ತೋಂಟದಾರ್ಯ ಮಠದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ಮೇಲೆ ಸೂಕ್ತ ಕ್ರಮ ಜರುಗಿಸಿ

| Published : May 15 2025, 01:38 AM IST

ಸಾರಾಂಶ

ತೋಂಟದಾರ್ಯ ಮಠದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ತೋಂಟದಾರ್ಯ ಮಠದ ಸದ್ಭಕ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರಿಗೆ ಮನವಿ ಸಲ್ಲಿಸಿದರು.

ಗದಗ: ತೋಂಟದಾರ್ಯ ಮಠದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ತೋಂಟದಾರ್ಯ ಮಠದ ಸದ್ಭಕ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಜಾತ್ರ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಧನೇಶ ದೇಸಾಯಿ ಮಾತನಾಡಿ, ನಾಡಿನ ಪ್ರಸಿದ್ಧ ಧಾರ್ಮಿಕ ಹಾಗೂ ಭಾವೈಕ್ಯತೆಯ ಕೇಂದ್ರವಾದ ಜ.ತೋಂಟದಾರ್ಯ ಮಠದ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮಿಗಳ ಹಾಗೂ ಇಂದಿನ ಪೀಠಾಧಿಪತಿ ಡಾ.ತೋಂಟದ ಸಿದ್ಧರಾಮ ಸ್ವಾಮಿಗಳ ವಿರುದ್ಧ ಅಪಮಾನಕರ ಹೇಳಿಕೆಗಳನ್ನು ನೀಡುತ್ತಾ ಅಪಪ್ರಚಾರ ಮಾಡಿ ಅವರ ಅಸಂಖ್ಯಾತ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿರುವ ಗದುಗಿನ ರಾಜು ಖಾನಪ್ಪನವರ ಹಾಗೂ ಅವನ ಸಹಚರರನ್ನು ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಜ.ತೋಂಟದಾರ್ಯ ಮಠ ನಾಡಿನ ಪ್ರಸಿದ್ಧ ಧಾರ್ಮಿಕ ಕೇಂದ್ರ, ಭಾವೈಕ್ಯತೆಯ ಕ್ಷೇತ್ರ, ಸರ್ವಜನಾಂಗದ ಶಾಂತಿಯ ತೋಟ ಎನಿಸಿದೆ. ಶ್ರೀಮಠ ಗದಗ-ಡಂಬಳ ಎಡೆಯೂರು ಹಾವೇರಿ, ಕಗ್ಗೆರೆ ಮುಂತಾದ ಕಡೆ ಯಾವುದೇ ಪಂಕ್ತಿಭೇದವಿಲ್ಲದೆ ಪ್ರತಿನಿತ್ಯ ಸಹಸ್ರಾರು ಭಕ್ತರಿಗೆ ಉಚಿತ ಅನ್ನದಾಸೋಹವನ್ನು ನಡೆಯುತ್ತಿದೆ. ಹಿಂದುಳಿದ ಹಾಗೂ ಬಡ ಮಕ್ಕಳಿಗಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. ಸಾವಿರಾರು ಕನ್ನಡ ಪುಸ್ತಕಗಳನ್ನು ಪ್ರಕಟಿಸಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿ ಕನ್ನಡದ ಮಠ ಎನಿಸಿದೆ. 200 ವರ್ಷಗಳಿಗಿಂತ ಅಧಿಕ ಕಾಲ ಗದಗ ಮಠದ ಸುತ್ತಲೂ ಇರುವ ಅಂದಾಜು 80 ಎಕರೆ ಮೂಲತಃ ಮಠದ ಮಾಲಿಕತ್ವದ ಪೈಕಿ ಜಾಗೆಯಲ್ಲಿ ಜಾತ್ರೆ ನಡೆಯುತ್ತ ಬಂದಿರುತ್ತದೆ. ಈ ಜಾಗೆಯಲ್ಲಿರುವ ಯಾವುದೇ ಒಂದು ರಸ್ತೆಯನ್ನು ನಾವು ನಗರಸಭೆಯ ಸ್ವಾಧೀನಕ್ಕೆ ಕೊಟ್ಟಿರುವದಿಲ್ಲ. ನಮ್ಮ ಮಠಕ್ಕೆ ಪರಿಹಾರ ನೀಡಿ ನಗರಸಭೆ ತನ್ನ ಸ್ವಾಧೀನಕ್ಕೆ ಪಡೆದುಕೊಂಡಿರುವುದಿಲ್ಲ, ನಗರಸಭೆ ಸ್ಥಾಪನೆಯ ಪೂರ್ವದಲ್ಲಿ ಶ್ರೀಮಠದ ಜಾತ್ರೆ ನಡೆಯುತ್ತ ಬಂದಿರುತ್ತದೆ. ಈ ಜಾಗೆ ಮಠದ ಮಾಲಿಕತ್ವದ ಜಾಗೆ ಎಂಬುದಕ್ಕೆ ಸಾಕಷ್ಟು ದಾಖಲೆಗಳು ಮತ್ತು ನಗರಸಭೆಯ ಆದೇಶಗಳು ಇರುತ್ತವೆ. ಮಠದ ಈ ಎಲ್ಲ ಬೆಳವಣಿಗೆಯನ್ನು ಸಹಿಸದ, ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಬೇಕೆಂಬ ಈ ಧಾರ್ಮಿಕ ಕ್ಷೇತ್ರಕ್ಕೆ ಅಪಮಾನ ಮಾಡಬೇಕೆಂಬ ಉದ್ದೇಶದಿಂದ ಹಾಗೂ ಹಿಂದಿನ ಹಾಗೂ ಇಂದಿನ ಶ್ರೀಗಳ ವ್ಯಕ್ತಿತ್ವಕ್ಕೆ ಚ್ಯುತಿ ತರಬೇಕೆಂಬ ಉದ್ದೇಶದಿಂದ ಭಾರತೀಯ ನ್ಯಾಯಶಾಸ್ತ್ರದ ನಿಯಮಗಳನ್ನು ಉಲ್ಲಂಘಿಸಿ ರಾಜು ಖಾನಪ್ಪನವರ ಹಾಗೂ ಸಹಚರರು ಪ್ರತಿ ವರ್ಷ ಜಾತ್ರಾ ಸಮಯದಲ್ಲಿ ಜಾತ್ರೆಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಹಾಗೂ ಶ್ರೀಗಳನ್ನು ವಿರೋಧಿಸಿ ಪತ್ರಿಕಾ ಗೋಷ್ಠಿಯನ್ನು ನಡೆಸಿ, ಸಾಕಷ್ಟು ಅವಮಾನ ಮಾಡಿದ್ದಾರೆ. ಅವರು ನೀಡಿದ ಎಲ್ಲ ಹೇಳಿಕೆಗಳು ಸಂಪೂರ್ಣ ದುರುದ್ದೇಶದಿಂದ ಅಪಪ್ರಚಾರ ಮಾಡುವ ಉದ್ದೇಶದಿಂದ, ಸುಳ್ಳಿನಿಂದ ಕೂಡಿರುತ್ತವೆ. ಕಾರಣ ಇಂತಹ ಸಮಾಜಘಾತುಕ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದರು.

ನಗರಸಭೆ ಅಧ್ಯಕ್ಷ ಕೃಷ್ಣಾ ಪರಾಪೂರ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಉಪಾಧ್ಯಕ್ಷ ಡಿ.ಜಿ. ಜೋಗಣ್ಣವರ, ಪಿ.ಎಸ್. ಸಂಶಿಮಠ, ಬಾಲಚಂದ್ರ ಭರಮಗೌಡರ, ರಾಜು ಕುರಡಗಿ, ವಿನಾಯಕ ಮಾನ್ವಿ, ಶಿವಣ್ಣ ಮುಳಗುಂದ, ರಾಮಣ್ಣ ಫಲದೊಡ್ಡಿ, ವಿ.ಆರ್. ಗೋವಿಂದಗೌಡ್ರ, ಕೆ.ಎಚ್. ಬೇಲೂರ, ಎಸ್.ಎನ್. ಬಳ್ಳಾರಿ, ಕೆ.ಎಸ್.ಚಟ್ಟಿ, ಸದಾಶಿವಯ್ಯ ಮದರಿಮಠ, ರಾಜು ಗುಡಿಮನಿ, ಮಾರ್ತಾಂಡಪ್ಪ ಹಾದಿಮನಿ, ಗಂಗಾಧರ ಹಿರೇಮಠ, ಎಂ.ಎಸ್. ಅಂಗಡಿ, ಗುರುಬಸವ ತಡಸದ, ಮಲ್ಲಿಕಾರ್ಜುನ ಐಲಿ, ದಾನಯ್ಯ ಗಣಾಚಾರಿ, ಪ್ರಕಾಶ ಅಸುಂಡಿ, ಶೇಖಣ್ಣ ಕವಳಿಕಾಯಿ, ಈಶಣ್ಣ ಮುನವಳ್ಳಿ, ಬಲರಾಮ ಬಸವಾ, ಚಂದ್ರಕಾಂತ ಚವಾಣ, ರಾಮು ಬಳ್ಳಾರಿ, ಮುರುಘೇಶ ಬಡ್ನಿ, ವೀರಣ್ಣ ಜ್ಯೋತಿ, ಪ್ರಕಾಶ ಕೆರೂರ, ಎಂ.ಎಸ್. ಪಾಟೀಲ, ಪಟ್ಟಣಶೆಟ್ಟರ, ವಿರೂಪಾಕ್ಷಪ್ಪ ಬಳ್ಳೊಳ್ಳಿ, ಸಿದ್ಧಣ್ಣ ಬಂಗಾರಶೆಟ್ಟರ, ಅಮರೇಶ ಅಂಗಡಿ, ಅಶೋಕ ಕುಡತಿನಿ, ಕೆ.ಎಸ್. ಪಲ್ಲೇದ, ರಾಚಪ್ಪ ಮಿಣಜಗಿ, ಶೇಖಣ್ಣ ಕಳಸಾಪೂರ, ಎಸ್.ಎಸ್. ಭಜಂತ್ರಿ, ಮಾರುತಿ ಬುರಡಿ, ಪ್ರಕಾಶ ಉಗಲಾಟದ, ವೀರಣ್ಣ ಗೊಟಡಕಿ, ಸಿದ್ಧರಾಮಪ್ಪ ಗೊಜನೂರ, ಜಯಣ್ಣ ಶೆಟ್ಟರ, ವೈಜನಾಥ ಕೌತಾಳ, ಕುಮಾರ ಮಾದರ, ಅಲ್ತಾಫ್ ಖಾನಾಪೂರ, ಪರಶುರಾಮ ಸಮಗಾರ, ಶಿವಯೋಗಿ ತಡಸದ ಸೇರಿದಂತೆ ಅನೇಕ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು.