ಕುಸುಮ್‌ ಸಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಕ್ರಮವಹಿಸಿ

| Published : Jul 19 2025, 01:00 AM IST

ಸಾರಾಂಶ

ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ ಮೈಸೂರುನೀರಾವರಿ ಪಂಪ್‌ ಸೆಟ್‌ ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕುಸುಮ್‌ಸಿ ಯೋಜನೆಯನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದ ರಾಜ್ಯದ ನಂಬರ್‌1 ಎಸ್ಕಾಂ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಚಾಮುಂಡೇಶ್ವರಿ ವಿದ್ಯುತ್‌ಸರಬರಾಜು ನಿಗಮ (ಸೆಸ್ಕ್‌) ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ಗುಪ್ತ ಸೂಚಿಸಿದರು.ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರೈತರ ಕೃಷಿ ಪಂಪ್ ಸೆಟ್‌ ಗಳಿಗೆ ಹಗಲಿನ ವೇಳೆಯಲ್ಲಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕುಸುಮ್‌ಸಿ ಯೋಜನೆ ಅತ್ಯಂತ ಸಹಕಾರಿಯಾಗಲಿದೆ. ಇದರ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದರೆ ಮುಂದಿನ ಕೆಲವೇ ತಿಂಗಳಲ್ಲಿ ರೈತರ ವಿದ್ಯುತ್‌ಸಮಸ್ಯೆ ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ನಿಗಮದ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದರು. ಸೆಸ್ಕ್‌ವ್ಯಾಪ್ತಿಯಲ್ಲಿ ಈಗಾಗಲೇ ಕುಸುಮ್‌ಸಿ ಯೋಜನೆಯನ್ನು ಅನುಷ್ಠಾನಗೊಳಿವಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಜೊತೆಗೆ ಎಲ್ಲೆಲ್ಲಿ ಭೂಮಿ ಸಮಸ್ಯೆಗಳಿವೆ ಅವುಗಳನ್ನು ಬಗೆಹರಿಸಬೇಕಿದ್ದು, ಈ ನಿಟ್ಟಿನಲ್ಲಿ ಉದ್ಯಮಿಗಳು ಹಾಗೂ ರೈತರ ಜತೆಗೆ ಮಾತುಕತೆ ನಡೆಸಿ ಕುಸುಮ್‌ಸಿ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಭೂಮಿಯನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಅವರು ಸೂಚಿಸಿದರು. ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿನಿಗಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಗಳು ಚುರುಕಾಗಿ ಕೆಲಸ ಮಾಡುವುದರ ಜತೆಗೆ ಸಮಸ್ಯೆಗಳು ಕಂಡುಬಂದಲ್ಲಿ ಶೀಘ್ರವೇ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಜನರ ಆಕ್ರೋಶಕ್ಕೆ ಗುರಿಯಾಗುತ್ತೇವೆ. ಹೀಗಾಗಿ, ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.ಬಿಲ್ಲಿಂಗ್‌, ಮೀಟರ್‌ರೀಡಿಂಗ್‌, ಮೀಟರ್‌ ಗಳ ಪರಿಶೀಲನೆ, ಅಕ್ರಮ ವಿದ್ಯುತ್‌ಸಂಪರ್ಕಗಳು ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಆಗಬೇಕು. ಮುಖ್ಯವಾಗಿ, ಗ್ರಾಹಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಗಾ ವಹಿಸಬೇಕು ಎಂದು ಅವರು ಸಲಹೆ ನೀಡಿದರು. ಸೆಸ್ಕ್‌ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ರಾಜು ಮಾತನಾಡಿ, ಗಂಗಾ ಕಲ್ಯಾಣ ಯೋಜನೆ, ಕುಡಿಯುವ ನೀರು ಸರಬರಾಜು ಯೋಜನೆ, ಪಿಎಂ ಜನಮನ್‌, ಹಾಡಿಗಳ ವಿದ್ಯುತೀಕರಣ ಯೋಜನೆಗಳ ಪ್ರಗತಿ ಹಾಗೂ ನಿಗಮ ವ್ಯಾಪ್ತಿಯಲ್ಲಿ ಮಾಡಲಾಗಿರುವ ಫೀಡರ್‌ನಿರ್ವಹಣೆ, ಟ್ರಾನ್ಸ್‌ ಫಾರ್ಮರ್‌ ಗಳ ನಿರ್ವಹಣೆ, ಐಪಿ ಸೆಟ್‌ ಗಳ ನೋಂದಣಿ ಇನ್ನಿತರ ವಿಷಯಗಳ ಮಾಹಿತಿ ನೀಡಿದರು. ಸಭೆಯಲ್ಲಿ ಸೆಸ್ಕ್‌ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಶರಣಮ್ಮ ಎಸ್‌. ಜಂಗಿನ, ಆಡಳಿತ ಮತ್ತು ಮಾನವ ಸಂಪನ್ಮೂಲ ಶಾಖೆಯ ಪ್ರಧಾನ ವ್ಯವಸ್ಥಾಪಕಿ ಬಿ.ಆರ್.‌ರೂಪಾ, ಮುಖ್ಯ ಇಂಜಿನಿಯರ್‌ ಗಳು ಹಾಗೂ ಅಧಿಕಾರಿಗಳು ಇದ್ದರು.-----ಕೋಟ್‌...ಕುಸುಮ್‌ಸಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ 153 ಸಬ್‌ಸ್ಟೇಷನ್‌ಗಳಿಂದ 842.16 ಮೆಗಾ ವ್ಯಾಟ್‌ವಿದ್ಯುತ್‌ಉತ್ಪಾದನೆಗೆ ಕಾರ್ಯಾದೇಶ ಪತ್ರ ನೀಡಲಾಗಿದೆ. 100 ಸಬ್‌ಸ್ಟೇಷನ್‌ ಗಳಿಂದ 566.3 ಮೆಗಾ ವ್ಯಾಟ್‌ಉತ್ಪಾದನೆಗೆ ಪಿಪಿಎ ಕಾರ್ಯಗತ ಮಾಡಲಾಗಿದೆ. ಇದರಲ್ಲಿ ಎಲ್ಲಾ ವಿಭಾಗದ ಇಇ ಗಳಿಗೆ 3 ತಿಂಗಳಲ್ಲಿ ಕನಿಷ್ಠ 5 ಮೆಗಾ ವ್ಯಾಟ್‌ವಿದ್ಯುತ್‌ಉತ್ಪಾದನೆ ಆಗಬೇಕೆಂದು ಟಾರ್ಗೆಟ್‌ನೀಡಲಾಗಿದೆ.- ಕೆ.ಎಂ. ಮುನಿಗೋಪಾಲ್‌ರಾಜು, ಎಂಡಿ, ಸೆಸ್ಕ್‌