ಸಾರಾಂಶ
ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಮುಂದಿನ ಯೋಜನೆ ರೂಪುರೇಷೆಗೆ ಪ್ರೇರಕವಾಗಲಿದೆ. ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅನೇಕ ಟೌನ್ ಪ್ಲಾನಿಂಗ್ ಯೋಜನೆಗಳ ಪ್ರಗತಿಯನ್ನು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಹುಬ್ಬಳ್ಳಿ: ನಗರ ಯೋಜನಾ ಅಧ್ಯಯನಕ್ಕಾಗಿ ಅಹಮದಾಬಾದ್ ಪ್ರವಾಸಕ್ಕೆ ತೆರಳಿರುವ ಇಲ್ಲಿನ ನಿಯೋಗವೂ ಗುರುವಾರ ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಎಯುಡಿಎ) ಭೇಟಿ ನೀಡಿ ಟೌನ್ ಪ್ಲಾನಿಂಗ್ ಸ್ಕೀಮ್ ಕುರಿತು ಮಾಹಿತಿ ಪಡೆಯಿತು.
ಗುಜರಾತ್ನಲ್ಲಿ ಹಲವು ದಶಕಗಳಿಂದ ಯಶಸ್ವಿಯಾಗಿ ಜಾರಿಯಾಗುತ್ತಿರುವ ಟೌನ್ ಪ್ಲಾನಿಂಗ್ ಯೋಜನೆಗಳ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಮೂಲಕ ತಿಳಿದುಕೊಂಡಿತು.ಶಾಶ್ವತ ಮೂಲಸೌಕರ್ಯಗಳ ಅಭಿವೃದ್ಧಿ, ಭೂಮಿಯ ಪುನರ್ ಹಂಚಿಕೆ, ಭೂಮಾಲೀಕರ ಹಕ್ಕುಗಳ ರಕ್ಷಣೆ ಹಾಗೂ ಸಾರ್ವಜನಿಕ ಪಾಲ್ಗೊಳ್ಳುವಿಕೆ ಕುರಿತು ಎಯುಡಿಎ ಅಧ್ಯಕ್ಷರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಚರ್ಚಿಸಲಾಯಿತು.
ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಮುಂದಿನ ಯೋಜನೆ ರೂಪುರೇಷೆಗೆ ಪ್ರೇರಕವಾಗಲಿದೆ. ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅನೇಕ ಟೌನ್ ಪ್ಲಾನಿಂಗ್ ಯೋಜನೆಗಳ ಪ್ರಗತಿಯನ್ನು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅದರೊಳಗೆ ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲುಎಸ್) ಗೃಹ ಯೋಜನೆಗಳು, ರಸ್ತೆಗಳ ಅಭಿವೃದ್ಧಿಗಾಗಿ ಭೂಮಿಯನ್ನು ಸಂಗ್ರಹಿಸುವ ವಿಧಾನ, ಭೂಪೂರ್ವ ಮಾಲೀಕರಿಗೆ ಪುನರ್ ಹಂಚಿಕೆ ನೀಡುವ ಪ್ರಕ್ರಿಯೆ, ಮೂಲಸೌಕರ್ಯ ಅಭಿವೃದ್ಧಿಯ ನಿರ್ವಹಣಾ ತಂತ್ರಗಳು ಸೇರಿದಂತೆ ಹಲವಾರು ಅಂಶಗಳನ್ನು ತ್ವರಿತವಾಗಿ ಹಾಗೂ ತಾಂತ್ರಿಕವಾಗಿ ಅಧ್ಯಯನ ಮಾಡಲಾಯಿತು.ಈ ಅಧ್ಯಯನದಿಂದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಟೌನ್ ಪ್ಲಾನಿಂಗ್ ಯೋಜನೆ ಜಾರಿಗೊಳಿಸಲು ಅನುಕೂಲವಾಗಲಿದೆ ಎಂದು ನಿಯೋಗದಲ್ಲಿನ ಪ್ರತಿನಿಧಿಗಳು ತಿಳಿಸಿದರು.
ಅಧ್ಯಯನ ತಂಡದಲ್ಲಿ ಶಾಸಕ ಹಾಗೂ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಕೊಳಚೆಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ, ಶಾಸಕ ಮಹೇಶ ಟೆಂಗಿನಕಾಯಿ, ಹುಡಾ ಅಧ್ಯಕ್ಷ ಶಾಕೀರ ಸನದಿ, ರಾಜ್ಯ ನಗರ ಯೋಜನಾ ಮಂಡಳಿಯ ಹೆಚ್ಚುವರಿ ನಿರ್ದೇಶಕ ಎಂ.ಸಿ. ಶಶಿಕುಮಾರ್, ವಿಭಾಗೀಯ ಕಚೇರಿಯ ಹೆಚ್ಚುವರಿ ನಿರ್ದೇಶಕ ವಿವೇಕ್ ಕಾರೆಕರ, ಹುಡಾ ಆಯುಕ್ತ ಸಂತೋಷ ಬಿರಾದಾರ, ಹು-ಧಾ ಮಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.