ದೇಗುಲ ಲೋಕಾರ್ಪಣೆ ಕಾರ್ಯಕ್ರಮ

| Published : Feb 23 2025, 12:33 AM IST

ಸಾರಾಂಶ

ಜೀರ್ಣೋದ್ಧಾರಗೊಂಡ ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇಗುಲ ಲೋಕಾರ್ಪಣೆ ಮತ್ತು ಶ್ರೀ ಚಂಡಿಕೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆಯ ಕಳಸ ಕುಂಭಾಭಿಷೇಕ ಫೆ 23ಬರ ಭಾನುವಾರ, ಸೋಮವಾರ ನಡೆಯಲಿದೆ. ಡಾ. ವೀರೇಂದ್ರ ಹೆಗ್ಗಡೆ, ನುಗ್ಗೇಹಳ್ಳಿ ಪುರ ವರ್ಗ ಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಕತ್ತರಿ ಘಟ್ಟ ಮಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ್ ಗುರೂಜಿ, ತಾಲೂಕು ಮುಜರಾಯಿ ಅರ್ಕರ ಸಂಘದ ಅಧ್ಯಕ್ಷ ಶ್ರೀಧರ್ ಮೂರ್ತಿ, ಶಾಸಕ ಸಿ.ಎನ್. ಬಾಲಕೃಷ್ಣ, ಇತರರು ಪಾಲ್ಗೊಳ್ಳಲಿದ್ದಾರೆ.

ನುಗ್ಗೇಹಳ್ಳಿ: ಹೋಬಳಿಯ ಜೀರ್ಣೋದ್ಧಾರಗೊಂಡ ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇಗುಲ ಲೋಕಾರ್ಪಣೆ ಮತ್ತು ಶ್ರೀ ಚಂಡಿಕೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆಯ ಕಳಸ ಕುಂಭಾಭಿಷೇಕ ಫೆ 23ಬರ ಭಾನುವಾರ, ಸೋಮವಾರ ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ನುಗ್ಗೇಹಳ್ಳಿ ಪುರ ವರ್ಗ ಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಕತ್ತರಿ ಘಟ್ಟ ಮಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ್ ಗುರೂಜಿ, ತಾಲೂಕು ಮುಜರಾಯಿ ಅರ್ಕರ ಸಂಘದ ಅಧ್ಯಕ್ಷ ಶ್ರೀಧರ್ ಮೂರ್ತಿ, ಶಾಸಕ ಸಿ.ಎನ್. ಬಾಲಕೃಷ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಬಿಜೆಪಿ ಮುಖಂಡ ಸಿ.ಆರ್‌. ಚಿದಾನಂದ್, ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಖಾನೆ ನಿಗಮದ ಅಧ್ಯಕ್ಷ ಲಲಿತ ರಾಘವ್, ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಠ್ಠಲ್ ಕುಮಾರ್, ಮತ್ತಿತರರು ಭಾಗವಹಿಸಲಿದ್ದಾರೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.