ಸಾರಾಂಶ
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್.ಎಸ್. ಸುಂದರೇಶ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್ಎಸ್ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಸೂಡಾ ಕಚೇರಿ ಮುಂದೆ ಪಟಾಕಿ ಸಿಡಿಸಿ ಘೋಷಣೆ ಕೂಗಿ ಸಂಭ್ರಮಿಸಿದರು.
ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್.ಎಸ್. ಸುಂದರೇಶ್ ಶುಕ್ರವಾರ ಅಧಿಕಾರ ವಹಿಸಿಕೊಂಡರು.
ಇದಕ್ಕೂ ಮುನ್ನ ಎಂಆರ್ಎಸ್ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಸೂಡಾ ಕಚೇರಿ ಮುಂದೆ ಪಟಾಕಿ ಸಿಡಿಸಿ ಘೋಷಣೆ ಕೂಗಿ ಸಂಭ್ರಮಿಸಿದರು.ಸೂಡಾ ಕಚೇರಿಯಲ್ಲಿ ಅಧಿಕೃತವಾಗಿ ಆಯುಕ್ತರಿಂದ ಅಧಿಕಾರ ಸ್ವೀಕರಿಸಿದ ಮಾತನಾಡಿದ ಎಚ್.ಎಸ್.ಸುಂದರೇಶ್ ಮಾತನಾಡಿ, ಪಕ್ಷ ನನಗೆ ಸ್ಥಾನ ಮಾನ ನೀಡಿ ಗೌರವಿಸಿದೆ. ಪಕ್ಷದ ವರ್ಚಸ್ಸಿಗೆ ಚ್ಯುತಿ ಬಾರದ ರೀತಿಯಲ್ಲಿ ಮತ್ತು ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ಸೇವೆ ಸಲ್ಲಿಸುವುದಾಗಿ ಸಭೆಯಲ್ಲಿ ಭರವಸೆ ನೀಡಿದರು.
ಪ್ರಮುಖರಾದ ಬಲ್ಕೀಶ್ ಬಾನು, ರಾಮೇಗೌಡ, ಸೈಯದ್ ವಾಹಿದ್ ಅಡ್ಡು, ವಿಜಯಲಕ್ಷ್ಮೀ ಪಾಟೀಲ್, ಚಂದ್ರಭೂಪಾಲ್, ಇಕ್ಕೇರಿ ರಮೇಶ್, ವೈ.ಬಿ. ಚಂದ್ರಕಾಂತ್, ವಿಜಯಕುಮಾರ್, ದೇವಿಕುಮಾರ್, ಯಮುನಾ ರಂಗೇಗೌಡ, ಇಸ್ಮಾಯಿಲ್ ಖಾನ್, ಮತ್ತಿತರರು ಇದ್ದರು.ನೂರಾರು ಅಭಿಮಾನಿಗಳು, ಮುಖಂಡರು ಬೆಂಬಲಿಗರು ಶುಭ ಹಾರೈಸಿದರು.
- - - -1ಎಸ್ಎಂಜಿ07:ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಎಚ್.ಎಸ್. ಸುಂದರೇಶ್ ಶುಕ್ರವಾರ ಆಯುಕ್ತರಿಂದ ಅಧಿಕಾರ ವಹಿಸಿಕೊಂಡರು.