ಗೋಣಿಕೊಪ್ಪ ಕಾವೇರಿ ಕಾಲೇಜು ಸಭಾಂಗಣದಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಕಾರ್‍ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ

ನಾಡಿನಾದ್ಯಂತ ಖ್ಯಾತಿ ಹೊಂದಿರುವ ಕಾವೇರಿ ಕಾಲೇಜು, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಗೂ ಸರ್ವತೋಮುಖ ಪ್ರಗತಿಯನ್ನು ಗುರುತಿಸುವಲ್ಲಿ ಹಾಗೂ ಅವರ ಭವಿಷ್ಯವನ್ನು ವಿನ್ಯಾಸಗೊಳಿಸುವಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳುವುದರೊಂದಿಗೆ ತಾವು ಓದಿದ ವಿದ್ಯಾಸಂಸ್ಥೆಯ ಹೆಸರಿಗೆ ಚ್ಯುತಿ ಬಾರದಂತೆ ಉತ್ತಮವಾಗಿ ಜೀವನ ಸಾಗಿಸಬೇಕು ಎಂದು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು.

ಗೋಣಿಕೊಪ್ಪ ಕಾವೇರಿ ಕಾಲೇಜು ಸಭಾಂಗಣದಲ್ಲಿ ನಡೆದ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಕಾರ್‍ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾವೇರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮಂಡೆಪಂಡ ಎಸ್. ಮುತ್ತಣ್ಣ, ಕೇಂದ್ರ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಟಿ.ಜಿ. ಸುರೇಶ್, ಮಣಿಪಾಲ್ ಎಂಐಟಿ ಕಾಲೇಜಿನ ಗಣಿತಶಾಸ್ತ್ರ ಪ್ರಾಧ್ಯಾಪಕಿ ಡಾ. ಶೋಭಾ ಎಂ.ಇ., ಕೊಡಗು ಸಹಕಾರ ರತ್ನ ಪ್ರಶಸ್ತಿ ವಿಜೇತ ಚಿರಿಯಪಂಡ ಕೆ. ಉತ್ತಪ್ಪ, ಕಾವೇರಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ, ಪಂಚಾಯಿತಿ ಅಧ್ಯಕ್ಷ ಕುಲಚಂಡ ಪ್ರಮೋದ್ ಗಣಪತಿ, ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಇದ್ದರು.