ಎಸ್ಸೆಸ್ಸೆಲ್ಸಿ ಶೈಕ್ಷಣಿಕ ಭವಿಷ್ಯದ ಪ್ರಮುಖ ಘಟ್ಟ

| Published : Jun 16 2024, 01:51 AM IST

ಎಸ್ಸೆಸ್ಸೆಲ್ಸಿ ಶೈಕ್ಷಣಿಕ ಭವಿಷ್ಯದ ಪ್ರಮುಖ ಘಟ್ಟ
Share this Article
  • FB
  • TW
  • Linkdin
  • Email

ಸಾರಾಂಶ

ಕನಕಪುರ: ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಹತ್ತನೇ ತರಗತಿ ಪರೀಕ್ಷೆ ಪ್ರಮುಖ ಘಟ್ಟವಾಗಿದ್ದು ಸತತ ಅಭ್ಯಾಸ, ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕು ಮಾಜಿ ಅಧ್ಯಕ್ಷ ಕಾ.ಪ್ರಕಾಶ್ ತಿಳಿಸಿದರು.

ಕನಕಪುರ: ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಹತ್ತನೇ ತರಗತಿ ಪರೀಕ್ಷೆ ಪ್ರಮುಖ ಘಟ್ಟವಾಗಿದ್ದು ಸತತ ಅಭ್ಯಾಸ, ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕು ಮಾಜಿ ಅಧ್ಯಕ್ಷ ಕಾ.ಪ್ರಕಾಶ್ ತಿಳಿಸಿದರು.

ಕನ್ನಡಪ್ರಭ ದಿನಪತ್ರಿಕೆ ಹೊರತಂದಿರುವ ಯುವ ಆವೃತ್ತಿಯನ್ನು ನಗರದ ಬ್ಲಾಸಂ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪಾಲಿಗೆ ಹತ್ತನೇ ತರಗತಿ ಶೈಕ್ಷಣಿಕ ಭವಿಷ್ಯದ ಮಹತ್ವದ ಮೆಟ್ಟಿಲಾಗಿದ್ದು ತಮ್ಮ ಜೀವನದ ಭದ್ರ ಬುನಾದಿಗೆ ಇಲ್ಲಿ ಪಡೆಯುವ ಅಂಕಗಳು ಮುಂದಿನ ಉನ್ನತ ವ್ಯಾಸಂಗಕ್ಕೆ ಸಹಕಾರಿಯಾಗಲಿದೆ. ಮುಂದೆ ಸಮಾಜದಲ್ಲಿ ದೊರೆಯುವ ಉತ್ತಮ ಅವಕಾಶಗಳನ್ನ ಬಳಸಿಕೊಂಡು ಉನ್ನತ ಹುದ್ದೆ ಅಲಂಕರಿಸುವ ಮೂಲಕ ತಮ್ಮ ಜೀವನ ಶೈಲಿಯನ್ನು ಉತ್ತಮವಾಗಿ ಕಟ್ಟಿಕೊಳ್ಳಬಹುದು ಎಂದು ಹೇಳಿದರು.

ರಾಜ್ಯದ ಹೆಸರಾಂತ ಕನ್ನಡ ದಿನಪತ್ರಿಕೆ ಕನ್ನಡಪ್ರಭ ಪತ್ರಿಕಾ ಬಳಗ ಈ ನಿಟ್ಟಿನಲ್ಲಿ ಯುವ ಆವೃತ್ತಿಯನ್ನು ತಂದಿರುವುದು ಬಹಳ ಸಂತೋಷದ ವಿಷಯವಾಗಿದೆ. ಈ ಸಂಚಿಕೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಅದರಲ್ಲೂ ಮುಖ್ಯವಾಗಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆ ಹಾಗೂ ಅದಕ್ಕೆ ಉತ್ತರಗಳನ್ನು ನೀಡುವ ಜೊತೆಗೆ ಗಣಿತ, ವಿಜ್ಞಾನ, ಸಮಾಜ ಶಾಸ್ತ್ರದ ಜೊತೆಗೆ ಆಂಗ್ಲ ಮತ್ತು ಹಿಂದಿ ವಿಷಯಗಳ ಬಗ್ಗೆ ಅತ್ಯಂತ ಸರಳವಾಗಿ ಉತ್ತರಗಳನ್ನು ನೀಡಿರುವುದು

ಹೆಚ್ಚು ಅನಕೂಲಕರ. ವಿದ್ಯಾರ್ಥಿಗಳು ಪ್ರತಿನಿತ್ಯ ತಮ್ಮ ಶಾಲಾ ಪಠ್ಯದ ಜೊತೆಗೆ ಈ ಆವೃತ್ತಿಯನ್ನು ಅಭ್ಯಾಸ ಮಾಡಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಹಾಗೂ ತಾಲೂಕಿಗೆ ಉತ್ತಮ ಹೆಸರು ತರುವಂತೆ ಶುಭ ಹಾರೈಸಿದರು.

ಬ್ಲಾಸಂ ಶಾಲೆಯ ಪ್ರಾಂಶುಪಾಲೆ ಗಂಗಾಭಿಕೆ ಮಾತನಾಡಿ, ಇಂದು ವಿದ್ಯೆ ಇಲ್ಲದಿದ್ದರೆ ಏನನ್ನು ಸಾಧನೆ ಮಾಡಲು ಸಾಧ್ಯವಿಲ್ಲ. ಇಂದು ಎಲ್ಲಾ ರಂಗಗಳಲ್ಲಿ ಗ್ರಾಮೀಣ ಭಾಗದ ಮಕ್ಕಳು ನಗರದ ಮಕ್ಕಳ ಜೊತೆ ಪೈಪೋಟಿ ನಡೆಸಬೇಕಾದ ವಾತಾವರಣವಿದೆ. ಈ ನಿಟ್ಟಿನಲ್ಲಿ ಉತ್ತಮ ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಹೆಚ್ಚು ಅಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ನಾಡಿನ ಹೆಸರಾಂತ ದಿನಪತ್ರಿಕೆ ಕನ್ನಡಪ್ರಭ ಪತ್ರಿಕೆ ವತಿಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊರ ತಂದಿರುವ ಯುವ ಆವೃತ್ತಿ ಬಹಳ ಉಪಯುಕ್ತವಾಗಿದ್ದು ದೇಶದ ಇಂದಿನ ರಾಜಕೀಯ ವಿದ್ಯಮಾನದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಬಗ್ಗೆ ಸೂಕ್ತ ಮಾಹಿತಿ ಇದ್ದು ಹತ್ತನೇ ತರಗತಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಉತ್ತಮ ಅಂಕಗಳನ್ನು ಗಳಿಸಿ ಉನ್ನತ ಸ್ಥಾನ ಪಡೆಯುವಂತೆ ಆಶಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ರಾಜೇಶ್, ಹರಿಪ್ರಸಾದ್, ಜಯರಾಮು, ನಾಗೆಂದ್ರ ಪ್ರಸಾದ್, ದೈಹಿಕ ಶಿಕ್ಷಕ ಧನಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 01:

ಕನಕಪುರದ ಬ್ಲಾಸಂ ಶಾಲೆ ಆವರಣದಲ್ಲಿ ಕನ್ನಡಪ್ರಭ ದಿನಪತ್ರಿಕೆಯ ಯುವ ಆವೃತ್ತಿಯನ್ನು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕು ಮಾಜಿ ಅಧ್ಯಕ್ಷ ಕಾ.ಪ್ರಕಾಶ್ ವಿದ್ಯಾರ್ಥಿಗಳಿಗೆ ವಿತರಿಸಿದರು.