿಗೆ ಶ್ರೀಪಾದರು
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀಕೃಷ್ಣನ ಸನ್ನಿಧಿಯಲ್ಲಿ ಬೆಂಗಳೂರಿನ ಪ್ರಸಿದ್ಧ ವಿದ್ವಾಂಸ ಡಾ. ಎನ್.ವೆಂಕಟೇಶಾಚಾರ್ಯ ಅವರು ನಡೆಸಿದ ನ್ಯಾಯಾಮೃತ ಗ್ರಂಥದ ಪಾಠದ ಮಂಗಳೋತ್ಸವ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಶ್ರೀ ವ್ಯಾಸರಾಜರು ವೇದಾಂತ ಪ್ರಪಂಚಕ್ಕೆ ಅಗಾಧವಾದ ಕೊಡುಗೆಯನ್ನು ನೀಡಿದ್ದಾರೆ. ಅವರು ರಚಿಸಿದ ನ್ಯಾಯಾಮೃತ, ಚಂದ್ರಿಕಾ, ತರ್ಕತಾಂಡವ ಗ್ರಂಥಗಳು ನರಸಿಂಹ ದೇವರ ಮೂರು ಕಣ್ಣಿನಂತೆ ಕಂಗೊಳಿಸುತ್ತಿವೆ. ಸಂಸ್ಕೃತ - ಕನ್ನಡ ವಾಙ್ಮಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕೀರ್ತಿ ಶ್ರೀವ್ಯಾಸರಾಜರಿಗೆ ಸಲ್ಲುತ್ತದೆ. ಇಂಥಹ ಯತಿವರೇಣ್ಯರ ಗ್ರಂಥಗಳನ್ನು ಅಧ್ಯಯನ ಮಾಡುವುದು ಸುಕೃತದ ಫಲವಾಗಿದೆ ಎಂದು ಪರ್ಯಾಯ ಪೀಠಾಧಿಪತಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.

ಅವರು ಸೋಮವಾರ ಶ್ರೀಕೃಷ್ಣನ ಸನ್ನಿಧಿಯಲ್ಲಿ ಬೆಂಗಳೂರಿನ ಪ್ರಸಿದ್ಧ ವಿದ್ವಾಂಸ ಡಾ. ಎನ್.ವೆಂಕಟೇಶಾಚಾರ್ಯ ಅವರು ನಡೆಸಿದ ನ್ಯಾಯಾಮೃತ ಗ್ರಂಥದ ಪಾಠದ ಮಂಗಳೋತ್ಸವದಲ್ಲಿ ಅನುಗ್ರಹ ಸಂದೇಶವನ್ನು ನೀಡಿದರು. ಇದೇ ಸಂದರ್ಭ ತಮ್ಮ ಪ್ರಿಯ ಶಿಷ್ಯರಾದ ಡಾ. ವೆಂಕಟೇಶಾಚಾರ್ಯ ಅವರ ಸಾಧನೆಯನ್ನು ಪ್ರಶಂಸಿಸಿ ಶ್ರೀಕೃಷ್ಣಾನುಗ್ರಹದೊಂದಿಗೆ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪಾಠ ಕೇಳಿದ ಶಿಷ್ಯರು ಸುವರ್ಣದ ಶ್ರೀಕೃಷ್ಣ ಪ್ರತಿಮೆಯನ್ನು ಡಾ.ವೆಂಕಟೇಶಾಚಾರ್ಯ ಅವರಿಗೆ ಪೂಜ್ಯ ಶ್ರೀಪಾದರ ಮೂಲಕ ನೀಡಿ ಗುರುವಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಸಂಸ್ಕೃತ ಮಹಾವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣ ಆಚಾರ್ಯರು, ಡಾ. ಬಿ. ಗೋಪಾಲಾಚಾರ್ಯರು ಮುಂತಾದ ವಿದ್ವಾಂಸರು ಉಪಸ್ಥಿತರಿದ್ದರು.