ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಸಿಇಒ ಕೆ.ಎಂ.ಗಾಯಿತ್ರಿ

| Published : Feb 29 2024, 02:03 AM IST

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಸಿಇಒ ಕೆ.ಎಂ.ಗಾಯಿತ್ರಿ
Share this Article
  • FB
  • TW
  • Linkdin
  • Email

ಸಾರಾಂಶ

ಬಾಕಿ ಇರುವ ಜಲ ಜೀವನ್ ಮಿಷನ್ ಕಾಮಗಾರಿ ತ್ವರಿತವಾಗಿ ಮುಂದಿನ ಒಂದು ತಿಂಗಳೊಳಗೆ ಪೂರ್ಣಗೊಳಿಸಲು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್‌ಗೆ ಸೂಚನೆ. ನರೇಗಾ ಯೋಜನೆಯಡಿ ಬೂದು ನೀರು ನಿರ್ವಹಣಾ ಕಾಮಗಾರಿಯನ್ನು ಅತೀ ಶೀಘ್ರದಲ್ಲೇ ಪ್ರಾರಂಭಿಸಬೇಕು. ಈ ಕಾಮಗಾರಿಗಳಿಂದ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಬಗ್ಗೆ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಗ್ರಾಪಂ ವ್ಯಾಪ್ತಿಯಲ್ಲಿ ಎಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ಕೆ.ಎಂ. ಗಾಯಿತ್ರಿ ಸೂಚಿಸಿದರು.

ಬುಧವಾರ ಟಿ.ನರಸೀಪುರ ತಾಲೂಕು ಸೋಮನಾಥಪುರ ಗ್ರಾಪಂ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಿ ಅವರು ಮಾತನಾಡಿದರು.

ಬಾಕಿ ಇರುವ ಜಲ ಜೀವನ್ ಮಿಷನ್ ಕಾಮಗಾರಿ ತ್ವರಿತವಾಗಿ ಮುಂದಿನ ಒಂದು ತಿಂಗಳೊಳಗೆ ಪೂರ್ಣಗೊಳಿಸಲು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಅವರಿಗೆ ತಿಳಿಸಿದರು.

ನರೇಗಾ ಯೋಜನೆಯಡಿ ಬೂದು ನೀರು ನಿರ್ವಹಣಾ ಕಾಮಗಾರಿಯನ್ನು ಅತೀ ಶೀಘ್ರದಲ್ಲೇ ಪ್ರಾರಂಭಿಸಬೇಕು ಎಂದು ತಿಳಿಸುತ್ತಾ ಈ ಕಾಮಗಾರಿಗಳಿಂದ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಬಗ್ಗೆ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡಿದರು.

ಮಾ.3ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಹೆಚ್ಚಿನ ಜನರಿಗೆ ಉದ್ಯೋಗ ಕಲ್ಪಿಸಿಕೊಡುವಂತೆ ಹಾಗೂ ಕಾಮಗಾರಿಗಳಲ್ಲಿ ಮಹಿಳೆಯರು ಹೆಚ್ಚಾಗಿ ಭಾಗವಹಿಸುವಂತೆ ಅರಿವು ಮೂಡಿಸಬೇಕು ಎಂಸಿದರು.

ತೆರಿಗೆ ವಸೂಲಾತಿ ಕಡ್ಡಾಯವಾಗಿ ಪಿಒಎಸ್ ಮಿಷನ್ ಬಳಸಿ ಸಂಗ್ರಹಿಸಬೇಕು. ಬಾಕಿ ಇರುವ ತೆರಿಗೆಯನ್ನು ಶೇ. 100ರಷ್ಟು ವಸೂಲಾತಿ ಮಾಡಲು ತಿಳಿಸಿದರು.

ಸಂಜೀವಿನಿ ಸಂಘದವರಿಂದ ತಯಾರಾದ ಸಾಂಬಾರು ಪುಡಿ ಮತ್ತು ಉಪ್ಪಿನಕಾಯಿ ಮಾರಾಟ ಮಾಡಲು ಅನುಕೂಲವಾಗುವಂತೆ ಅಂಗಡಿ ವ್ಯವಸ್ಥೆ ಮಾಡಿಕೊಡುವಂತೆ ಪಿ.ಡಿ.ಒ ಅವರಿಗೆ ಸೂಚಿಸಿದರು. ಮಹಿಳಾ ಸಂಘದವರು ನಡೆಸುತ್ತಿರುವ ಬಳೆ ಅಂಗಡಿ, ಸೀರೆ ಅಂಗಡಿ, ಗೊಂಬೆ ಅಂಗಡಿ, ಸಿಗಡಿ ಮತ್ತು ಕರಿಮೀನು ಮಾರಾಟ ಮಾಡಲು ಅನುಕೂಲವಾಗುವಂತೆ ಪಿಡಿಒ ಅವರಿಗೆ ಮಾಹಿತಿ ನೀಡಲು ಸೂಚಿಸಿದರು.

ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳು ಹಾಗೂ ರಿಜಿಸ್ಟರ್ ಗಳನ್ನು ಪರಿಶೀಲಿಸಿ ಕಟ್ಟಡವನ್ನು ದುರಸ್ತಿಗೊಳಿಸಲು ಕ್ರಮ ವಹಿಸಬೇಕೆಂದು ತಿಳಿಸಿದರು.

ಬೇಸಿಗೆ ಪ್ರಾರಂಭವಾಗಿರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದರು.

ಈ ವೇಳೆ ತಾಪಂ ಇಒ ಸಿ. ಕೃಷ್ಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಕೈಲಾಶ್ ಮೂರ್ತಿ, ಎಇ ಮಂಜುನಾಥ್, ಪಿಆರ್ ಇಡಿ ಎಇಇ ಚರಿತಾ, ಪಿಡಿಒ ಶಶಿಕುಮಾರ್, ಕಾರ್ಯದರ್ಶಿ ಸುಧೀರ್, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಸೇರಿ ಅನೇಕರು ಇದ್ದರು.