ಕಾಂತೂರು ಮೂರ್ನಾಡು ಗ್ರಾ.ಪಂ.ಗೆ ರಾಜ್ಯ ಮಟ್ಟದ ‘ಗ್ರಾಮ ಮಿತ್ರ’ ಪ್ರಶಸ್ತಿ ಪ್ರದಾನ
Author : KannadaprabhaNewsNetwork
Published : Apr 30 2025, 12:30 AM IST
ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ಜಾಗೃತಿ ಕಿರಣ ಕನ್ನಡ ಪಾಕ್ಷಿಕ ಪತ್ರಿಕೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕುಶನ್ ರೈ ಬಿ ಎಸ್, ಉಪಾಧ್ಯಕ್ಷರಾದ ರೇಖಾ ಬಿ ಎಸ್ , ಹಾಗೂ ಪಿ ಡಿ ಓ ಚಂದ್ರಮೌಳಿ ಪ್ರಶಸ್ತಿ ಸ್ವೀಕರಿಸಿದರು. | Kannada Prabha
Image Credit: KP
ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಪ್ರಭ ವಾರ್ತೆ ನಾಪೋಕ್ಲು
ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ರಾಜ್ಯಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸ್ಥಳೀಯ ಶಾಸಕರಾದ ನಾಡ ಭರತ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಬಿ ಎಸ್, ಪಿ ಡಿ ಓ ಚಂದ್ರಮೌಳಿ ಹಾಗೂ ಉಪಾಧ್ಯಕ್ಷರಾದ ರೇಖಾ ಬಿ ಎಸ್ ಹಾಜರಿದ್ದು ಪ್ರಶಸ್ತಿ ಸ್ವೀಕರಿಸಿದರು.
ರಾಜ್ಯದ ವಿವಿಧ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ‘ಕಾಯಕ ರತ್ನ’ ಪ್ರಶಸ್ತಿ ಹಾಗೂ ಉತ್ತಮ ಆಡಳಿತ ನಿರ್ವಹಣೆಯ ಗ್ರಾಮ ಪಂಚಾಯಿತಿಗೆ ರಾಜ್ಯಮಟ್ಟದ ‘ಗ್ರಾಮ ಮಿತ್ರ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.