ಮಡಿಕೇರಿ ನಗರದ ಸಮಗ್ರ ಅಭಿವೃದ್ಧಿಗೆ ಹಾಗೂ ಏಕ ಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಮಡಿಕೇರಿ ನಗರ ಛೇಂಬರ್ ಆಫ್ ಕಾಮರ್ಸ್ ಶಾಸಕ ಡಾ. ಮಂತರ್ ಗೌಡ ಅವರಲ್ಲಿ ಮನವಿ ಮಾಡಿಕೊಂಡಿದೆ.

ಮಡಿಕೇರಿ: ಮಡಿಕೇರಿ ನಗರದ ಸಮಗ್ರ ಅಭಿವೃದ್ಧಿಗೆ ಹಾಗೂ ಏಕ ಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಮಡಿಕೇರಿ ನಗರ ಛೇಂಬರ್ ಆಫ್ ಕಾಮರ್ಸ್ ಶಾಸಕ ಡಾ. ಮಂತರ್ ಗೌಡ ಅವರಲ್ಲಿ ಮನವಿ ಮಾಡಿಕೊಂಡಿದೆ.ಈ ಕುರಿತು ಶಾಸಕರಿಗೆ ಪತ್ರ ಬರೆದಿರುವ ಛೇಂಬರ್ ಆಫ್ ಕಾಮರ್ಸ್ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಮಡಿಕೇರಿ ನಗರಕ್ಕೆ ಭೇಟಿ ನೀಡುವ ಪ್ರವಾಸಿಗರ ಹಿತದೃಷ್ಟಿಯಿಂದ ಏಕ ಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಮತ್ತು ನಗರದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯ ಯೋಜನೆಗಳಿಗೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕೆಂದು ಕೋರಿದ್ದಾರೆ.

ಪ್ರವಾಸಿಗರಿಗೆ ಒಂದೇ ಸೂರಿನಡಿ ಮಾಹಿತಿ ಕೇಂದ್ರ, ಪ್ರವಾಸಿ ತಾಣಗಳ ಟಿಕೆಟ್ ಬುಕ್ಕಿಂಗ್ ಮತ್ತು ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಒದಗಿಸುವ ಸುಸಜ್ಜಿತವಾದ ಏಕಗವಾಕ್ಷಿ ಪ್ರವಾಸಿ ಸೇವಾ ಕೇಂದ್ರದ ಕಚೇರಿಯನ್ನು ಸ್ಥಾಪಿಸಬೇಕು.ನಗರದ ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಪ್ರಮುಖ ಜಂಕ್ಷನ್‌ಗಳಲ್ಲಿ ಎಐ (ಕೃತಕ ಬುದ್ಧಿಮತ್ತೆ) ಚಾಲಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.ನಗರದ ಮುಖ್ಯ ರಸ್ತೆಗಳಲ್ಲಿ ಹಳೆಯ ಬೀದಿ ದೀಪಗಳನ್ನು ಬದಲಿಸಿ, ಪರಿಸರ ಸ್ನೇಹಿ ಮತ್ತು ಹೆಚ್ಚು ಬೆಳಕು ನೀಡುವ ಎಲ್‌ಇಡಿ ದೀಪಗಳನ್ನು ಅಳವಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ.