ವಾಣಿವಿಲಾಸ ಸಕ್ಕರೆ ಕಾರ್ಖಾನೆ ಆರಂಭಿಸಿ

| Published : Feb 21 2025, 12:46 AM IST

ಸಾರಾಂಶ

: ತಾಲೂಕಿನ ವಾಣಿವಿಲಾಸ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ರೈತ ಮುಖಂಡ ಕೆಸಿ.ಹೊರಕೇರಪ್ಪ ಮನವಿ ಮಾಡಿದರು

ಹಿರಿಯೂರು: ತಾಲೂಕಿನ ವಾಣಿವಿಲಾಸ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ರೈತ ಮುಖಂಡ ಕೆಸಿ.ಹೊರಕೇರಪ್ಪ ಮನವಿ ಮಾಡಿದರು.

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಿದ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಎರಡು ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡಿರುವ ಹಿರಿಯೂರಿನಲ್ಲಿರುವ ಬೃಹತ್ ವಾಣಿವಿಲಾಸ ಸಹಕಾರ ಸಕ್ಕರೆ ಕಾರ್ಖಾನೆ 2004 ರಲ್ಲಿ ಸಮಾಪನಗೊಂಡಿದ್ದು ಮತ್ತೆ ವಾಣಿವಿಲಾಸ ಸಕ್ಕರೆ ಕಾರ್ಖಾನೆ ಪುನಶ್ಚೇತನ ಮಾಡಲು

ಈ ಸಾಲಿನ ಆಯವ್ಯಯ ಮುಂಗಡ ಪತ್ರದಲ್ಲಿ ಹಣ ಮೀಸಲಿಡಬೇಕು. ಇಲ್ಲವೇ ಸಕ್ಕರೆ ಕಾರ್ಖಾನೆ ನಡೆಸಲು ಮುಂದಾಗುವ ಖಾಸಗಿ ಕಂಪನಿಗಳಿಗಾದರೂ ನೀಡಿ ಆಧುನಿಕ ತಂತ್ರಜ್ಞಾನದೊಂದಿಗೆ ನೂತನವಾಗಿ ಕಾರ್ಖಾನೆ ಪ್ರಾರಂಭಿಸಬೇಕು.

ಭದ್ರಾ ಮೇಲ್ದಂಡೆ ಯೋಜನೆ ಮುಖಾಂತರ ವಾಣಿವಿಲಾಸಸಾಗರ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು ಹಾಲಿ ವಾಣಿವಿಲಾಸಸಾಗರ ಜಲಾಶಯದಲ್ಲಿ 30 ಟಿಎಂಸಿ ನೀರು ತುಂಬಿದ್ದು ವೇದಾವತಿ ನದಿಯಲ್ಲಿ ಅಂತರ್ಜಲ ಅಭಿವೃದ್ಧಿಯಾಗಿ ಕೊಳವೆ ಬಾವಿಗಳಲ್ಲಿ ನೀರು ಸಿಗುತ್ತಿದ್ದು ರೈತರು ಕಬ್ಬು ಬೆಳೆಯಲು ಉತ್ಸುಕರಾಗಿದ್ದಾರೆ ಎಂದರು.

ಸರ್ಕಾರ ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಿಸುವುದರ ಮೂಲಕ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಮತ್ತು ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಠಿಸಬೇಕು ಎಂದರು. ಅನೇಕ ರೈತ ಮುಖಂಡರುಗಳು ಉಪಸ್ಥಿತರಿದ್ದರು.