ಸಾರಾಂಶ
ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಹೋಗಿದ್ದು. ನಂತರ ನೀರಿಗಿಳಿದು ಈಜಾಡುವಾಗ ಕೆಲವೇ ನಿಮಿಷಗಳಲ್ಲಿ ವಿಕಾಸ್ ಮುಳುಗಲು ಆರಂಭಿಸಿದ್ದಾನೆ.
ಮಾಗಡಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದು ಈಜಲು ಹೋಗಿದ್ದ ಡಿಪ್ಲೋಮಾ ವಿದ್ಯಾರ್ಥಿ ಮಂಚನಬೆಲೆ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ಸಿ.ವಿ. ರಾಮನ್ನಗರ ಮುರುಗೇಶಪಾಳ್ಯದ ನಿವಾಸಿ, ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ವಿಕಾಸ್ (19) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಮೃತ ವಿದ್ಯಾರ್ಥಿ ವಿಕಾಸ್, ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಹೋಗಿದ್ದು. ನಂತರ ನೀರಿಗಿಳಿದು ಈಜಾಡುವಾಗ ಕೆಲವೇ ನಿಮಿಷಗಳಲ್ಲಿ ವಿಕಾಸ್ ಮುಳುಗಲು ಆರಂಭಿಸಿದ್ದಾನೆ.ಕೂಡಲೇ ಸ್ನೇಹಿತರು ರಕ್ಷಣೆಗೆ ಮುಂದಾಗಿ ಅದು ವಿಫಲವಾದ ನಂತರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಮತ್ತು ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಡರಾತ್ರಿವರೆಗೂ ಹುಡುಕಾಟ ನಡೆಸಿ ನಂತರ ವಿಕಾಸ್ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಕೊಂಡು ತನಿಖೆ ಕೈಗೊಳ್ಳಲಾಗಿದೆ.