ಕನ್ನಡಪ್ರಭ ವಾರ್ತೆ ಕೆ.ಆರ್. ನಗರಪ್ರತಿಯೊಬ್ಬ ಕಾರ್ಮಿಕನು ಕಾನೂನಿನ ಬಗ್ಗೆ ಸ್ಪಷ್ಟವಾದ ಅರಿವು ಹೊಂದುವುದರ ಜತೆಗೆ ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪಟ್ಟಣದ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಸಿ.ಅರವೀಂದ್ರ ಹೇಳಿದರು.ಪಟ್ಟಣದ ತಾಪಂ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ, ತಾಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ನಿಯಮಾನುಸಾರ ಕಾರ್ಮಿಕರನ್ನು ಮಾಲೀಕರು ತಮಗೆ ಇಷ್ಟ ಬಂದಂತೆ ದುಡಿಸಿಕೊಳ್ಳುವುದನ್ನು ವಿರೋಧಿಸಿ ಕಾರ್ಮಿಕ ಬಂಧುಗಳು ಒಂದುಗೂಡಿ ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಮತ್ತು ವೇತನ ನೀಡಬೇಕೆಂದು ಒಂದಾಗಿ ಹೋರಾಟ ಮಾಡಿ ಅದರಲ್ಲಿ ಜಯ ಸಾಧಿಸಿದ ದಿನವನ್ನು ಪ್ರತಿ ವರ್ಷ ಮೇ 1ರಂದು ಕಾರ್ಮಿಕ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.ಪ್ರತಿನಿತ್ಯ ಕಾರ್ಮಿಕ ಬಂಧುಗಳು ಮತ್ತು ಶ್ರಮ ಜೀವಿಗಳು ಕೆಲಸ ಮಾಡುವ ಸ್ಥಳದಲ್ಲಿ ಅಗತ್ಯ ಸವಲತ್ತು ಮತ್ತು ಅನುಕೂಲ ದೊರೆಯದೆ ಅಡಚಣೆ, ಅಪಮಾನ, ದೌರ್ಜನ್ಯ, ವಂಚನೆ ನಡೆದಲ್ಲಿ ಕಾರ್ಮಿಕ ಇಲಾಖೆ ಮತ್ತು ನ್ಯಾಯಾಲಯದ ಮೊರೆ ಹೋಗಿ ಸೂಕ್ತ ಅನುಕೂಲ ಪಡೆಯಬಹುದು ಎಂದು ಸಲಹೆ ನೀಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಎಸ್. ಚಂದನ್ ಮಾತನಾಡಿ, ಕಾನೂನು ಕಾಲದಿಂದ ಕಾಲಕ್ಕೆ ಬದಲಾಗುತ್ತಿದ್ದು, ಅದನ್ನು ಅರಿತು ಪ್ರತಿಯೊಬ್ಬ ಪ್ರಜೆಯು ಸಂವಿಧಾನ ಮತ್ತು ಕಾನೂನನ್ನು ಗೌರವಿಸಿ ಇತರರಿಗೂ ಆ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾರ್ಗದರ್ಶನ ಮಾಡಿದರು. ತಹಸೀಲ್ದಾರ್ ಜಿ. ಸುರೇಂದ್ರಮೂರ್ತಿ, ಎಸ್.ಎನ್. ನರಗುಂದ್, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ. ನಟರಾಜ್, ಕಾರ್ಮಿಕ ನಿರೀಕ್ಷಕ ಎಚ್.ಕೆ. ಗೋವಿಂದರಾಜ್ ಯಾಧವ್, ವಕೀಲೆ ವೇದಾವತಿ ಮಾತನಾಡಿ, ಕಾರ್ಮಿಕರಿಗೆ ಸರ್ಕಾರಿ ಸವಲತ್ತು ಪಡೆಯುವ ಬಗ್ಗೆ ತಿಳಿಸಿದರು. ಕಾರ್ಮಿಕ ಇಲಾಖೆಯ ಸಹಾಯಕ ಚಂದ್ರಕಾಂತ್ ಸೇರಿದಂತೆ ಮತ್ತು ಇತರ ಇಲಾಖೆಯ ಅಧಿಕಾರಿಗಳು ಇದ್ದರು.
ಪ್ರತಿ ಕಾರ್ಮಿನಿಗೆ ಕಾನೂನು ಅರಿವು ಅತ್ಯಗತ್ಯ
ಸರ್ಕಾರದ ನಿಯಮಾನುಸಾರ ಕಾರ್ಮಿಕರನ್ನು ಮಾಲೀಕರು ತಮಗೆ ಇಷ್ಟ ಬಂದಂತೆ ದುಡಿಸಿಕೊಳ್ಳುವುದನ್ನು ವಿರೋಧಿಸಿ ಕಾರ್ಮಿಕ ಬಂಧುಗಳು ಒಂದುಗೂಡಿ ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಮತ್ತು ವೇತನ ನೀಡಬೇಕೆಂದು ಒಂದಾಗಿ ಹೋರಾಟ ಮಾಡಿ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.