ಹೈನುಗಾರಿಕೆ ಕೈಗೊಂಡು ಆರ್ಥಿಕ ಪ್ರಗತಿ ಸಾಧಿಸಲು ಮುಂದಾಗಿ: ಅರುಣ್ ಕುಮಾರ್

| Published : Jul 28 2024, 02:08 AM IST

ಹೈನುಗಾರಿಕೆ ಕೈಗೊಂಡು ಆರ್ಥಿಕ ಪ್ರಗತಿ ಸಾಧಿಸಲು ಮುಂದಾಗಿ: ಅರುಣ್ ಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರ ಜಾರಿಗೆ ತಂದಿರುವ ಅತ್ಮ ಯೋಜನೆಯಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ರೈತ ಮಹಿಳೆಯರು ಹಾಗೂ ಪುರುಷರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಬೇಕು. ಕೃಷಿ ಚಟುವಟಿಕೆಗೆ ಪೂರಕವಾದ ಹೈನುಗಾರಿಕೆ, ಕುರಿ, ಕೋಳಿ, ಮೀನು ಸಾಕಾಣಿಕೆ ಮಾಡಬೇಕು. ಇದರಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಬಹುದು. ಆಗ ದೇಶವೂ ಪ್ರಗತಿ ಹೊಂದುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

- ಕೃಷಿ ಇಲಾಖೆಯಿಂದ ಆತ್ಮ ಯೋಜನೆ ಮಾಹಿತಿ ಕಾರ್ಯಾಗಾರ - - - ಚನ್ನಗಿರಿ: ಸರ್ಕಾರ ಜಾರಿಗೆ ತಂದಿರುವ ಅತ್ಮ ಯೋಜನೆಯಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ರೈತ ಮಹಿಳೆಯರು ಹಾಗೂ ಪುರುಷರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಬೇಕು. ಕೃಷಿ ಚಟುವಟಿಕೆಗೆ ಪೂರಕವಾದ ಹೈನುಗಾರಿಕೆ, ಕುರಿ, ಕೋಳಿ, ಮೀನು ಸಾಕಾಣಿಕೆ ಮಾಡಬೇಕು. ಇದರಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಬಹುದು. ಆಗ ದೇಶವೂ ಪ್ರಗತಿ ಹೊಂದುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಹೇಳಿದರು.

ಶುಕ್ರವಾರ ಸಂಜೆ ಕೃಷಿ ಇಲಾಖೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024-25ನೇ ಸಾಲಿನ ಆತ್ಮ ಯೋಜನೆ ತಾಲೂಕುಮಟ್ಟದ ರೈತ ಸಲಹಾ ಸಮಿತಿ, ತಾಲೂಕು ಅನುಷ್ಠಾನ ಸಮಿತಿ, ಮತ್ತು ತೋಟಗಾರಿಕೆ, ಮೀನುಗಾರಿಕೆ, ಹೈನುಗಾರಿಕೆ ಪೂರಕ ಇಲಾಖೆಗಳ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.

ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ಕೃಷಿ ಚಟುವಟಿಕೆಗಳಿಂದಲೇ ಉತ್ತಮವಾದ ಆದಾಯವನ್ನು ಗಳಿಸುವ ರೈತರಿಗೆ ಇಲಾಖೆ ವತಿಯಿಂದ ಪ್ರಶಸ್ತಿ ಪುರಸ್ಕಾರಗಳನ್ನು ನೀಡಲಾಗುವುದು. ಆತ್ಮ ಯೋಜನೆಯಡಿ ದೊರೆಯಬಹುದಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀಕಾಂತ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್, ರೈತ ಸಲಹಾ ಸಮಿತಿಯ ಸದಸ್ಯರು ಹಾಗೂ ರೈತ ಮುಖಂಡರುಗಳು ಹಾಜರಿದ್ದರು.

- - - - -

-27ಕೆಸಿಎನ್ಜಿ1:

ಸಮಾರಂಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಮಾತನಾಡಿದರು.