ಸದಸ್ಯರ ಸಹಕಾರದಿಂದ ಸಂಘದ ಬಲವರ್ಧನೆ ಸಾಧ್ಯ: ಹರಿಶಂಕರ್ ಪ್ರಸಾದ್

| Published : Sep 29 2025, 12:05 AM IST

ಸದಸ್ಯರ ಸಹಕಾರದಿಂದ ಸಂಘದ ಬಲವರ್ಧನೆ ಸಾಧ್ಯ: ಹರಿಶಂಕರ್ ಪ್ರಸಾದ್
Share this Article
  • FB
  • TW
  • Linkdin
  • Email

ಸಾರಾಂಶ

ಸದಸ್ಯರ ಸಹಕಾರದಿಂದ ಸಂಘದ ಬಲವರ್ಧನೆ ಸಾಧ್ಯ ಎಂದು ಪಿ.ಎನ್‌. ಹರಿಶಂಕರ್‌ ಪ್ರಸಾದ್‌ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸದಸ್ಯರ ಸಹಕಾರದಿಂದ ಸಂಘದ ಬಲವರ್ಧನೆ ಸಾಧ್ಯ ಎಂದು ಕೊಡಗು ಹವ್ಯಕ ಬ್ರಾಹ್ಮಣರ ಸಹಕಾರ ಸಂಘದ ಅಧ್ಯಕ್ಷ ಪಿ.ಎನ್. ಹರಿಶಂಕರ್ ಪ್ರಸಾದ್ ಹೇಳಿದರು.

ವಿರಾಜಪೇಟೆಯ ಚಿಕ್ಕಪೇಟೆಯಲ್ಲಿರುವ ಆಂಜನೇಯ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕೊಡಗು ಹವ್ಯಕ ಬ್ರಾಹ್ಮಣರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

1948ರಲ್ಲಿ ಸ್ಥಾಪನೆಯಾದ ಕೊಡಗು ಹವ್ಯಕ ಬ್ರಾಹ್ಮಣರ ಸಹಕಾರ ಸಂಘ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಗುತ್ತಿದೆ ಎಂದರು. ಉಪಾಧ್ಯಕ್ಷ ಎಂ.ಎಸ್ ಸುಧೀರ್ ಕುಮಾರ್ ಮಾತನಾಡಿ, ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು ಹಾಗೂ ಸಂಘದ ಆಶ್ರಯದಲ್ಲಿ ವಿಪ್ರ ಕ್ರಿಕೆಟ್ ಟೂರ್ನಿಯನ್ನು ವಿರಾಜಪೇಟೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಸಂಘದ ನಿರ್ದೇಶಕರಾದ ಪಿ.ಎಸ್ ನರೇಂದ್ರನಾಥ್, ಕೆ.ಆರ್ ರಂಜಿತ್, ಪಿ.ಎ ನಾಗರಾಜ್, ಎನ್.ಎಸ್ ಉದಯಶಂಕರ್, ಸಿ.ಎಸ್. ಸುರೇಶ್, ಕೆ.ಎಸ್. ಮಂಜುನಾಥ್ ಉಪಸ್ಥಿತರಿದ್ದರು. ನಿರ್ದೇಶಕಿ ಮೀನಾಕ್ಷಿ ಅವರ ಸ್ಥಾನಕ್ಕೆ ಮಡಿಕೇರಿಯ ಗೀತಾ ಗಿರೀಶ್ ಸಂಘದ ನಿರ್ದೇಶಕಿಯಾಗಿ ಸೇರ್ಪಡೆಗೊಂಡರು.

ಶ್ರೀನಿವಾಸ್ ಮೂರ್ತಿ ಪ್ರಾರ್ಥಿಸಿದರು. ಗೌರವ ಕಾರ್ಯದರ್ಶಿ ಕೆ. ಆರ್ ನಾರಾಯಣ ಮೂರ್ತಿ ವಾರ್ಷಿಕ ವರದಿ ವಾಚಿಸಿ ವಂದಿಸಿದರು.