ವಿದ್ಯಾರ್ಥಿಗಳ ಸಾಧನೆಗೆ ಗುರಿ ಇರಬೇಕು: ಶಾಸಕ

| Published : Feb 11 2024, 01:53 AM IST

ಸಾರಾಂಶ

ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಸಾಧ್ಯ. ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು

ಕನ್ನಡಪ್ರಭ ವಾರ್ತೆ ಕೋಲಾರ

ವಿದ್ಯಾರ್ಥಿಗಳು ತಂದೆ-ತಾಯಿಯರನ್ನು ಮತ್ತು ವಿದ್ಯೆ ಬುದ್ದಿ ಕಲಿಸಿದ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಸಮೈಖ್ಯ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿ, ಜೀವನದಲ್ಲಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಉದ್ಯೋಗ ಎಂಬುದು ಬಹುಮುಖ್ಯ ಎಂದರು.

ಸಾಧನೆಗೆ ಗುರಿ ಇರಬೇಕು

ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಸಾಧ್ಯ. ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು. ವಿದ್ಯಾರ್ಥಿಗಳಾದವರು ಓದಿನಲ್ಲಿ ಯಾವಾಗಲೂ ಮುಂದೆ ಇರಬೇಕು ನಮ್ಮಲ್ಲಿನ ಆತ್ಮಸ್ಥೆರ್ಯ ಹಾಗೂ ಛಲದಿಂದ ಪ್ರತಿಯೊಂದು ವಿಷಯದಲ್ಲಿ ಅಧ್ಯಯನ ಮಾಡಬೇಕು ಎಂದರು.

ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು ಎಂಬುದನ್ನು ತನ್ನಲ್ಲಿಯೇ ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಅನೇಕ ಸಾಹಿತಿಗಳು ಸೇರಿದಂತೆ ಐಎಎಸ್ ಐಪಿಎಸ್, ಅಧಿಕಾರಿಗಳು ಸ್ಫೂರ್ತಿದಾಯಕವಾಗಬೇಕು. ಪೋಷಕರು ಮತ್ತು ಗುರುಗಳು ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಧೈರ್ಯ, ಶೌರ್ಯ, ಸಾಹಸ ಗುಣಗಳನ್ನು ಬೆಳೆಸುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.ಪೋಷಕರ ಕನಸು ನನಸು ಮಾಡಿ

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲೂ ಗುರಿ ಇಟ್ಟುಕೊಂಡು ಬಂದರೆ ಮಾತ್ರವೇ ಉತ್ತಮ ತೀರ್ಮಾನಗಳನ್ನು ತೆಗೆದುಕೊಂಡು ಉತ್ತಮ ಪ್ರಜೆಗಳಾಗಲು ಸಾಧ್ಯ ತಂದೆ ತಾಯಿಗಳು ನಿಮ್ಮಗಳ ಮಧ್ಯೆ ಕನಸು ಕಾಣುತ್ತಾ ಇದ್ದು ಕನಸು ನನಸು ಮಾಡಲು ನೀವುಗಳು ಶ್ರಮಿಸಬೇಕು. ವಿದ್ಯೆ, ಕ್ರೀಡೆ, ಸಾಹಿತ್ಯ, ಕಲೆ ಇದು ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಸಮಯ ಸಿಕ್ಕಾಗ ಯಾವುದು ಮಾಡಬೇಕು ಎಂಬುದನ್ನು ತಿಳಿದು ಸಾಧನೆ ಮಾಡಿ ಸಾಧಕರಾಗಬೇಕು ಎಂದರು.

ಪ್ರತಿ ಕ್ಷೇತ್ರದಲ್ಲೂ ಅವಕಾಶಗಳಿವೆ

ವಿದ್ಯಾರ್ಥಿಗಳ ಜೀವನವೇ ದೇಶದ ಭವಿಷ್ಯವನ್ನು ಸೂಚಿಸುತ್ತದೆ ಎಚ್ಚರಿಕೆಯಿಂದ ದೇಶದ ಮತ್ತು ತಮ್ಮ ಭವಿಷ್ಯವನ್ನು ರೂಪಿಸಬೇಕಾಗಿದೆ ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶಗಳು ಇವೆ ಸಮಾಜ ಕಟ್ಟುವ ಪ್ರಮುಖ ಪಾತ್ರವನ್ನು ವಹಿಸಬೇಕು ಜಿಲ್ಲೆಯ ರಾಜ್ಯದ ಕೀರ್ತಿ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಹಾರೈಸಿದರು.

ಸಮೈಖ್ಯ ಕಾಲೇಜಿನ ಅಧ್ಯಕ್ಷ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಸದಸ್ಯ ಶಫಿ.ಅಫ್ಸರ್, ವಿಜಯನಗರ ಮಂಜುನಾಥ್, ಕಾಲೇಜಿನ ಕಾರ್ಯದರ್ಶಿ ಸುಬ್ರಮಣಿ, ಹರಿನಾಥ್ ರಾವ್, ಸುಜಯ್ ಗೌಡ, ಶ್ರೀನಿವಾಸ್ ಇದ್ದರು.