ಹಾವಂಜೆ ಪರಿಸರದಲ್ಲಿ ಬಾಲಲೀಲಾ ಚಿಣ್ಣರ ಬೇಸಿಗೆ ಶಿಬಿರ ಆರಂಭ

| Published : Apr 11 2025, 12:36 AM IST

ಹಾವಂಜೆ ಪರಿಸರದಲ್ಲಿ ಬಾಲಲೀಲಾ ಚಿಣ್ಣರ ಬೇಸಿಗೆ ಶಿಬಿರ ಆರಂಭ
Share this Article
  • FB
  • TW
  • Linkdin
  • Email

ಸಾರಾಂಶ

ಹಾವಂಜೆಯ ಭಾವನಾ ಪೌಂಡೇಶನ್ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸುತ್ತಿರುವ ಬಾಲಲೀಲಾ ಚಿಣ್ಣರ ಬೇಸಿಗೆ ಶಿಬಿರವನ್ನು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಂಗೀತ ಸಂಯೋಜಕ ಅರುಣ್ ಹಾವಂಜೆ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಹಾವಂಜೆಯ ಭಾವನಾ ಪೌಂಡೇಶನ್ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸುತ್ತಿರುವ ಬಾಲಲೀಲಾ ಚಿಣ್ಣರ ಬೇಸಿಗೆ ಶಿಬಿರವನ್ನು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಂಗೀತ ಸಂಯೋಜಕ ಅರುಣ್ ಹಾವಂಜೆ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಭಾವನಾ ಫೌಂಡೇಶನ್ ಸಂಘಟಿಸುತ್ತಿರುವ ಬೇಸಿಗೆ ಶಿಬಿರವು ಬಹುಮಹತ್ವಪೂರ್ಣವಾದುದು ಮತ್ತು ಇಂದಿನ ಆಧುನಿಕ ಜೀವನದ ನಡುವೆ ಸಾಂಪ್ರದಾಯಿಕ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಕಲೆ, ಅಭಿನಯ, ಸಂಗೀತ ಎಲ್ಲವನ್ನೂ ಸಮೀಕರಿಸುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಭಾವನಾ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಯಕ್ಷಗುರು ಹಾವಂಜೆ ಮಂಜುನಾಥ ರಾವ್ ಹಾಗೂ ಶಿಬಿರ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ, ವಿಶು ರಾವ್ ಹಾವಂಜೆ ಹಾಗೂ ವಿದುಷಿ ಅಕ್ಷತಾ ವಿಶು ರಾವ್ ಉಪಸ್ಥಿತರಿದ್ದರು.

ಈ ಬೇಸಿಗೆ ಶಿಬಿರವು ನಾಲ್ಕು ದಿನಗಳ ಕಾಲ ನಡೆಯಲಿದ್ದು ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವ ಹಾಗೂ ಕಸವನ್ನು ರಸವಾಗಿಸುವ ಉದ್ದೇಶದೊಂದಿಗೆ ರೂಪಿಸಲಾಗಿದೆ. ಅಭಿನಯ, ಆವೆಮಣ್ಣಿನ ಶಿಲ್ಪಗಳು, ಕಾವಿ ಕಲೆ, ಪಕ್ಷಿ ವೀಕ್ಷಣೆ, ಮನೆಮದ್ದು, ಗ್ರಾಮೀಣ ಆಟಗಳು, ಸಂಗೀತ, ಬಟ್ಟೆಯ ಮೇಲೆ ಮುದ್ರಣ ಕಲೆ ಮುಂತಾಗಿ ಹತ್ತು ಹಲವಾರು ಅಂಶಗಳನ್ನು ಶಿಬಿರದಲ್ಲಿ ಕಲಿಸಿ ಕೊಡಲಾಗುತ್ತಿದೆ.

ಶಿಬಿರದ ಸಮಾರೋಪ ಸಮಾರಂಭ 13ರಂದು ಸಂಜೆ ೨.೩೦ಕ್ಕೆ ನೆರವೇರಲಿದೆ. ಇದೇ ಸಂದರ್ಭದಲ್ಲಿ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ‘ವಿಶ್ವ ಕಲಾ ಸಿಂಧು’ ಪುರಸ್ಕಾರವನ್ನು ಹಿರಿಯ ಕಲಾವಿದ ರಮೇಶ್ ರಾವ್ ಇವರಿಗೆ ನೀಡಿ ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಥಾನದ ವಿಶ್ವನಾಥ ಶೆಣೈ, ಕುಂದಾಪುರದ ಯುವ ಉದ್ಯಮಿಗಳಾದ ಸಂಪತ್ ಶೆಟ್ಟಿ ಉಪಸ್ಥಿತರಿರುತ್ತಾರೆ.