ತರಳಬಾಳು ಶಿಕ್ಷಣ ಕೇಂದ್ರದಲ್ಲಿ ಪ್ರತಿಭಾ ಪುರಸ್ಕಾರ

| Published : Jun 25 2024, 12:37 AM IST

ಸಾರಾಂಶ

ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಟಿ.ಕೆ. ಬಡಾವಣೆಯಲ್ಲಿರುವ ತರಳಬಾಳು ಶಿಕ್ಷಣ ಕೇಂದ್ರದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು.

ನಿವೃತ್ತ ಪ್ರಾಂಶುಪಾಲ ಪ್ರೊ.ಎಂ. ನಟರಾಜ್ ಉದ್ಘಾಟಿಸಿದರು. ಮುಖ್ಯಅತಿಥಿಯಾಗಿ ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಸ್ಥಳೀಯ ಸಲಹಾ ಸಮಿತಿ ಸದಸ್ಯರು, ಡಾ. ವಸಂತಕುಮಾರ್ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಿ. ನಾಗೇಂದ್ರಪ್ಪ ವಹಿಸಿದ್ದರು. ಮುಖ್ಯೋಪಾಧ್ಯಾಯರಾದ ಆನಂದಪ್ಪ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಮೈಸೂರು ವಿಶ್ವವಿದ್ಯಾನಿಲಯದಿಂದ ನುರಿತ ಯೋಗ ಶಿಕ್ಷಕಿಯರು ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗಾಸನ ತರಬೇತಿ ನೀಡಿದರು.