ಮೂಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳ ಪದಗ್ರಹಣ

| Published : Dec 16 2024, 12:50 AM IST

ಮೂಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳ ಪದಗ್ರಹಣ
Share this Article
  • FB
  • TW
  • Linkdin
  • Email

ಸಾರಾಂಶ

ಕಿನ್ನಿಗೋಳಿಯ ನೇಕಾರ ಸೌಧದ ಸಭಾಭವನದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕದ ಮೂಲ್ಕಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ ಸಮಾರಂಭ ನೆರವೇರಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ಕನ್ನಡ ಭಾಷೆಯ ಬೆಳವಣಿಗೆಯ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಉತ್ತಮ ಕಾರ್ಯ ಮಾಡುತ್ತಿದ್ದು ಯುವ ಪೀಳಿಗೆ ಕನ್ನಡ ಭಾಷೆ ಉಳಿಸಿ, ಬೆಳೆಸುವ ಕಾರ್ಯ ಮಾಡಬೇಕು ಎಂದು ಶ್ರೀ ಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕ ವೇ.ಮೂ. ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದ್ದಾರೆ.

ಕಿನ್ನಿಗೋಳಿಯ ನೇಕಾರ ಸೌಧದ ಸಭಾಭವನದಲ್ಲಿ ನಡೆದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕದ ಮೂಲ್ಕಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು. ಕಿನ್ನಿಗೋಳಿ ಕೊಸೆಸಾಂವ್ ಅಮ್ಮನವರ ಇಗರ್ಜಿಯ ಪ್ರಧಾನ ಧರ್ಮಗುರು ರೆ.ಫಾ.ಜೋಕಿಂ ಫೆರ್ನಾಂಡಿಸ್‌ ಶುಭಾಶಂಸನೆ ಮಾಡಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಗೌರವ ಪ್ರಧಾನ ಕಾರ್ಯದರ್ಶಿ ಭುವನಾಭಿರಾಮ ಉಡುಪ, ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಮಾಜಿ ಅಧ್ಯಕ್ಷ ಧರ್ಮದರ್ಶಿ ಮೋಹನದಾಸ ಸುರತ್ಕಲ್, ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಮಿಥುನ್ ಕೊಡೆತ್ತೂರು, ಕಿನ್ನಿಗೋಳಿ ರೋಟರಿ ಕ್ಲಬ್‌ ಅಧ್ಯಕ್ಷ ಧನಂಜಯ ಶೆಟ್ಟಿಗಾರ್, ದಾಯ್ಜಿ ವರ್ಲ್ಡ್‌ ರ್ದೇಶಕ ಹೇಮಾಚಾರ್ಯ, ಐಕಳ ಪೊಂಪೈ ಪದವಿ ಕಾಲೇಜಿನ ಪ್ರಾಂಶುಪಾಲ ಕಾಲೇಜಿನ ಪ್ರಾಂಶುಪಾಲ ಡಾ. ಪುರುಷೋತ್ತಮ ಕೆ.ವಿ., ಹಿರಿಯ ಸಾಹಿತಿ ಉದಯ ಕುಮಾರ್ ಹಬ್ಬು ಮತ್ತಿತರರು ಉಪಸ್ಥಿತರಿದ್ದರು.

ಮೂಲ್ಕಿ ಹೋಬಳಿ ಘಟಕದ ಪದಾಧಿಕಾರಿಗಳ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಜೊಸ್ಸಿ ಪಿಂಟೋ, ಗೌರವ ಕೋಶಾಧ್ಯಕ್ಷರಾಗಿ ಅನಿಲ್‌ ಸಾಲ್ಯಾನ್, ಗೌರವ ಕಾರ್ಯದರ್ಶಿ ಶರತ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸ್ಟೇನಿ ಪಿಂಟೋ, ಸದಸ್ಯರಾಗಿ ಪ್ರಮೋದ್ ಕುಮಾರ್, ಶಂಕರ್ ಮಾಸ್ಟರ್ ಗೋಳಿಜಾರ, ಹೃದಯ ಕವಿ ಮನ್ಸೂರ್ ಮುಲ್ಕಿ, ಅಂಬಿಕಾ ಪ್ರತಾಪ್ ಶೆಟ್ಟಿ, ಶಶಿಕಲಾ ಕೆಮ್ಮಡೆ, ಸಂತೋಷ್‌ ಶೆಟ್ಟಿ ಬಾಬಕೋಡಿ, ಟಿ.ಕೆ ಅಬ್ದುಲ್ ಖಾದರ್ ಗುತ್ತಕಾಡು, ಐಕಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪುರುಷೋತ್ತಮ ಕೆ ವಿ ಆಯ್ಕೆಯಾದರು.

ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜೋಸ್ಸಿ ಪಿಂಟೋ ಸ್ವಾಗತಿಸಿ, ವಂದಿಸಿದರು.