ಸಾರಾಂಶ
ಸುರತ್ಕಲ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಆಶ್ರಯಲ್ಲಿ ನಡೆಯುವ 4ನೇ ವರ್ಷದ ರಾಜ್ಯಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್- 4 ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅರ್ಚಕ ಶಂಕರನಾರಾಯಣ ಭಟ್ ಬಿಡುಗಡೆ ಮಾಡಿದರು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಸುರತ್ಕಲ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಆಶ್ರಯಲ್ಲಿ ನಡೆಯುವ 4ನೇ ವರ್ಷದ ರಾಜ್ಯಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್- 4 ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅರ್ಚಕ ಶಂಕರನಾರಾಯಣ ಭಟ್ ಬಿಡುಗಡೆ ಮಾಡಿದರು.ಸಂಸ್ಥೆಯ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಮಾತನಾಡಿ, ಕ್ರಿಕೆಟ್ ಪಂದ್ಯಾಕೂಟವು ಎಪ್ರಿಲ್ ತಿಂಗಳ 5 ಮತ್ತು 6 ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಬೆಂಗಳೂರು, ಶಿವಮೊಗ್ಗ, ಅರಸೀಕೆರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಪ್ರತಿಷ್ಠಿತ 14 ತಂಡಗಳು ಭಾಗವಹಿಸಲಿದೆಯೆಂದು ತಿಳಿಸಿದರು.
ಈ ಸಂದರ್ಭ ಸಂಸ್ಥೆಯ ಸಂಚಾಲಕ ಮನೋಹರ್ ಶೆಟ್ಟಿ ಸೂರಿಂಜೆ, ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ, ಕಾರ್ಯದರ್ಶಿ ಕಿರಣ್ ಆಚಾರ್ಯ, ಪದಾಧಿಕಾರಿಗಳಾದ ಕುಶಲ ಮಣಿಯಾಣಿ, ಸಂತೋಷ್ ಬೇಕಲ್, ಲೀಲಾಧರ ಕಡಂಬೋಡಿ, ಶಿವಪ್ರಸಾದ್, ಅನಂತರಾಜ್ ಶೆಟ್ಟಿಗಾರ್, ನಿರಂಜನ್ ಶೆಟ್ಟಿ, ಓಂಪ್ರಕಾಶ್ ಶೆಟ್ಟಿಗಾರ್ ಕಡಂಬೋಡಿ ಮತ್ತಿತರರು ಉಪಸ್ಥಿತರಿದ್ದರು.